ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಅನಿಲ ಭಾಗ್ಯ ಯೋಜನೆಯು ಮೇ 1ರಿಂದ ಜಾರಿಯಾಗಲಿದೆ. ಈ ಯೋಜನೆ ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕುಟುಂಬಗಳಿಗೆ ನೀಡಲಾಗುವುದು.
ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಅನಿಲ ಭಾಗ್ಯ ಯೋಜನೆಯು ಮೇ 1ರಿಂದ ಜಾರಿಯಾಗಲಿದೆ. ಈ ಯೋಜನೆ ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕುಟುಂಬಗಳಿಗೆ ನೀಡಲಾಗುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಬಜೆಟ್ ನಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಒದಗಿಸುವ ಅನಿಲ ಭಾಗ್ಯ ಯೋಜನೆಯನ್ನು ಘೋಷಣೆ ಮಾಡಿದ್ದರು. ಸರ್ಕಾರದ ಯೋಜನೆಗಳು
ಮೇ 1ರಿಂದ ಅನುಷ್ಠಾನ
ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಇದೇ ಮೇ 1ರಿಂದ ರಾಜ್ಯಾದ್ಯಂತ ಈ ಯೋಜನೆ ಅನುಷ್ಠಾನವಾಗಲಿದೆ. ಪ್ರಾರಂಭಿಕ ಸುತ್ತಿನಲ್ಲಿ 5 ಲಕ್ಷ ಕುಟುಂಬಗಳು ಈ ಸೌಲಭ್ಯ ಪಡೆಯಲಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಪ್ರಮುಖ ಜನಕಲ್ಯಾಣ ಯೋಜನೆಗಳು
ಸೀಮೆಎಣ್ಣೆ ಮುಕ್ತ ರಾಜ್ಯ
ಮುಖ್ಯಮಂತ್ರಿಯವರು ರಾಜ್ಯವನ್ನು ಸೀಮೆಎಣ್ಣೆ ಮುಕ್ತ ಮಾಡುವ ಕನಸನ್ನು ಕಂಡಿದ್ದು, ಮೊದಲ ಹಂತದಲ್ಲಿ ಬಿಪಿಎಲ್ ಕುಟುಂಬಗಳಿಗೆ ಸುಮಾರು 2 ಸಾವಿರ ವೆಚ್ಚದಲ್ಲಿ ಅಡುಗೆ ಅನಿಲ ಸಂಪರ್ಕವನ್ನು ಪೂರೈಸಲಿದೆ. ಈ ಮೂಲಕ ರಾಜ್ಯವನ್ನು ಸೀಮೆಎಣ್ಣೆ ಮುಕ್ತ ಮಾಡುವ ಸಂಕಲ್ಪ ಮಾಡಲಾಗಿದೆ.
ಕೇಂದ್ರದ ಉಜ್ವಲ ರಾಜ್ಯದ ಅನಿಲಭಾಗ್ಯ
ಈಗಾಗಲೇ ಕೇಂದ್ರ ಸರ್ಕಾರ ಬಡ ಕುಟುಂಬಗಳಿಗೆ ಉಜ್ವಲ ಯೋಜನೆಯಡಿ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸುತ್ತಿದೆ. ಕೇಂದ್ರದ ಉಜ್ವಲ ಯೋಜನೆ ಮಾದರಿಯಲ್ಲಿ ಅನಿಲಭಾಗ್ಯ ಯೋಜನೆ ಅನುಷ್ಠಾನವಾಗಲಿದೆ. ಆದರೆ ಕೇಂದ್ರ ಸರ್ಕಾರ ತಯಾರಿಸಿರುವ ಫಲಾನುಭವಿಗಳ ಪಟ್ಟಿಯಲ್ಲಿ ರಾಜ್ಯದ ಶೇ. 60ರಷ್ಟು ಕುಟುಂಬಗಳು ಬರುತ್ತಿರಲಿಲ್ಲ. ಹೀಗಾಗಿ ಅನಿಲ ಭಾಗ್ಯ ಯೋಜನೆ ಅಡಿಯಲ್ಲಿ ಅವರೆಲ್ಲರಿಗೂ ಅಡುಗೆ ಅನಿಲ(ಗ್ಯಾಸ್) ಸಿಗಲಿದೆ.
ಸ್ಟವ್ ಸೌಲಭ್ಯ
ಕೇಂದ್ರದ ಉಜ್ವಲ ಯೋಜನೆ ಅಡಿಯಲ್ಲಿ ಗುರುತಿಸಿದ ಎಲ್ಲಾ ಫಲಾನುಭವಿಗಳಿಗೆ 1000 ರೂ. ಮೊತ್ತದ ಸ್ಟವ್ ನೀಡಲು ಆದೇಶದಲ್ಲಿ ಸೂಚಿಸಲಾಗಿದೆ. ಈ ಸ್ಟವ್ ವಿತರಣೆಯನ್ನು ರಾಜ್ಯದ ಅನಿಲ ಭಾಗ್ಯ ಯೋಜನೆಯ ಭಾಗವಾಗಿ ಪರಿಗಣಿಸಲು ಸೂಚನೆ ನೀಡಲಾಗಿದೆ.
ಅನ್ನಭಾಗ್ಯ ಫಲಾನುಭವಿಗಳಿಗೆ ಲಾಭ
ಈಗಾಗಲೇ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ಈ ಲಾಭ ತಮ್ಮದಾಗಿಸಲಿದ್ದಾರೆ. ಮೊದಲ ಹಂತದಲ್ಲಿ 5 ಲಕ್ಷ ಕುಟುಂಬಗಳಿಗೆ ನೀಡಲಾಗುವುದು. ನಂತರದಲ್ಲಿ ಹಂತ ಹಂತವಾಗಿ ಒಟ್ಟು 18 ಲಕ್ಷ ಕುಟುಂಬಗಳಿಗೆ ಈ ಸೌಲಭ್ಯ ಒದಗಿಸಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
ರಾಜ್ಯ ಸರ್ಕಾರದ ಅನಿಲ ಭಾಗ್ಯ ಯೋಜನೆಯಡಿ ಗ್ಯಾಸ್ ಸಂಪರ್ಕ ಪಡೆಯಲು ಆಹಾರ ಇಲಾಖೆ ಸಿದ್ಧಪಡಿಸಿರುವ ಸಾಪ್ಟ್ವೇರ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅಲ್ಲದೇ ಇಲಾಖೆಯ ಸೇವಾ ಕೇಂದ್ರಗಳಾದ ಗ್ರಾಮ ಪಂಚಾಯಿತಿ, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಜನಸ್ನೇಹಿ ಕೇಂದ್ರ ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕೇಂದ್ರದ ಪಟ್ಟಿಯಲ್ಲಿ ಹೆಸರಿದ್ದರೆ?
ಒಂದುವೇಳೆ ಅರ್ಜಿ ಸಲ್ಲಿಸಿದ ಕುಟುಂಬಗಳ ಹೆಸರು ಕೇಂದ್ರ ಸರ್ಕಾರದ ಸಾಮಾಜಿಕ, ಆರ್ಥಿಕ ಜಾತಿ ಗಣತಿ ಪಟ್ಟಿಯಲ್ಲಿ ಗುರುತಿಸಿರುವ ಫಲಾನುಭವಿಗಳ ಪಟ್ಟಿಯಲ್ಲಿದ್ದಲ್ಲಿ ಕೇಂದ್ರದ ಉಜ್ವಲ ಯೋಜನೆಯಡಿ ಅನಿಲ ಭಾಗ್ಯ ಸೌಲಭ್ಯ ಒದಗಿಲಾಗುವುದು. ಜತೆಗೆ ಉಳಿದ ಕುಟುಂಬಗಳಿಗೆ ಅನಿಲಭಾಗ್ಯ ಅಡಿಯಲ್ಲಿ ಗ್ಯಾಸ್ ಸಂಪರ್ಕ ನೀಡಲಾಗುವುದು.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ



Click it and Unblock the Notifications