ಕೇವಲ ರೂ. 20 ಪಾವತಿಸಿ, ಮೊಬೈಲ್ ಅಥವಾ ಆನ್ಲೈನ್ ಮೂಲಕ 5-10 ನಿಮಿಷಗಳಲ್ಲಿಯೇ ಜಾತಿ/ಆದಾಯ ಪ್ರಮಾಣ ಪತ್ರಗಳನ್ನು ಪಡೆಯಬಹುದು. ಈಗಾಗಲೇ ಕರ್ನಾಟಕದಲ್ಲಿ ಜಾರಿಯಾಗಿದೆ.
ಜಾತಿ, ಆದಾಯ ಪ್ರಮಾಣ ಪತ್ರಗಳಿಗಾಗಿ ಕಚೇರಿಗಳಿಗೆ ಅಲೆಯುವುದೆಂದರೆ ಬೇಸರದ ಸಂಗತಿ. ಹತ್ತಾರು ಬಾರಿ ಅಲೆದರೂ ಪ್ರಮಾಣ ಪತ್ರಗಳು ಮಾತ್ರ ಸಿಗುವುದಿಲ್ಲ. ಕೆಲವೊಮ್ಮೆ ಅಧಿಕಾರಿಗಳ ಕಿರುಕುಳ, ದರ್ಪ, ಬೇಜವಾಬ್ದಾರಿ ವರ್ತನೆಯಿಂದ ಬೇಸತ್ತು ಹೋಗುತ್ತದೆ. ಅಲ್ಲದೆ ಜಾತಿ, ಆದಾಯ ಪ್ರಮಾಣಪತ್ರಗಳನ್ನು ಪಡೆಯಬೇಕೆಂದರೆ ಲಂಚ ಕೊಡಬೇಕಾಗುತ್ತದೆ. ಹೆಸರಿಗೆ ಸಕಾಲ ಅಂತಾ ಇದ್ದರೂ ಅದು ಹೆಸರಿಗೆ ಮಾತ್ರ ಸೀಮಿತ. ಹೀಗಾಗಿ ಸಕಾಲಕ್ಕೆ ಯಾವುದು ಆಗುತ್ತಿಲ್ಲ!
ಆದರೆ ಇದೀಗ ಕೇವಲ ರೂ. 20 ಪಾವತಿಸಿ, ಮೊಬೈಲ್ ಅಥವಾ ಆನ್ಲೈನ್ ಮೂಲಕ 5-10 ನಿಮಿಷಗಳಲ್ಲಿಯೇ ಜಾತಿ/ಆದಾಯ ಪ್ರಮಾಣ ಪತ್ರಗಳನ್ನು ಪಡೆಯಬಹುದು. ಈಗಾಗಲೇ ಕರ್ನಾಟಕದಲ್ಲಿ ಈ ವ್ಯವಸ್ಥೆ ಜಾರಿಯಾಗಿದೆ.
ಅದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ನಾಡ ಕಚೇರಿ ವೆಬ್ಸೈಟ್
ನಾಡ ಕಚೇರಿ ವೆಬ್ಸೈಟ್ ಗೆ ಭೇಟಿ ನೀಡಿ, ಆನ್ಲೈನ್ ಅರ್ಜಿ ಸ್ವೀಕೃತಿ ವಿಭಾಗದಲ್ಲಿನ ಆನ್ಲೈನ್ ಅರ್ಜಿ ಆಪ್ಷನ್ ಆಯ್ಕೆ ಮಾಡಿ. ಈ ಕೆಳಗಿನ ಕೊಂಡಿ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಗೆ ಪ್ರವೇಶಿಸಿ.
http://www.nadakacheri.karnataka.gov.in/ http://164.100.133.30/Online_service/loginpage.aspx
ಮೊದಲ ಹಂತ
ನಾಡ ಕಚೇರಿ ವೆಬ್ಸೈಟ್ ಗೆ ಪ್ರವೇಶಿಸುವ ಮೊದಲ ಹಂತದಲ್ಲಿ ನಿಮ್ಮ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮುಂದುವರೆಯಬೇಕು. ಅಂದರೆ Proceed ಮೇಲೆ ಕ್ಲಿಕ್ ಮಾಡಬೇಕು.
