ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆಯನ್ನು(Sukanya Samriddhi Scheme) ಆರಂಭಿಸಿದೆ. ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಮದುವೆಯ ಸಂದರ್ಭದಲ್ಲಿ ಪಾಲಕರನ್ನು ಪ್ರೋತ್ಸಾಹಿಸುವುದು ಈ ಉಳಿತಾಯ ಖಾತೆಯ ಪ್ರಮುಖ ಉದ್ದೇಶವಾಗಿದೆ.
ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆಯನ್ನು(Sukanya Samriddhi Scheme) ಆರಂಭಿಸಿದೆ. ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಮದುವೆಯ ಸಂದರ್ಭದಲ್ಲಿ ಪಾಲಕರನ್ನು ಪ್ರೋತ್ಸಾಹಿಸುವುದು ಈ ಉಳಿತಾಯ ಖಾತೆಯ ಪ್ರಮುಖ ಉದ್ದೇಶವಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಯಾವುದೇ ಬ್ಯಾಂಕು ಅಥವಾ ಅಂಚೆ ಕಚೇರಿಗಳಲ್ಲಿ ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆ: ಸರ್ಕಾರದ 8 ಹೊಸ ನಿಯಮಗಳು ಅನ್ವಯ
ಸುಕನ್ಯಾ ಸಮೃದ್ಧಿ ಯೋಜನೆಯ ಅರ್ಜಿಯನ್ನು ಆನ್ ಲೈನ್ ಮುಖಾಂತರ ಡೌನ್ ಲೋಡ್ ಮಾಡಿಕೊಂಡು, ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನೀಡಬೇಕಾಗುತ್ತದೆ. ಅಗತ್ಯ ಭಾವಚಿತ್ರಗಳೊಂದಿಗೆ ಅಂಚೆ ಕಚೇರಿಗೆ ಸಲ್ಲಿಕೆ ಮಾಡಬೇಕಾಗುತ್ತದೆ. ಅಂಚೆ ಕಚೇರಿಯಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಖಾತೆ ಹೇಗೆ ತೆರೆಯಬೇಕು ಎಂಬುದಕ್ಕೆ ಉತ್ತರ ಇಲ್ಲಿದೆ ನೋಡಿ...
1. ಏನು ಮಾಡಬೇಕು?
* ಅಪ್ಲಿಕೇಶನ್ ಫಾರ್ಮ್ ಭರ್ತಿ ಮಾಡಬೇಕು
* ಗುರುತಿನ ಚೀಟಿ ಮತ್ತು ವಿಳಾಸ ದೃಢೀಕರಣ ದಾಖಲಾತಿ ತೆಗೆದುಕೊಂಡು ಹೋಗಿ
* ಆಧಾರ್ ಕಾರ್ಡ್ ಹೊಂದಿದ್ದರೆ ಒಳಿತು
* ಹೆಣ್ಣು ಮಗುವಿನ ಜನ್ಮ ದಾಖಲೆ ಅಗತ್ಯ
* ಹೆಣ್ಣು ಮಗುವಿನ ಪಾಲಕರ ಫೋಟೋ ಅಗತ್ಯ
ಸುಕನ್ಯಾ ಸಮೃದ್ಧಿ ಬಗ್ಗೆ ಮಾಹಿತಿ
* ಕನಿಷ್ಠ ಡಿಪಾಸಿಟ್ ರೂ. 1೦೦೦ ಮತ್ತು ಗರಿಷ್ಠ 1 .5 ಲಕ್ಷ
* ಬಡ್ಡಿ ದರ ಶೇ. 8.1
* ಹೆಣ್ಣು ಮಗುವಿಗೆ 18 ವರ್ಷ ತುಂಬಿದ ನಂತರ ಸಲ್ಪ ಪ್ರಮಾಣದ ಹಣ ವಿತ್ ಡ್ರಾ ಮಾಡಬಹುದು.
* 21 ವರ್ಷ ಪೂರೈಸಿದ ನಂತರ ಸಂಪೂರ್ಣ ಹಣ ಡ್ರಾ ಮಾಡಲು ಅವಕಾಶ
* ಸೆಕ್ಷನ್ 80 ಸಿ ಅನ್ವಯ ತರಿಗೆ ವಿನಾಯಿತಿ
* ಸಾಲ ಸೌಲಭ್ಯ ಇರುವುದಿಲ್ಲ
ಖಾತೆ ವರ್ಗಾವಣೆ
ಮೂಲ ವಾಸ್ತವ್ಯ ವಿಳಾಸದೊಂದಿಗೆ ಖಾತೆಯನ್ನು ಅಂಚೆ ಕಚೇರಿಯಿಂದ ಬ್ಯಾಂಕಿಗೆ ಅಥವಾ ಬ್ಯಾಂಕಿನಿಂದ ಅಂಚೆ ಕಚೇರಿಗೆ ವರ್ಗಾಯಿಸಲು ಅವಕಾಶವಿರುತ್ತದೆ. ಇದಕ್ಕೆ ಯಾವುದೇ ಶುಲ್ಕ ಇರುವುದಿಲ್ಲ.
ಇನ್ನಿತರ ಪ್ರಯೋಜನಗಳು
ಒಂದು ವರ್ಷಕ್ಕೆ ಸಾವಿರ ರೂಪಾಯಿಂದ 1.5 ಲಕ್ಷ ರೂ. ವರೆಗೆ ಡಿಪಾಸಿಟ್ ಮಾಡಲು ಅವಕಾಶವಿದೆ. ಹಣಕಾಸು ವರ್ಷದಲ್ಲಿ ಎಷ್ಟು ಸಾರಿ ಬೇಕಾದರೂ ಡಿಪಾಸಿಟ್ ಮಾಡಬಹುದು. ಕಳೆದ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪಿಪಿಎಫ್ ಗೆ ಹೋಲಿಸಿದರೆ ಇಲ್ಲಿ ಬಡ್ಡಿ ಪ್ರಮಾಣ ಜಾಸ್ತಿಯಿದೆ ಎಂಬುದನ್ನು ಗಮನಿಸಬೇಕಾಗುತ್ತದೆ. ಖಾತೆ ತೆಗೆದು ಒಂದು ವರ್ಷ ಡಿಪಾಸಿಟ್ ಕಟ್ಟಲು ವಿಫಲರಾದರೆ 50 ರೂ. ದಂಡ ತುಂಬಬೇಕಾಗುತ್ತದೆ.
ಹೆಣ್ಣು ಮಗುವಿಗೆ 18 ವರ್ಷ ತುಂಬಿದ ನಂತರ ಒಟ್ಟು ಮೊತ್ತದ ಶೇ.50 ಭಾಗವನ್ನು ವಿತ್ ಡ್ರಾ ಮಾಡಬಹುದು. 21 ವರ್ಷದ ನಂತರ ಖಾತೆಯನ್ನು ಕ್ಲೋಸ್ ಮಾಡಿ ಅಷ್ಟು ಹಣ ಡ್ರಾ ಮಾಡಬಹುದು. 18 ವರ್ಷಕ್ಕೆ ಹೆಣ್ಣು ಮದುವೆಯಾಗುವುದಾದರೆ ಹಣ ಡ್ರಾ ಮಾಡಿಕೊಳ್ಳಲು ಸಾಧ್ಯವಿದೆ. ಒಬ್ಬ ವ್ಯಕ್ತಿ ಅಥವಾ ತಂದೆ ಈ ಯೋಜನೆಯಡಿ ಕೇವಲ ಎರಡು ಖಾತೆ ತೆರೆಯಲು ಮಾತ್ರ ಅವಕಾಶವಿರುತ್ತದೆ.
ಕೊನೆ ಮಾತು
ಯೋಜನೆಯ ದೊಡ್ಡ ಕೊರತೆ ಎಂದರೆ ಕಾಲಾವಧಿ, ಜತೆಗೆ ಯಾವುದೇ ರೀತಿಯ ಸಾಲ ಸೌಲಭ್ಯ ಸಿಗದಿರುವುದು. ಆದರೆ ಸರ್ಕಾರ ಇಂಥ ಹೆಜ್ಜೆ ಇಟ್ಟಿರುವುದನ್ನು ಸ್ವಾಗತಿಸಬೇಕಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಸೌಲಭ್ಯ ವಿರುವ ಯೋಜನೆಗಳು ಸಿಗಲು ಸಾಧ್ಯವಿದೆ.(kannadagoodreturns.in)
More From GoodReturns

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ



Click it and Unblock the Notifications