ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆಯನ್ನು(Sukanya Samriddhi Scheme) ಆರಂಭಿಸಿದೆ. ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಮದುವೆಯ ಸಂದರ್ಭದಲ್ಲಿ ಪಾಲಕರನ್ನು ಪ್ರೋತ್ಸಾಹಿಸುವುದು ಈ ಉಳಿತಾಯ ಖಾತೆಯ ಪ್ರಮುಖ ಉದ್ದೇಶವಾಗಿದೆ.
ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆಯನ್ನು(Sukanya Samriddhi Scheme) ಆರಂಭಿಸಿದೆ. ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಮದುವೆಯ ಸಂದರ್ಭದಲ್ಲಿ ಪಾಲಕರನ್ನು ಪ್ರೋತ್ಸಾಹಿಸುವುದು ಈ ಉಳಿತಾಯ ಖಾತೆಯ ಪ್ರಮುಖ ಉದ್ದೇಶವಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಯಾವುದೇ ಬ್ಯಾಂಕು ಅಥವಾ ಅಂಚೆ ಕಚೇರಿಗಳಲ್ಲಿ ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆ: ಸರ್ಕಾರದ 8 ಹೊಸ ನಿಯಮಗಳು ಅನ್ವಯ
ಸುಕನ್ಯಾ ಸಮೃದ್ಧಿ ಯೋಜನೆಯ ಅರ್ಜಿಯನ್ನು ಆನ್ ಲೈನ್ ಮುಖಾಂತರ ಡೌನ್ ಲೋಡ್ ಮಾಡಿಕೊಂಡು, ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನೀಡಬೇಕಾಗುತ್ತದೆ. ಅಗತ್ಯ ಭಾವಚಿತ್ರಗಳೊಂದಿಗೆ ಅಂಚೆ ಕಚೇರಿಗೆ ಸಲ್ಲಿಕೆ ಮಾಡಬೇಕಾಗುತ್ತದೆ. ಅಂಚೆ ಕಚೇರಿಯಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಖಾತೆ ಹೇಗೆ ತೆರೆಯಬೇಕು ಎಂಬುದಕ್ಕೆ ಉತ್ತರ ಇಲ್ಲಿದೆ ನೋಡಿ...
1. ಏನು ಮಾಡಬೇಕು?
* ಅಪ್ಲಿಕೇಶನ್ ಫಾರ್ಮ್ ಭರ್ತಿ ಮಾಡಬೇಕು
* ಗುರುತಿನ ಚೀಟಿ ಮತ್ತು ವಿಳಾಸ ದೃಢೀಕರಣ ದಾಖಲಾತಿ ತೆಗೆದುಕೊಂಡು ಹೋಗಿ
* ಆಧಾರ್ ಕಾರ್ಡ್ ಹೊಂದಿದ್ದರೆ ಒಳಿತು
* ಹೆಣ್ಣು ಮಗುವಿನ ಜನ್ಮ ದಾಖಲೆ ಅಗತ್ಯ
* ಹೆಣ್ಣು ಮಗುವಿನ ಪಾಲಕರ ಫೋಟೋ ಅಗತ್ಯ
ಸುಕನ್ಯಾ ಸಮೃದ್ಧಿ ಬಗ್ಗೆ ಮಾಹಿತಿ
* ಕನಿಷ್ಠ ಡಿಪಾಸಿಟ್ ರೂ. 1೦೦೦ ಮತ್ತು ಗರಿಷ್ಠ 1 .5 ಲಕ್ಷ
* ಬಡ್ಡಿ ದರ ಶೇ. 8.1
* ಹೆಣ್ಣು ಮಗುವಿಗೆ 18 ವರ್ಷ ತುಂಬಿದ ನಂತರ ಸಲ್ಪ ಪ್ರಮಾಣದ ಹಣ ವಿತ್ ಡ್ರಾ ಮಾಡಬಹುದು.