ಎರಡನೇ ಹಂತ
ಮುಂದಿನ ಹಂತದಲ್ಲಿ ಜಾತಿ ಅಥವಾ ಆದಾಯ ಪ್ರಮಾಣಪತ್ರ ಪಡೆಯಬೇಕೆಂದರೆ ನ್ಯೂ ರಿಕ್ವೆಸ್ಟ್ (New Request) ವಿಧಾನ ಆಯ್ಕೆ ಮಾಡಬೇಕು.
ಮೂರನೇ ಹಂತ
ನ್ಯೂ ರಿಕ್ವೆಸ್ಟ್ (New Request) ಮೇಲೆ ಕ್ಲಿಕ್ ಮಾಡಿದ ನಂತರ ಹಲವಾರು ಸೇವೆಗಳ ಪಟ್ಟಿ ತೆರೆದುಕೊಳ್ಳುತ್ತದೆ. ಅದರಲ್ಲಿ ನಿಮಗೆ ಬೇಕಾದ ಸೇವೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ನಿಮಗೆ ಆದಾಯ ಪತ್ರ ಬೇಕಿದ್ದರೆ Income Certificate ಮೇಲೆ ಕ್ಲಿಕ್ ಮಾಡಿ.
ನಾಲ್ಕನೇ ಹಂತ
ಆದಾಯ ಪತ್ರಕ್ಕಾಗಿ ಆಪ್ಷನ್ ಆಯ್ಕೆ ಮಾಡಿದ ನಂತರ ಪ್ರಮಾಣಪತ್ರ ಬೇಕಿರುವುದು ಯಾವ ಭಾಷೆಯಲ್ಲಿ (certificate required) ಎಂಬ ಆಪ್ಷನ್ ತೆರೆದುಕೊಳ್ಳುತ್ತದೆ. ನಿಮಗೆ ಕನ್ನಡದಲ್ಲಿ ಬೇಕಿದ್ದರೆ Kannada ಮೇಲೆ ಕ್ಲಿಕ್ ಮಾಡಿ. ಕೆಳಗಡೆ ಕೆಂಪು ಅಕ್ಷರಗಳಲ್ಲಿ ನೀಡಿರುವ ಆದಾಯ ಪ್ರಮಾಣಪತ್ರವನ್ನು ಆಯ್ಕೆ ಮಾಡಿ.
ಐದನೇ ಹಂತ
ಈ ಹಂತದಲ್ಲಿ ನಿಮ್ಮ ವೈಯಕ್ತಿಕ ವಿವರಗಳಾದ ಪಡಿತರ ಸಂಖ್ಯೆ, ಆಧಾರ್ ಸಂಖ್ಯೆ, ವಿಳಾಸ ಇತ್ಯಾದಿಗಳನ್ನು ಭರ್ತಿ ಮಾಡಿ ಪ್ರೋಸೀಡ್ ಕೊಡಬೇಕು.
ರೂ. 20 ಶುಲ್ಕ ಪಾವತಿಸಿ
ಕೊನೆಯಲ್ಲಿ ಆನ್ಲೈನ್ ಪೇಮೆಂಟ್ ಪೇಜ್ ತೆರೆಯುತ್ತದೆ. ಕೇವಲ ರೂ. 20 ಪಾವತಿಸಿ, ಮೊಬೈಲ್ ಅಥವಾ ಆನ್ಲೈನ್ ಮೂಲಕ 5-10 ನಿಮಿಷಗಳಲ್ಲಿಯೇ ಜಾತಿ/ಆದಾಯ ಪ್ರಮಾಣ ಪತ್ರಗಳನ್ನು ಪಡೆಯಬಹುದು.
More From GoodReturns

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ



Click it and Unblock the Notifications