ಮೋದಿ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಅಟಲ್ ಪಿಂಚಣಿ ಯೋಜನೆ ಕೂಡ ಒಂದು. ನಿವೃತ್ತಿ ಯೋಜನೆ ಅಡಿಯಲ್ಲಿ ಹೆಚ್ಚೆಚ್ಚು ಜನರು ಒಳಗೊಳ್ಳುವಂತೆ ಮಾಡಿ ನಿವೃತ್ತಿ ಭದ್ರತೆಯನ್ನು ಒದಗಿಸುವುದು ಇದರ ಉದ್ದೇಶವಾಗಿದೆ.
ಮೋದಿ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಅಟಲ್ ಪಿಂಚಣಿ ಯೋಜನೆ ಕೂಡ ಒಂದು. ನಿವೃತ್ತಿ ಯೋಜನೆ ಅಡಿಯಲ್ಲಿ ಹೆಚ್ಚೆಚ್ಚು ಜನರು ಒಳಗೊಳ್ಳುವಂತೆ ಮಾಡಿ ನಿವೃತ್ತಿ ಭದ್ರತೆಯನ್ನು ಒದಗಿಸುವುದು ಇದರ ಉದ್ದೇಶವಾಗಿದೆ. ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವವರನ್ನು ಗುರಿಯಾಗಿರಿಸಿಕೊಂಡು ಈ ಯೋಜನೆಯನ್ನು ಸಿದ್ದಪಡಿಸಲಾಗಿದೆ. ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಪಿಎಫ್ಆರ್ ಡಿಎ) ಅಡಿಯಲ್ಲಿ ಯೋಜನೆಗೆ ಸಂಪೂರ್ಣ ಭದ್ರತೆ ಒದಗಿಸಲಾಗಿದೆ.

ಯೋಜನೆ ಉದ್ದೇಶ
ದೇಶದ ನಾಗರಿಕರಿಗೆ ಸಾಮಾಜಿಕ ಭದ್ರತೆ ಒದಗಿಸಿ, ಇಂಯಹ ಯೋಜನೆಗಳ ಹೆಚ್ಚೆಚ್ಚು ಲಾಭ ಪಡೆದುಕೊಳ್ಳುವಂತೆ ಉತ್ತೇಜಿಸುವುದು. ಖಾಸಗಿ ಅಸಂಘಟಿತ ವಲಯದ ಮತ್ತು ದೇಶದ ಎಲ್ಲ ನಾಗರಿಕರೂ ಈ ಯೋಜನೆ ಲಾಭ ಪಡೆಯಬಹುದು. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.
ಅಟಲ್ ಪಿಂಚಣಿ ಯೋಜನೆ ಕುರಿತು ಹೆಚ್ಚಿನ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ನೋಡಿ...
ಎಪಿವೈ ಖಾತೆ ತೆರೆಯುವುದು ಹೇಗೆ?
ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸಬೇಕಾದರೆ ಈಗಾಗಲೇ ಉಳಿತಾಯ ಖಾತೆ ಇರುವ ಬ್ಯಾಂಕಿಗೆ ತೆರಳಿ ಅರ್ಜಿ ತುಂಬಿ ಖಾತೆ ತೆರೆಯಬೇಕು. ಬ್ಯಾಂಕ್ ಖಾತೆಯಿಂದಲೇ ಹೂಡಿಕೆಯ ಮೊತ್ತ ಕಡಿತವಾಗುತ್ತದೆ. ಪ್ರತಿ ತಿಂಗಳು ಬ್ಯಾಂಕಿಗೆ ಹೋಗಬೇಕಾದ ಅಗತ್ಯವಿರುವುದಿಲ್ಲ. ಬದಲಾಗಿ ಖಾತೆಯಲ್ಲಿ ಬ್ಯಾಲೆನ್ಸ್ ಮೊತ್ತ ಇದ್ದರೆ ಸಾಕು. ಹಣ ಅಟಲ್ ಪಿಂಚಣಿ ಯೋಜನೆ ಖಾತೆಗೆ ತನ್ನಿಂದ ತಾನೇ ವರ್ಗಾವಣೆಯಾಗುತ್ತದೆ.
ನೋಂದಣಿ ಅರ್ಜಿ
ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.
ಮೊಬೈಲ್ ಮತ್ತು ಆಧಾರ್ ಸಂಖ್ಯೆ ನೀಡಿ
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ನೀಡಿದರೆ ಯೋಜನೆಯ ಮಾಹಿತಿಯನ್ನು ಎಸ್ಎಂಎಸ್ ಗಳ ಮೂಲಕ ಪಡೆದುಕೊಳ್ಳಬಹುದು. ಆಧಾರ್ ಸಂಖ್ಯೆಯನ್ನು ಇಲ್ಲಿ ಕಡ್ಡಾಯ ಮಾಡಿಲ್ಲ ಆದರೆ ನೀಡಿದರೆ ಒಳಿತು. ಏಕೆಂದರೆ ನಿ್ಮಮ ಗ್ರಾಹಕರನ್ನು ಗುರುತಿಸಿ(ಕೆವೈಸಿ) ಪ್ರಕ್ರಿಯೆ ಫಲಾನುಭವಿಗಳ ಗುರುತಿಗೆ ಆಧಾರ್ ನಂಬರ್ ಪ್ರಮುಖ ದಾಖಲೆಯಾಗಿರುತ್ತದೆ. ಎಲ್ಲ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳು ಅಟಲ್ ಪಿಂಚಣಿ ಯೋಜನೆ ಸೌಲಭ್ಯವನ್ನು ಹೊಂದಿವೆ.
ಎಪಿವೈ ನಲ್ಲಿ ಎಷ್ಟು ಹೂಡಿಕೆ ಮಾಡಬೇಕು?
ಕನಿಷ್ಟ 20 ವರ್ಷ ಹೂಡಿಕೆ ಮಾಡಬೇಕಾಗುತ್ತದೆ. 18 ವರ್ಷದವರಾದರೆ 42 ವರ್ಷ ಕಾಲ ತಿಂಗಳಿಗೆ ರೂ. 210, 20 ವರ್ಷದವರಾದರೆ 40 ವರ್ಷಗಳವರೆಗೆ ರೂ. 248, 25 ವರ್ಷದವರಾದರೆ 35 ವರ್ಷ ಮಾಸಿಕ ರೂ. 376, 30 ವರ್ಷದವರಾದರೆ 30 ವರ್ಷಗಳವರೆಗೆ ಮಾಸಿಕ ರೂ. 577 ಹಾಗೂ 40 ವರ್ಷದವರಾದರೆ 20 ವರ್ಷಗಳ ಕಾಲ ಮಾಸಿಕ ರೂ. 1454 ಹೂಡಿಕೆ ಮಾಡಬೇಕಾಗುತ್ತದೆ. (ತಿಂಗಳಿಗೆ ರೂ. 5000 ಪಿಂಚಣಿ ಪಡೆಯಬೇಕಾದರೆ)
ಹಣ ವಿತ್ ಡ್ರಾ
ಯೋಜನೆ ಮಾಡಿಸಿಕೊಂಡವರು 60 ವರ್ಷ ತುಂಬಿದ ನಂತರದಲ್ಲಿ ಪಿಂಚಣಿಗೆ ಅರ್ಜಿ ಸಲ್ಲಿಕೆ ಮಾಡಬಹುದು. 60 ವರ್ಷಕ್ಕೂ ಮುನ್ನ ಯಾವ ಕಾರಣಕ್ಕೂ ಹಣ ನೀಡಲಾಗುವುದಿಲ್ಲ. ಸಾವು ಮತ್ತಿತರ ಅಪಘಾತ ಸಂದರ್ಭದಲ್ಲಿ ಕೆಲ ವಿನಾಯಿತಿ ಕಲ್ಪಿಸಲಾಗಿದೆ. ಈ ಮೇಲಿನಂತೆ ಮಾಸಿಕ ಹಣ ಹೂಡಿಕೆ ಮಾಡಿದರೆ 60ನೇ ವರ್ಷದಿಂದ ತಿಂಗಳಿಗೆ ರೂ. 5000 ಪಿಂಚಣಿ ಪಡೆಯಬಹುದಾಗಿದೆ.
ಅವಧಿ ಮುಗಿದರೆ ಏನಾಗುತ್ತದೆ?
ನಿಗದಿತ ಅವಧಿಯಲ್ಲಿ ಹಣ ಸಂದಾಯವಾಗದಿದ್ದರೆ ಅದನ್ನು ದಂಡ ರೂಪದಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಅತಿ ಕನಿಷ್ಠ ಪ್ರಮಾಣದ ಅಂದರೆ ರೂ. 1-10 ವರೆಗೆ ದಂಡ ವಿಧಿಸಬಹುದು.
ವಯಸ್ಸಿನ ಮಿತಿ
18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು.
ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.
ಕೊನೆ ಮಾತು
ಯೋಜನೆದಾರರು ತಮ್ಮ ಪಿಂಚಣಿ ಮೊತ್ತ ಹೆಚ್ಚು ಅಥವಾ ಕಡಿಮೆ ಮಾಡಿಕೊಳ್ಳಲು ಅವಕಾಶವಿಲ್ಲ. ಅರ್ಜಿ ತುಂಬುವ ವೇಳೆಯೇ ನಿರ್ದಿಷ್ಟ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. (kannadagoodreturns.in)
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications