ಪ್ರಧಾನಮಂತ್ರಿ ಜನಧನ ಯೋಜನೆ ಎಂದರೇನು?

ದೇಶದ ಪ್ರತಿಯೊಬ್ಬರಿಗೂ ಎಲ್ಲ ಬಗೆಯ ಬ್ಯಾಂಕಿಂಗ್ ಸೌಲಭ್ಯಗಳನ್ನು ಕಲ್ಪಿಸುವುದು ಜನಧನ ಯೋಜನೆಯ ಪ್ರಮುಖ ಧ್ಯೇಯವಾಗಿದೆ. ಈ ಯೋಜನೆ ಅಡಿಯಲ್ಲಿ ಬ್ಯಾಂಕ್ ಖಾತೆ, ವಿಮೆ ಮತ್ತು ಡೆಬಿಟ್ ಕಾರ್ಡ್ ಸೌಲಭ್ಯಗಳನ್ನು ಕಲ್ಪಿಸುವ ಗುರಿ ಹೊಂದಿದೆ.

ದೇಶದ ಪ್ರತಿಯೊಬ್ಬರಿಗೂ ಎಲ್ಲ ಬಗೆಯ ಬ್ಯಾಂಕಿಂಗ್ ಸೌಲಭ್ಯಗಳನ್ನು ಕಲ್ಪಿಸುವುದು ಜನಧನ ಯೋಜನೆಯ ಪ್ರಮುಖ ಧ್ಯೇಯವಾಗಿದೆ. ಈ ಯೋಜನೆ ಅಡಿಯಲ್ಲಿ ಬ್ಯಾಂಕ್ ಖಾತೆ, ವಿಮೆ ಮತ್ತು ಡೆಬಿಟ್ ಕಾರ್ಡ್ ಸೌಲಭ್ಯಗಳನ್ನು ಕಲ್ಪಿಸುವ ಗುರಿ ಹೊಂದಿದೆ.

ಪ್ರಧಾನಮಂತ್ರಿ ಜನಧನ ಯೋಜನೆ ಎಂದರೇನು?

ಜನಧನ ಯೋಜನೆಯ ಧ್ಯೇಯ ಮತ್ತು ಉದ್ದೇಶ:

1. ಮೂಲಭೂತವಾಗಿ ಅಪಘಾತ ವಿಮೆ, ಡೆಬಿಟ್ ಕಾರ್ಡ್, ಅಪಘಾತ ವಿಮೆ ಹೀಗೆ ಎಲ್ಲ ಬಗೆಯ ಬ್ಯಾಂಕಿಂಗ್‌ ಕ್ಷೇತ್ರದ ಸೌಲಭ್ಯಗಳನ್ನು ಯೋಜನೆ ಒಳಗೊಂಡಿದೆ.
2. ಆಧಾರ್‌ ಕಾರ್ಡ್ ಸಂಬಂಧಿತ ಐದು ಸಾವಿರಕ್ಕೂ ಹೆಚ್ಚು ಬ್ಯಾಂಕ್‌ ಖಾತೆಗಳಿಗೆ ಓವರ್‌ ಡ್ರಾಪ್ಟ್‌ ಸೌಲಭ್ಯ ಕಲ್ಪಿಸಲಾಗುವುದು.
3. ರುಪೇ ಕಾರ್ಡ್(ಡೊಮೆಸ್ಟಿಕ್ ಡೆಬಿಟ್ ಕಾರ್ಡ್) ಸೇವೆಯನ್ನು ನಗರ ಮತ್ತು ಗ್ರಾಮೀಣ ಜನತೆಗೆ ಒದಗಿಸುವುದು.
4. ಆರು ತಿಂಗಳ ನಂತರ ರುಪೇ ಡೆಬಿಟ್ ಕಾರ್ಡ್ ರೂ. 1 ಲಕ್ಷ ವರೆಗಿನ ಅಪಘಾತ ವಿಮೆ ಒಳಗೊಂಡಿರುತ್ತದೆ.
5. ಖಾತೆದಾರ ವ್ಯಕ್ತಿ 6 ತಿಂಗಳ ನಂತರ ರೂ. 5000 ಓವರ್‌ ಡ್ರಾಪ್ಟ್‌ಗೆ ಭಾಜನನಾಗುತ್ತಾನೆ.
6. ಬ್ಯಾಂಕ್‌ ಖಾತೆ ಹೊಂದಿರದ 7.5 ಕೋಟಿ ಜನರಿಗೆ ಬ್ಯಾಂಕಿಂಗ್‌ ಸೌಲಭ್ಯ ಕಲ್ಪಿಸುವುದು.
7. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯ ಹೊಸ ತಂತ್ರಜ್ಞಾನ ಪರಿಚಯಿಸಿದ್ದು, ಸ್ಮಾರ್ಟ್ ಫೋನ್ ಇಲ್ಲದವರು ಸಾಮಾನ್ಯ ಫೋನ್ ಬಳಸಿ ಫಂಡ್ಸ್ ವರ್ಗಾವಣೆ ಮತ್ತು ಬ್ಯಾಲೆನ್ಸ್ ಚೆಕ್ ಮಾಡಬಹುದು.
8. ಜನಧನ ಯೋಜನೆ ಮುಖಾಂತರ ಬಡವರಿಗೆ ಮೊಬೈಲ್ ಬ್ಯಾಂಕಿಂಗ್ ಸೇವೆ ಒದಗಿಸುವುದು.

ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಮತ್ತು ಬಡ ಜನರನ್ನು ಮುಖ್ಯ ವಾಹಿನಿಗೆ ಕರೆತರುವಲ್ಲಿ ಜನಧನ ಯೋಜನೆ ಪ್ರಮುಖ ಪಾತ್ರ ನಿರ್ವಹಿಸಲಿದೆ. ದೇಶದ ಬಡ ಮತ್ತು ಅತಿ ಬಡ ವರ್ಗದವರಿಗೆ ಜನಧನ ಯೋಜನೆ ಮುಖಾಂತರ ಬ್ಯಾಂಕ್‌ ಖಾತೆ ಹೊಂದಲು ಅವಕಾಶವಿದೆ. ದೇಶದ ಕೋಟ್ಯಂತರ ಕುಟುಂಬಗಳು ಮೊಬೈಲ್‌ ಹೊಂದಿವೆ. ಆದರೆ ಬ್ಯಾಂಕ್‌ ಖಾತೆ ಹೊಂದಿಲ್ಲ. ದೇಶದ ಆರ್ಥಿಕ ಅಭಿವೃದ್ಧಿಗಾಗಿ ಇಂತಹ ಪರಿಸ್ಥಿತಿಯ ಬದಲಾವಣೆ ಮಾಡಬೇಕಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+