* 21 ವರ್ಷ ಪೂರೈಸಿದ ನಂತರ ಸಂಪೂರ್ಣ ಹಣ ಡ್ರಾ ಮಾಡಲು ಅವಕಾಶ
* ಸೆಕ್ಷನ್ 80 ಸಿ ಅನ್ವಯ ತರಿಗೆ ವಿನಾಯಿತಿ
* ಸಾಲ ಸೌಲಭ್ಯ ಇರುವುದಿಲ್ಲ
ಖಾತೆ ವರ್ಗಾವಣೆ
ಮೂಲ ವಾಸ್ತವ್ಯ ವಿಳಾಸದೊಂದಿಗೆ ಖಾತೆಯನ್ನು ಅಂಚೆ ಕಚೇರಿಯಿಂದ ಬ್ಯಾಂಕಿಗೆ ಅಥವಾ ಬ್ಯಾಂಕಿನಿಂದ ಅಂಚೆ ಕಚೇರಿಗೆ ವರ್ಗಾಯಿಸಲು ಅವಕಾಶವಿರುತ್ತದೆ. ಇದಕ್ಕೆ ಯಾವುದೇ ಶುಲ್ಕ ಇರುವುದಿಲ್ಲ.
ಇನ್ನಿತರ ಪ್ರಯೋಜನಗಳು
ಒಂದು ವರ್ಷಕ್ಕೆ ಸಾವಿರ ರೂಪಾಯಿಂದ 1.5 ಲಕ್ಷ ರೂ. ವರೆಗೆ ಡಿಪಾಸಿಟ್ ಮಾಡಲು ಅವಕಾಶವಿದೆ. ಹಣಕಾಸು ವರ್ಷದಲ್ಲಿ ಎಷ್ಟು ಸಾರಿ ಬೇಕಾದರೂ ಡಿಪಾಸಿಟ್ ಮಾಡಬಹುದು. ಕಳೆದ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪಿಪಿಎಫ್ ಗೆ ಹೋಲಿಸಿದರೆ ಇಲ್ಲಿ ಬಡ್ಡಿ ಪ್ರಮಾಣ ಜಾಸ್ತಿಯಿದೆ ಎಂಬುದನ್ನು ಗಮನಿಸಬೇಕಾಗುತ್ತದೆ. ಖಾತೆ ತೆಗೆದು ಒಂದು ವರ್ಷ ಡಿಪಾಸಿಟ್ ಕಟ್ಟಲು ವಿಫಲರಾದರೆ 50 ರೂ. ದಂಡ ತುಂಬಬೇಕಾಗುತ್ತದೆ.
ಹೆಣ್ಣು ಮಗುವಿಗೆ 18 ವರ್ಷ ತುಂಬಿದ ನಂತರ ಒಟ್ಟು ಮೊತ್ತದ ಶೇ.50 ಭಾಗವನ್ನು ವಿತ್ ಡ್ರಾ ಮಾಡಬಹುದು. 21 ವರ್ಷದ ನಂತರ ಖಾತೆಯನ್ನು ಕ್ಲೋಸ್ ಮಾಡಿ ಅಷ್ಟು ಹಣ ಡ್ರಾ ಮಾಡಬಹುದು. 18 ವರ್ಷಕ್ಕೆ ಹೆಣ್ಣು ಮದುವೆಯಾಗುವುದಾದರೆ ಹಣ ಡ್ರಾ ಮಾಡಿಕೊಳ್ಳಲು ಸಾಧ್ಯವಿದೆ. ಒಬ್ಬ ವ್ಯಕ್ತಿ ಅಥವಾ ತಂದೆ ಈ ಯೋಜನೆಯಡಿ ಕೇವಲ ಎರಡು ಖಾತೆ ತೆರೆಯಲು ಮಾತ್ರ ಅವಕಾಶವಿರುತ್ತದೆ.
ಕೊನೆ ಮಾತು
ಯೋಜನೆಯ ದೊಡ್ಡ ಕೊರತೆ ಎಂದರೆ ಕಾಲಾವಧಿ, ಜತೆಗೆ ಯಾವುದೇ ರೀತಿಯ ಸಾಲ ಸೌಲಭ್ಯ ಸಿಗದಿರುವುದು. ಆದರೆ ಸರ್ಕಾರ ಇಂಥ ಹೆಜ್ಜೆ ಇಟ್ಟಿರುವುದನ್ನು ಸ್ವಾಗತಿಸಬೇಕಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಸೌಲಭ್ಯ ವಿರುವ ಯೋಜನೆಗಳು ಸಿಗಲು ಸಾಧ್ಯವಿದೆ.(kannadagoodreturns.in)
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications