ಆದಾಯ ಮೂಲಗಳು ಹಾಗೂ ಖರ್ಚುವೆಚ್ಚಗಳನ್ನು ಕುರಿತು ಯೋಜಿತ ರೀತಿಯಲ್ಲಿ ತಯಾರಿಸಲ್ಪಡುವ ಅಂದಾಜು ಪಟ್ಟಿಯನ್ನು ಆಯವ್ಯಯ (ಬಜೆಟ್) ಎಂದು ಕರೆಯಲಾಗುತ್ತದೆ.
ಆದಾಯ ಮೂಲಗಳು ಹಾಗೂ ಖರ್ಚುವೆಚ್ಚಗಳನ್ನು ಕುರಿತು ಯೋಜಿತ ರೀತಿಯಲ್ಲಿ ತಯಾರಿಸಲ್ಪಡುವ ಅಂದಾಜು ಪಟ್ಟಿಯನ್ನು ಆಯವ್ಯಯ (ಬಜೆಟ್) ಎಂದು ಕರೆಯಲಾಗುತ್ತದೆ. ಉದಾಹರಣೆಗೆ ಕುಟುಂಬದ ಆದಾಯಕ್ಕನುಗುಣವಾಗಿ ಸಂಸಾರ ತೂಗಿಸಿಕೊಂಡು ಹೋಗಲು ಗಂಡ-ಹೆಂಡತಿ ಮಾಡುವ ಯೋಜನೆಯಂತೆಯೇ ಇದು ದೇಶ ಖರ್ಚುವೆಚ್ಚಗಳನ್ನು ಸರಿದೂಗಿಸಿಕೊಂಡು ಹೋಗಲು ಮಾಡುವ ಯೋಜನೆ. ಇದನ್ನೇ ಸಾಮಾನ್ಯವಾಗಿ ಕೇಂದ್ರ ಬಜೆಟ್ ಎನ್ನಲಾಗುತ್ತದೆ. ಕೇಂದ್ರ ಬಜೆಟ್ 2018: ತೆರಿಗೆದಾರರು ಈ ಪ್ರಯೋಜನಗಳನ್ನು ಪಡೆಯಬಹುದೆ?
ಬಜೆಟ್ ಮಂಡನೆ ಯಾವಾಗ?
ಕೇಂದ್ರ ಬಜೆಟ್ ಮಂಡನೆಯನ್ನು ಹಣಕಾಸು ಸಚಿವರು ಮಾಡುತ್ತಾರೆ. ಈ ವರ್ಷದ ಕೇಂದ್ರ ಬಜೆಟ್ ಮಂಡನೆ ಅರುಣ್ ಜೇಟ್ಲಿ ಮಾಡಲಿದ್ದಾರೆ. ಸಾಮಾನ್ಯವಾಗಿ ಪ್ರತಿವರ್ಷ ಫೆಬ್ರುವರಿಯಲ್ಲಿ ಬಜೆಟ್ ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ.
ಬಜೆಟ್ ಅನುಮೋದನೆ ಮತ್ತು ಜಾರಿ ಹೇಗೆ?
ಹಣಕಾಸು ಸಚಿವರು ಆಯವ್ಯಯವನ್ನು ಲೋಕಸಭೆಯಲ್ಲಿ ಮಂಡಿಸಿದ ನಂತರ ಅದರ ಮೇಲೆ ಮುಕ್ತವಾಗಿ ಚರ್ಚೆ ನಡೆಯುತ್ತದೆ. ಪ್ರತಿ ಸಚಿವಾಲಯವು ತನ್ನ ಅಗತ್ಯಕ್ಕೆ ಅನುಗುಣವಾಗಿ ಹಣ ಮಂಜೂರು ಮಾಡುವಂತೆ ಪ್ರಸ್ತಾವನೆ ಇಡುತ್ತದೆ. ಪ್ರತಿ ಕ್ಷೇತ್ರಕ್ಕೆ ನಿಗದಿಯಾಗುವ ಹಣಕ್ಕೆ ಸಮ್ಮತಿ ಪಡೆಯಲಾಗುತ್ತದೆ. ಎಲ್ಲಕ್ಕೂ ಸಮ್ಮತಿ ಸಿಕ್ಕ ನಂತರ ಬಜೆಟ್ ಮಾನ್ಯ ಮಾಡಲಾಗುತ್ತದೆ. ಈ ಒಟ್ಟು ಪ್ರಕ್ರಿಯೆಯನ್ನು ಬಜೆಟ್ ಅನುಮೋದನೆ ಎನ್ನುತ್ತಾರೆ.
ಪ್ರತಿ ವರ್ಷ ಏಪ್ರಿಲ್ ತಿಂಗಳಿನಿಂದ ಬಜೆಟ್ ಜಾರಿಯಾಗುತ್ತದೆ. ಇದು ಏಪ್ರಿಲ್ ನಿಂದ ಮಾರ್ಚ್ ತಿಂಗಳವರೆಗಿನ ಒಂದು ವರ್ಷದ ಅವಧಿ ಹೊಂದಿರುತ್ತದೆ.
ಬಜೆಟ್ ಮಂಡಿಸಿದ್ದು ಯಾರು?
1947, ನವೆಂಬರ್ 26ರಂದು ಆರ್.ಕೆ. ಷಣ್ಮುಖಂ ಚೆಟ್ಟಿ ಅವರು ದೇಶದ ಮೊದಲ ಬಜೆಟ್ ಮಂಡಿಸಿದರು. ಇಲ್ಲಿಯವರೆಗೆ ಮೊರಾರ್ಜಿ ದೇಸಾಯಿ ಅವರು ಅತಿ ಹೆಚ್ಚು ಬಜೆಟ್ ಮಂಡಿಸಿದ ಹೆಗ್ಗಳಿಕೆ ಹೊಂದಿದ್ದು, ಒಟ್ಟು ಎಂಟು ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications