
ಕಾಳಧನ ಎಂದರೆ ಅಕ್ರಮವಾಗಿ ಕೂಡಿಟ್ಟ ಹಣ. ಲಂಚ, ವಂಚನೆ, ಇತರೆ ಕ್ರೈಂಗಳ ಮೂಲಕ ಸಂಗ್ರಹವಾದ ನಗದು ಹಣವನ್ನು ಬ್ಲ್ಯಾಕ್ ಮನಿ ಎನ್ನಬಹುದಾದರೆ ಈ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ರೀತಿಯಲ್ಲಿ ತೋರಿಸುವುದನ್ನೇ ಮನಿ ಲಾಂಡ್ರಿಂಗ್ ಎನ್ನಲಾಗುತ್ತದೆ.
ಕಾಳಧನಕ್ಕೆ ಯಾವುದೇ ತೆರಿಗೆ ಕಟ್ಟುವುದಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಜಾರಿ ನಿರ್ದೇಶನಾಲಯ, ತೆರಿಗೆ ಇಲಾಖೆ ಕಣ್ಣಿಗೆ ಬಿದ್ದು ಹಣ ಜಪ್ತಿಯಾಗುವ ಭೀತಿ ಎದುರಾದಾಗ ಡರ್ಟಿ ಮನಿಯನ್ನು ಸ್ವಚ್ಛ ನಗದಾಗಿ ಪರಿವರ್ತಿಸಲು ಮನಿ ಲಾಂಡ್ರಿಂಗ್ ಬಳಸಲಾಗುತ್ತದೆ.
ಕರ್ನಾಟಕದಲ್ಲಿ ಗಣಿಗಾರಿಕೆ ದುಡ್ಡು, ಹಲವು ರಾಜಕಾರಣಿಗಳು ಮನಿ ಲಾಂಡ್ರಿಂಗ್ ನಲ್ಲಿ ಭಾಗಿಯಾಗಿರುವ ಬಗ್ಗೆ ಕೇಳಿರುತ್ತೀರಿ. ಇತ್ತೀಚೆಗೆ ಮನಿ ಲಾಂಡ್ರಿಂಗ್ ಖಾಸಗಿ ಬ್ಯಾಂಕಿಂಗ್ ವಲಯವನ್ನು ತಲ್ಲಣಗೊಳಿಸಿದೆ. ಅಕ್ರಮ ಹಣ ಸಂಗ್ರಹ, ರವಾನೆ ತಡೆಗಟ್ಟಲು ನಿಯಂತ್ರಣ ಸಂಸ್ಥೆಗಳು ಕಠಿಣ ಕ್ರಮಗಳನ್ನು ಜರುಗಿಸುತ್ತಿವೆ.
ಆದರೆ, ಮನಿ ಲಾಂಡ್ರಿಂಗ್ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ಜಾಗತಿಕ ಪಿಡುಗಾಗಿದೆ. ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮವನ್ನು ಬೀರಿದೆ. ಮನಿಲಾಂಡ್ರಿಂಗ್ ಪರಿಣಾಮದ ಬಗ್ಗೆ ಸ್ವಲ್ಪ ತಿಳಿದು ಕೊಳ್ಳೋಣ
ಮನಿ ಲಾಂಡ್ರಿಂಗ್ ಆರ್ಥಿಕವಾಗಿ ಭಾರಿ ಪರಿಣಾಮ ಬೀರುತ್ತದೆ. ಲಾಂಡ್ರಿಂಗ್ ಆದ ಹಣಕ್ಕೆ ಯಾವುದೇ ತೆರಿಗೆ ಪಾವತಿ ಆಗಿರುವುದಿಲ್ಲ. ಹೀಗಾಗಿ ಅದು ಲೆಕ್ಕಕ್ಕೆ ಸಿಗುವುದಿಲ್ಲ. ಕಾನೂನು ವ್ಯಾಪ್ತಿಗೆ ಒಳಪಡುವ ಸಂಸ್ಥೆಗಳ ಮೂಲಕ ಈ ಹಣ ಎಲ್ಲೆಡೆ ಹರಿದಾಡುತ್ತದೆ. ಆದರೆ, ಮನಿ ಲಾಂಡ್ರಿಂಗ್ ಲಾಭ ಪಡೆಯುತಿರುವ ಕಂಪನಿಗಳು ಅಕಸ್ಮಾತ್ ಸಿಕ್ಕಿಬಿದ್ದರೆ ಅಥವಾ ದಿವಾಳಿಯಾದರೆ ಅಲ್ಲಿಗೆ ಕಥೆ ಮುಗಿದ ಹಾಗೆ ಲೆಕ್ಕ.
ಕಂಪನಿಯಾಗಲಿ, ಮನಿ ಲಾಂಡ್ರಿಂಗ್ ಮಾಡಿದ ವ್ಯಕ್ತಿಯಾಗಲಿ ಹೂಡಿಕೆ ಮಾಡಿದ ಹಣ ಯಾವುದೇ ಆರ್ಥಿಕ ಲಾಭ ಸಿಗದೆ ದೇಶಕ್ಕೆ ಹೊರೆಯಾಗುತ್ತದೆ. ತೆರಿಗೆ ಕೂಡಾ ಕಟ್ಟಿಲ್ಲದಿರುವುದರಿಂದ ಅನಗತ್ಯ ಆರ್ಥಿಕ ಹೊರೆ ಭಾರ ಜನ ಸಾಮಾನ್ಯರ ಮೇಲೂ ಬೀಳುತ್ತದೆ.
ಮನಿ ಲಾಂಡ್ರಿಂಗ್ ನಿಂದಾಗಿ ಸುಳ್ಳು ಸುಳ್ಳೆ ಬೇಡಿಕೆ ಹೆಚ್ಚಳ ಹಾಗೂ ಪೂರೈಕೆ ಬೇಡಿಕೆ ಹೆಚ್ಚಾಗುತ್ತದೆ. ಇದರಿಂದ ಆರ್ಥಿಕ ಸಾಮಾಜಿಕ ಸಮತೋಲನ ವ್ಯತ್ಯಯವಾಗುತ್ತದೆ. ದೇಶದ ಜಿಡಿಪಿ, ಆಮದು ರಫ್ತು ಸೇರಿದಂತೆ ಅನೇಕ ಅಂಶಗಳ ಮೇಲೆ ನೇರ ಪರಿಣಾಮ ಬೀರುತ್ತದೆ. ಹಲವು ಕ್ರಿಮಿನಲ್ ಮೂಲಗಳಿಂದ ಸಂಗ್ರಹವಾದ ಹಣ ಲಾಂಡ್ರಿಂಗ್ ಆದಮೇಲೆ ಇನ್ನಷ್ಟು ಕ್ರಿಮಿನಲ್ ಚಟುವಟಿಕೆಗಳಿಗೆ ಉತ್ತೇಜಿಸುವ ಸಾಧ್ಯತೆ ಅಧಿಕವಾಗಿದೆ. ಯಾವುದೇ ದೇಶವಿರಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಮನಿ ಲಾಂಡ್ರಿಂಗ್ ದೊಡ್ಡ ಪಿಡುಗಾಗಿ ಪರಿಣಮಿಸಿದ್ದು, ಭ್ರಷ್ಟಾಚಾರದ ಬೇರಾಗಿ ಎಲ್ಲೆಡೆ ವ್ಯಾಪಿಸುತ್ತಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications