ಆಯುಷ್ಮಾನ್ ಭಾರತ್ ಯೋಜನೆಯ ಆಯುಷ್ಮಾನ್ ಮಿತ್ರದಡಿ ದೇಶದ ಸುಮಾರು ಹತ್ತು ಲಕ್ಷ ಯುವಕರಿಗೆ ಮುಂದಿನ ಐದು ವರ್ಷಗಳಲ್ಲಿ ಉದ್ಯೋಗ ಕಲ್ಪಿಸುವ ಗುರಿಯನ್ನು ಹೊಂದಿದೆ. ಇದನ್ನು ಆಯುಷ್ಮಾನ್ ಮಿತ್ರ ಎಂದು ಕರೆಯಲಾಗುತ್ತದೆ.
ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಜಗತ್ತಿನ ಅತಿದೊಡ್ಡ ಆರೋಗ್ಯ ರಕ್ಷಣಾ ಕಾರ್ಯಕ್ರಮವಾಗಿರುವ ಆಯುಷ್ಮಾನ್ ಭಾರತ್ ಯೋಜನೆಯನ್ನು ಆಗಸ್ಟ್ ೧೫ ರಂದು ಘೋಷಿಸಿದ್ದು, ಪಂಡಿತ ದೀನದಯಾಳ ಉಪಾದ್ಯಾಯ ಅವರ ಜನ್ಮದಿನದಿಂದ ಕಾರ್ಯರೂಪಕ್ಕೆ ಬಂದಿದೆ. ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಧಾನಮಂತ್ರ ಜನ ಆರೋಗ್ಯ ಯೋಜನೆ ಅಥವಾ ಮೋದಿ ಕೇರ್ ಅಂತಲೂ ಕರೆಯಲಾಗುತ್ತದೆ.
ರಾಷ್ಟ್ರೀಯ ಆರೋಗ್ಯ ರಕ್ಷಣಾ ಮಿಷನ್ (ಎಬಿ-ಎನ್ಎಚ್ ಪಿಎಂ) ಭಾಗವಾಗಿರುವ ಆಯುಷ್ಮಾನ್ ಭಾರತ್ ಯೋಜನೆಯು 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸೌಲಭ್ಯ ಒದಗಿಸುವ ಗುರಿ ಹೊಂದಿದೆ. ಒಂದು ಕುಟುಂಬಕ್ಕೆ ವಾರ್ಷಿಕವಾಗಿ ರೂ. 5 ಲಕ್ಷದವರೆಗೆ ಆರೋಗ್ಯ ವಿಮೆ ಕಲ್ಪಿಸಲಾಗುತ್ತದೆ. ಪ್ರಸ್ತುತ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯಗಳ ಆರೋಗ್ಯ ಯೋಜನೆ, ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ ಫಲಾನುಭವಿಗಳು ಕೂಡ ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳಾಗಲಿದ್ದಾರೆ. ಮುಖ್ಯಮಂತ್ರಿ ಸ್ವ ಉದ್ಯೋಗ ಯೋಜನೆಗೆ (CMEGP) ನೋಂದಣಿ, ಅರ್ಜಿ ಸಲ್ಲಿಸುವುದು ಹೇಗೆ?
ಆಯುಷ್ಮಾನ್ ಮಿತ್ರದಡಿ 10 ಲಕ್ಷ ಉದ್ಯೋಗ
ಆಯುಷ್ಮಾನ್ ಭಾರತ್ ಯೋಜನೆಯ ಆಯುಷ್ಮಾನ್ ಮಿತ್ರದಡಿ ದೇಶದ ಸುಮಾರು ಹತ್ತು ಲಕ್ಷ ಯುವಕರಿಗೆ ಮುಂದಿನ ಐದು ವರ್ಷಗಳಲ್ಲಿ ಉದ್ಯೋಗ ಕಲ್ಪಿಸುವ ಗುರಿಯನ್ನು ಹೊಂದಿದೆ. ಇದನ್ನು ಆಯುಷ್ಮಾನ್ ಮಿತ್ರ ಎಂದು ಕರೆಯಲಾಗುತ್ತದೆ. ಸರ್ಕಾರ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಿದ್ದು, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯುಷ್ಮಾನ್ ಮಿತ್ರ ಅರ್ಹತೆ?
- ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಶೈಕ್ಷಣಿಕ ಅರ್ಹತೆ: 10+2/12th
- ವಯಸ್ಸಿನ ಮಿತಿ: 18 - 40 ವರ್ಷ
- ಮಹಿಳೆ/ಮಾನ್ಯತೆ ಇರುವ ಸಾಮಾಜಿಕ ಆರೋಗ್ಯ ಕಾರ್ಯಕರ್ತರು/ಆರೋಗ್ಯ ಆರೈಕೆಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ
- ಬೇಸಿಕ್ ಕಂಪ್ಯೂಟರ್/ಇಂಟರ್ನೆಟ್ ಜ್ಞಾನ, ಅನುಭವ
- ಪ್ರಾದೇಶಿಕ ಭಾಷೆ ಅಥವಾ ಹಿಂದಿ, ಇಂಗ್ಲಿಷ ಭಾಷೆ ಬಲ್ಲವರಾಗಿರಬೇಕು.
ಆಯುಷ್ಮಾನ್ ಮಿತ್ರ ತರಬೇತಿ
- ಆಯ್ಕೆಯಾದ ಅಭ್ಯರ್ಥಿಗಳಿಗೆ ಅಗತ್ಯ ತರಬೇತಯನ್ನು ನೀಡಲಾಗುವುದು.
- ಆಸಕ್ತ ಅಭ್ಯರ್ಥಿಗಳು ಆಯುಷ್ಮಾನ್ ಮಿತ್ರಕ್ಕೆ ಬರುವ ಮುನ್ನವೇ ತರಬೇತಿ ಪಡೆಯಬಹುದು.
- ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಇಲಾಖೆಯು ಹಲವಾರು ಕೋರ್ಸ್ ಗಳನ್ನು ಹೊಂದಿದೆ.
- ಈಗಾಗಲೇ ತರಬೇತಿ ಪಡೆದಿರುವ ಅನುಭವವಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
- ತರಬೇತಿ ಪೂರ್ಣಗೊಂಡ ನಂತರ ಪ್ರಮಾಣಪತ್ರ ನೀಡಲಾಗುವುದು.
ಆಯುಷ್ಮಾನ್ ಮಿತ್ರ ಸಂಬಳ
- ಸರ್ಕಾರ ಯಾವುದೇ ಅಧಿಕೃತ ಮೊತ್ತವನ್ನು ಉಲ್ಲೇಖಿಸದಿದ್ದರೂ, ತಿಂಗಳಿಗೆ ರೂ. 15 ಸಾವಿರದವರೆಗೆ ಸಂಬಳ ನೀಡುವ ಸಾದ್ಯತೆ ಇದೆ.
- ಸಂಬಳದ ಹೊರತಾಗಿ ಒಬ್ಬ ರೋಗಿಯ ಮೇಲೆ ರೂ. ೫೦ ಪ್ರೋತ್ಸಾಹ ಧನ ಸಿಗುತ್ತದೆ.
ಆಯುಷ್ಮಾನ್ ಮಿತ್ರ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
- ಆಯುಷ್ಮಾನ್ ಭಾರತ್ ಯೋಜನೆಯ ಅಧಿಕೃತ ವೆಬ್ಸೈಟ್ https://www.abnhpm.gov.in/work-with-nha ಅಥವಾ www.abnhpm.gov.in ಗೆ ಬೇಟಿ ನೀಡಿ.
- ಆಯುಷ್ಮಾನ್ ಮಿತ್ರ ನೇಮಕಾತಿ (ayushman mitra recruitment) ಮೇಲೆ ಕ್ಲಿಕ್ ಮಾಡಿ. () ಉಲ್ಲೇಖಿಸಲಾಗಿರುವ ಸೂಚನೆಗಳನ್ನು ಅನುಸರಿಸಿ.
- ಅರ್ಜಿಯನ್ನು ತುಂಬಿ
- ಅರ್ಜಿಯನ್ನು ಸಬ್ಮಿಟ್ ಮಾಡಿ.
ಹೆಚ್ಚಿನ ಮಾಹಿತಿಗಾಗಿ
ಆಯಷ್ಮಾನ್ ಭಾರತ್ ಸೌಲಭ್ಯ ಯಾರಿಗೆ ಸಿಗಲಿದೆ?
ಜಾತಿ ಗಣತಿ/ಪಡಿತರ ಚೀಟಿ ಮಾನದಂಡದ ಆಧಾರದ ಮೇಲೆ ವಿಮೆ ಸಗಲಿದೆ.
- ಪ.ಜಾತಿ/ಪ.ಪಂಗಡ ಬುಡಕಟ್ಟು ಸಮುದಾಯದವರು
- ನಿರ್ವಸಿತರು (ವಸತಿ ಸೌಲಭ್ಯ ಇಲ್ಲದವರು)
- ಒಂದು ಕೊಠಡಿಯಲ್ಲಿ ವಾಸಿಸುವ ಕುಟುಂಬಗಳು
- ಕೂಲಿ ಕಾರ್ಮಿಕರು, ಜೀತ ವಿಮುಕ್ತರು
- ರದ್ದಿ ಆಯುವವರು, ಭಿಕ್ಷುಕರು, ಪೌರಕಾರ್ಮಿಕರು - ಕಟ್ಟಡ ಕಾರ್ಮಿಕರು, ಮನೆ ಕೆಲಸದವರು, ಕುಸುರಿ ಕೆಲಸಗಾರರು
- ಟೈಲರ್, ಪ್ಲಂಬರ್, ಸಾರಿಗೆ ನೌಕರರು, ರಿಕ್ಷಾವಾಲಾಗಳು
- ಎಲೆಕ್ಟ್ರಿಷಿಯನ್, ಮೆಕಾನಿಕ್, ಸಹಾಯಕರು
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tejasvi Surya: ಹೋಟೆಲ್ ಉದ್ಯಮದ ಬೆಂಬಲಕ್ಕೆ ನಿಂತ ತೇಜಸ್ವಿ ಸೂರ್ಯ; LPG ಗ್ಯಾಸ್ ಪೂರೈಸುವಂತೆ ಮನವಿ

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications