ಕೇಂದ್ರ ಸರ್ಕಾರ ಮಂಗಳವಾರ ಮಧ್ಯರಾತ್ರಿಯಿಂದಲೇ ರೂ. 500, 1000 ಮುಖಬೆಲೆಯ ನೋಟುಗಳ ಚಲಾವಣೆ ರದ್ದುಪಡಿಸಿದ್ದು, ಕಪ್ಪುಹಣ, ಖೋಟಾ ನೋಟು, ಭ್ರಷ್ಟಾಚಾರ, ಭಯೋತ್ಪಾಧನೆ ತಡೆಗೆ ಮಹತ್ವದ ಹೆಜ್ಜೆ ಇಟ್ಟಿದೆ.
ದೇಶದ ಅರ್ಥವ್ಯವಸ್ಥೆ ಒಂದು ಮಹಾ ಕ್ರಾಂತಿಗೆ ಮುನ್ನುಡಿ ಬರೆದಿದೆ. ಕೇಂದ್ರ ಸರ್ಕಾರ ಮಂಗಳವಾರ ಮಧ್ಯರಾತ್ರಿಯಿಂದಲೇ ರೂ. 500, 1000 ಮುಖಬೆಲೆಯ ನೋಟುಗಳ ಚಲಾವಣೆ ರದ್ದುಪಡಿಸಿದ್ದು, ಕಪ್ಪುಹಣ, ಖೋಟಾ ನೋಟು, ಭ್ರಷ್ಟಾಚಾರ, ಭಯೋತ್ಪಾಧನೆ ತಡೆಗೆ ಮಹತ್ವದ ಹೆಜ್ಜೆ ಇಟ್ಟಿದೆ.
ಕಳೆದ ಕೆಲ ವರ್ಷಗಳಿಂದ ಕಪ್ಪುಹಣ, ಖೋಟಾ ನೋಟು, ಭ್ರಷ್ಟಾಚಾರ ನಿಯಂತ್ರಣ ಕುರಿತು ಹಲವು ಚರ್ಚೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿಯೇ ಅನಿರೀಕ್ಷಿತವಾಗಿ ಮೊದಲ ಬಾರಿ ಸುದ್ದಿ ವಾಹಿನಿಗಳ ಮೂಲಕ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿ, ರೂ. 500, 1000 ಮುಖಬೆಲೆಯ ನೋಟುಗಳ ಚಲಾವಣೆ ನಿರ್ಬಂಧಿಸುವ ನಿರ್ಧಾರ ಪ್ರಕಟಿಸಿದರು.
500, 1000 ನೋಟುಗಳ ರದ್ದತಿ ಹಿನ್ನೆಲೆಯಲ್ಲಿ ಜನಸಾಮಾನ್ಯರು ಮಾಡಬೇಕಾದ ಹಾಗೂ ತಿಳಿದುಕೊಳ್ಳಬೇಕಾದ ಕೆಲ ಪ್ರಮುಖ ಅಂಶಗಳು ಇಲ್ಲಿವೆ ನೋಡಿ....
1. ಹಳೆ ನೋಟುಗಳನ್ನು ಏನು ಮಾಡಬೇಕು?
ಯಾರು ರೂ. 500, 1000 ಮುಖಬೆಲೆಯ ನೋಟುಗಳನ್ನು ಹೊಂದಿದ್ದಾರೆ ಅವರು ನೋಟುಗಳನ್ನು ಬ್ಯಾಂಕುಗಳಿಗೆ ಮತ್ತು ಪೋಸ್ಟ್ ಆಫೀಸ್ ಗಳಲ್ಲಿನ ಖಾತೆಗಳಿಗೆ ಜಮಾವಣೆ ಮಾಡಬೇಕಾಗುತ್ತದೆ. ರೂ. 500, 1000 ಮುಖಬೆಲೆಯ ನೋಟುಗಳ ಜಮಾವಣೆಗೆ ನವೆಂಬರ್ 10 ರಿಂದ ಡಿಸೆಂಬರ್ 30 ರವರೆಗೆ ಸಮಯವಕಾಶ ಕಲ್ಪಿಸಲಾಗಿದೆ.
2. ಬದಲಾವಣೆಗೆ ಅವಕಾಶ ಇದೆಯೆ?
ಸಾರ್ವಜನಿಕರು ತಮ್ಮ ಬಳಿ ಹೊಂದಿರುವ ರೂ. 500, 1000 ಮುಖಬೆಲೆಯ ನೋಟುಗಳನ್ನು ಬ್ಯಾಂಕು ಅಥವಾ ಪೋಸ್ಟ್ ಆಫೀಸ್ ಗಳ ಮೂಲಕ ನೋಟುಗಳ ವಿನಿಮಯ ಮಾಡಿಕೊಳ್ಳಬಹುದಾಗಿದೆ. ನೋಟುಗಳನ್ನು ಬದಲಾವಣೆ ಮಾಡಿಕೊಳ್ಳುವಾಗ ಪ್ಯಾನ್ ಕಾರ್ಡ್, ಆಧಾರ್ ನಂಬರ್, ಮತದಾರರ ಚೀಟಿ ಮುಂತಾದ ದಾಖಲಾತಿಗಳನ್ನು ನೀಡುವುದು ಕಡ್ಡಾಯ ಮಾಡಿದೆ. ಒಂದು ದಿನಕ್ಕೆ ಒಬ್ಬ ವ್ಯಕ್ತಿ ನಾಲ್ಕು ಸಾವಿರ ಮೊತ್ತದ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
3. ಹೊಸ ನೋಟು ಚಲಾವಣೆ
ಪ್ರಧಾನಿ ಮೋದಿ ಮಂಗಳವಾರ ಮಾಡಿದ ಭಾಷಣದಲ್ಲಿ ರೂ. 500, 1000 ಮುಖಬೆಲೆಯ ನೋಟುಗಳು ಅತಿ ಶೀಘ್ರದಲ್ಲಿಯೇ ಚಲಾವಣೆಗೆ ಬರಲಿವೆ ಎಂದು ಭರವಸೆ ನೀಡಿದ್ದಾರೆ. ಈ ನೋಟುಗಳು ಗುರುವಾರದಿಂದಲೇ ಚಾಲ್ತಿಗೆ ಬರುವ ನಿರೀಕ್ಷೆ ಇದೆ ಎನ್ನಲಾಗಿದೆ. ರೂ. 100 ಮುಖಬೆಲೆಯ ನೋಟುಗಳು ಮತ್ತು ಅದಕ್ಕಿಂತ ಕಡಿಮೆ ಬೆಲೆಯ ನೋಟು ಹಾಗೂ ನಾಣ್ಯಗಳು ಚಲಾವಣೆಯಲ್ಲಿ ಇರುತ್ತವೆ.
4. ಎಟಿಎಂನಿಂದ ಹಣ ಪಡೆಯುವ ಮಿತಿ ಎಷ್ಟು?
ಇದು ತುಂಬಾ ಮುಖ್ಯ ವಿಚಾರವಾಗಿದೆ. ಬ್ಯಾಂಕಿನಿಂದ ಡ್ರಾ ಮಾಡಿಕೊಳ್ಳಬಹುದಾದ ಮೊತ್ತದ ಮೇಲೆ ಸರ್ಕಾರ ನಿಯಮಗಳನ್ನು ಹಾಕಿದೆ.
- ಒಂದು ದಿನಕ್ಕೆ ಎಟಿಎಂನಿಂದ ಗರಿಷ್ಠ ರೂ. 2000 ಮಾತ್ರ ಡ್ರಾ ಮಾಡಿಕೊಳ್ಳಬಹುದು. ಬರುವ ದಿನಗಳಲ್ಲಿ ಇದರ ಪ್ರಮಾಣ ರೂ. 4000 ಹೆಚ್ಚಿಸುವ ನಿರೀಕ್ಷೆ ಇದೆ.
- ಒಂದು ದಿನಕ್ಕೆ ಬ್ಯಾಂಕುಗಳಿಂದ ಗ್ರಾಹಕರು ಗರಿಷ್ಠ ರೂ. 10000 ಹಾಗೂ ಒಂದು ವಾರಕ್ಕೆ ರೂ. 20000 ಗಳನ್ನು ಡ್ರಾ ಮಾಡಿಕೊಳ್ಳಬಹುದು.
- ಹಣ ಡ್ರಾ ಮಾಡಿಕೊಳ್ಳಲು ಸರ್ಕಾರ ವಿಧಿಸಿರುವ ಮಿತಿಗಳನ್ನು ಬರುವ ದಿನಗಳಲ್ಲಿ ಏರಿಸಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.
5. ಬ್ಯಾಂಕು ವ್ಯವಹಾರ ಸ್ಥಗಿತ
ರೂ. 500, 1000 ನೋಟುಗಳ ರದ್ದತಿ ಹಿನ್ನೆಲೆಯಲ್ಲಿ ಬ್ಯಾಂಕುಗಳು ಬುಧವಾರ ವ್ಯವಹಾರಗಳನ್ನು ನಡೆಸುವುದಿಲ್ಲ. ಬದಲಿಗೆ ಹೆಚ್ಚುವರಿ ಕೌಂಟರ್ ಗಳ ಮೂಲಕ ಹಳೆ ನೋಟುಗಳ ರದ್ದತಿ ಹಾಗೂ ಹೊಸ ನೋಟುಗಳ ಚಲಾವಣೆಗಾಗಿ ಕಾರ್ಯನಿರ್ವಹಿಸಲಿದೆ. ಜತೆಗೆ ಬುಧವಾರ ಹಾಗೂ ಗುರುವಾರ ಎಟಿಎಂ ಯಂತ್ರಗಳು ತೆರೆದಿರುವುದಿಲ್ಲ ಎಂಬುದನ್ನು ಸಾರ್ವಜನಿಕರು ಗಮನಿಸಬೇಕು.
6. ನೋಟುಗಳ ಚಲಾವಣೆಗೆ ಅವಕಾಶ ಎಲ್ಲಿ?
ರೂ. ರೂ. 500, 1000 ಮುಖಬೆಲೆಯ ನೋಟುಗಳ ಚಲಾವಣೆಗೆ ಆಸ್ಪತ್ರೆ, ಪೆಟ್ರೋಲ್ ಬಂಕ್, ಸರ್ಕಾರಿ ಬಸ್ ಟಿಕೆಟ್ ಬುಕಿಂಗ್, ರೇಲ್ವೆ ಮತ್ತು ವಿಮಾನ ಟಿಕೆಟ್ ಬುಕಿಂಗ್ ಕೌಂಟರ್ ಗಳಲ್ಲಿ ಅವಕಾಶ ನೀಡಲಾಗಿದೆ. ಇದಕ್ಕೆ ನವೆಂಬರ್ 11 ರ ಮಧ್ಯರಾತ್ರಿವರೆಗೆ ಸಮಯವಕಾಶ ಒದಗಿಸಲಾಗಿದೆ.
7. ಮಿತಿಯಿಲ್ಲದ ವ್ಯವಹಾರ
ಎಟಿಎಂ ಮತ್ತು ಬ್ಯಾಂಕು ವಹಿವಾಟಿಗೆ ಮಿತಿ ನಿರ್ಬಂಧಿಸಲಾಗಿದೆ ಆದರೆ ಚೆಕ್, ಡಿಡಿ, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡುಗಳ ಮೂಲಕ ನಡೆಸುವ ವ್ಯವಹಾರಗಳಿಗೆ ಯಾವುದೇ ಮಿತಿಗಳು ಇರುವುದಿಲ್ಲ. ಜತೆಗೆ ವಿದ್ಯುನ್ಮಾನ ಹಣ ವರ್ಗಾವಣೆಗೆ ಯಾವುದೇ ನಿರ್ಬಂಧ ಇರುವುದಿಲ್ಲ.
8. ಹಾಗಿದ್ದರೆ ನೀವೇನು ಮಾಡಬೇಕು?
- ಬ್ಯಾಂಕು ಅಥವಾ ಪೋಸ್ಟ್ ಆಫೀಸ್ ಗಳ ಖಾತೆಗೆ ರೂ. 500, 1000 ಮುಖಬೆಲೆಯ ನೋಟುಗಳನ್ನು ಡಿಸೆಂಬರ್ 30ರ ವರೆಗೆ ಜಮಾ ಮಾಡಬಹುದು.
- ಪಾನ್ ಕಾರ್ಡ್, ಆಧಾರ್ ನಂಬರ್ ಅಥವಾ ಮತದಾರರ ಚೀಟಿ ಒಂದನ್ನು ತೋರಿಸುವುದರ ಮೂಲಕ ಬ್ಯಾಂಕು ಅಥವಾ ಪೋಸ್ಟ್ ಆಫೀಸ್ ಗಳಲ್ಲಿ ನೋಟುಗಳನ್ನು ಬದಲಾಯಿಸಿಕೊಳ್ಳಬಹುದು.
- ಒಂದು ದಿನಕ್ಕೆ ಹೆಚ್ಚೆಂದರೆ ರೂ. 4000 ವರೆಗೆ ನೋಟುಗಳನ್ನು ಬದಲಾಯಿಸಿಕೊಳ್ಳಬಹುದು. ಮತ್ತೆ ಬದಲಾಯಿಸಿಕೊಳ್ಳಬೇಕೆಂದರೆ ಇನ್ನೊಂದು ದಿನ ಹೋಗಬಹುದು.
- ಒಂದು ದಿನಕ್ಕೆ ಎಟಿಎಂನಿಂದ ಗರಿಷ್ಠ ರೂ. 2000, ಬ್ಯಾಂಕುಗಳಿಂದ ಗರಿಷ್ಠ ರೂ. 10000 ಹಾಗೂ ಒಂದು ವಾರಕ್ಕೆ ರೂ. 20000 ಗಳನ್ನು ಡ್ರಾ ಮಾಡಿಕೊಳ್ಳಬಹುದು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications