ಕೇವಲ ರೂ. 20 ಪಾವತಿಸಿ, ಮೊಬೈಲ್ ಅಥವಾ ಆನ್ಲೈನ್ ಮೂಲಕ 5-10 ನಿಮಿಷಗಳಲ್ಲಿಯೇ ಜಾತಿ/ಆದಾಯ ಪ್ರಮಾಣ ಪತ್ರಗಳನ್ನು ಪಡೆಯಬಹುದು. ಈಗಾಗಲೇ ಕರ್ನಾಟಕದಲ್ಲಿ ಜಾರಿಯಾಗಿದೆ.
ಜಾತಿ, ಆದಾಯ ಪ್ರಮಾಣ ಪತ್ರಗಳಿಗಾಗಿ ಕಚೇರಿಗಳಿಗೆ ಅಲೆಯುವುದೆಂದರೆ ಬೇಸರದ ಸಂಗತಿ. ಹತ್ತಾರು ಬಾರಿ ಅಲೆದರೂ ಪ್ರಮಾಣ ಪತ್ರಗಳು ಮಾತ್ರ ಸಿಗುವುದಿಲ್ಲ. ಕೆಲವೊಮ್ಮೆ ಅಧಿಕಾರಿಗಳ ಕಿರುಕುಳ, ದರ್ಪ, ಬೇಜವಾಬ್ದಾರಿ ವರ್ತನೆಯಿಂದ ಬೇಸತ್ತು ಹೋಗುತ್ತದೆ. ಅಲ್ಲದೆ ಜಾತಿ, ಆದಾಯ ಪ್ರಮಾಣಪತ್ರಗಳನ್ನು ಪಡೆಯಬೇಕೆಂದರೆ ಲಂಚ ಕೊಡಬೇಕಾಗುತ್ತದೆ. ಹೆಸರಿಗೆ ಸಕಾಲ ಅಂತಾ ಇದ್ದರೂ ಅದು ಹೆಸರಿಗೆ ಮಾತ್ರ ಸೀಮಿತ. ಹೀಗಾಗಿ ಸಕಾಲಕ್ಕೆ ಯಾವುದು ಆಗುತ್ತಿಲ್ಲ!
ಆದರೆ ಇದೀಗ ಕೇವಲ ರೂ. 20 ಪಾವತಿಸಿ, ಮೊಬೈಲ್ ಅಥವಾ ಆನ್ಲೈನ್ ಮೂಲಕ 5-10 ನಿಮಿಷಗಳಲ್ಲಿಯೇ ಜಾತಿ/ಆದಾಯ ಪ್ರಮಾಣ ಪತ್ರಗಳನ್ನು ಪಡೆಯಬಹುದು. ಈಗಾಗಲೇ ಕರ್ನಾಟಕದಲ್ಲಿ ಈ ವ್ಯವಸ್ಥೆ ಜಾರಿಯಾಗಿದೆ.
ಅದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ನಾಡ ಕಚೇರಿ ವೆಬ್ಸೈಟ್
ನಾಡ ಕಚೇರಿ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿ ಸ್ವೀಕೃತಿ ವಿಭಾಗದಲ್ಲಿನ ಆನ್ಲೈನ್ ಅರ್ಜಿ ಆಪ್ಷನ್ ಆಯ್ಕೆ ಮಾಡಿ. ಈ ಕೆಳಗಿನ ಕೊಂಡಿ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಗೆ ಪ್ರವೇಶಿಸಿ.
http://www.nadakacheri.karnataka.gov.in/ http://164.100.133.30/Online_service/loginpage.aspx
ಮೊದಲ ಹಂತ
ನಾಡ ಕಚೇರಿ ವೆಬ್ಸೈಟ್ ಗೆ ಪ್ರವೇಶಿಸುವ ಮೊದಲ ಹಂತದಲ್ಲಿ ನಿಮ್ಮ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮುಂದುವರೆಯಬೇಕು. ಅಂದರೆ Proceed ಮೇಲೆ ಕ್ಲಿಕ್ ಮಾಡಬೇಕು.
ಎರಡನೇ ಹಂತ
ಮುಂದಿನ ಹಂತದಲ್ಲಿ ಜಾತಿ ಅಥವಾ ಆದಾಯ ಪ್ರಮಾಣಪತ್ರ ಪಡೆಯಬೇಕೆಂದರೆ ನ್ಯೂ ರಿಕ್ವೆಸ್ಟ್ (New Request) ವಿಧಾನ ಆಯ್ಕೆ ಮಾಡಬೇಕು.
ಮೂರನೇ ಹಂತ
ನ್ಯೂ ರಿಕ್ವೆಸ್ಟ್ (New Request) ಮೇಲೆ ಕ್ಲಿಕ್ ಮಾಡಿದ ನಂತರ ಹಲವಾರು ಸೇವೆಗಳ ಪಟ್ಟಿ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮಗೆ ಬೇಕಾದ ಸೇವೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ನಿಮಗೆ ಆದಾಯ ಪತ್ರ ಬೇಕಿದ್ದರೆ Income Certificate ಮೇಲೆ ಕ್ಲಿಕ್ ಮಾಡಿ.
ನಾಲ್ಕನೇ ಹಂತ
ಆದಾಯ ಪತ್ರಕ್ಕಾಗಿ ಆಪ್ಷನ್ ಆಯ್ಕೆ ಮಾಡಿದ ನಂತರ ಪ್ರಮಾಣಪತ್ರ ಬೇಕಿರುವುದು ಯಾವ ಭಾಷೆಯಲ್ಲಿ (certificate required) ಎಂಬ ಆಪ್ಷನ್ ತೆರೆದುಕೊಳ್ಳುತ್ತದೆ. ನಿಮಗೆ ಕನ್ನಡದಲ್ಲಿ ಬೇಕಿದ್ದರೆ Kannada ಮೇಲೆ ಕ್ಲಿಕ್ ಮಾಡಿ. ಕೆಳಗಡೆ ಕೆಂಪು ಅಕ್ಷರಗಳಲ್ಲಿ ನೀಡಿರುವ ಆದಾಯ ಪ್ರಮಾಣಪತ್ರವನ್ನು ಆಯ್ಕೆ ಮಾಡಿ.
ಐದನೇ ಹಂತ
ಈ ಹಂತದಲ್ಲಿ ನಿಮ್ಮ ವೈಯಕ್ತಿಕ ವಿವರಗಳಾದ ಪಡಿತರ ಸಂಖ್ಯೆ, ಆಧಾರ್ ಸಂಖ್ಯೆ, ವಿಳಾಸ ಇತ್ಯಾದಿಗಳನ್ನು ಭರ್ತಿ ಮಾಡಿ ಪ್ರೋಸೀಡ್ ಕೊಡಬೇಕು.
ರೂ. 20 ಶುಲ್ಕ ಪಾವತಿಸಿ
ಕೊನೆಯಲ್ಲಿ ಆನ್ಲೈನ್ ಪೇಮೆಂಟ್ ಪೇಜ್ ತೆರೆಯುತ್ತದೆ. ಕೇವಲ ರೂ. 20 ಪಾವತಿಸಿ, ಮೊಬೈಲ್ ಅಥವಾ ಆನ್ಲೈನ್ ಮೂಲಕ 5-10 ನಿಮಿಷಗಳಲ್ಲಿಯೇ ಜಾತಿ/ಆದಾಯ ಪ್ರಮಾಣ ಪತ್ರಗಳನ್ನು ಪಡೆಯಬಹುದು.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications