ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಆಡಳಿತಕ್ಕೆ ಬಂದ ನಂತರ ತೆಗೆದುಕೊಂಡ ಬಹುಮುಖ್ಯ ನಿರ್ಧಾರಗಳಲ್ಲಿ ಸಾಲ ಮನ್ನಾ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿ ಕೆಲ ತಿಂಗಳುಗಳೇ ಕಳೆದಿವೆ.
ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಆಡಳಿತಕ್ಕೆ ಬಂದ ನಂತರ ತೆಗೆದುಕೊಂಡ ಬಹುಮುಖ್ಯ ನಿರ್ಧಾರಗಳಲ್ಲಿ ಸಾಲ ಮನ್ನಾ ಪ್ರಮುಖವಾದದ್ದು. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿ ಕೆಲ ತಿಂಗಳುಗಳೇ ಕಳೆದಿವೆ. ಹಾಗಿದ್ದರೆ ಬೆಳೆ ಸಾಲ ಮನ್ನಾ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೆ? ಸಾಲ ಮನ್ನಾ ಆಗಿದೆಯೇ? ಇತ್ಯಾದಿ ಗೊಂದಲಗಳು ನಿಮ್ಮಲ್ಲಿರುವುದು ಸಹಜ. ಹಾಗಿದ್ದರೆ ಬನ್ನಿ ಇಲ್ಲಿ ಚೆಕ್ ಮಾಡೋಣ.. ಪಿಎಂ ಕಿಸಾನ್ ಯೋಜನೆ: ರೈತರು 6 ಸಾವಿರ ಸಹಾಯಧನ ಪಡೆಯುವುದು ಹೇಗೆ?
ಋಣಮುಕ್ತ ಪತ್ರ
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈಗಾಗಲೇ ರೈತರ ಬೆಳೆ ಸಾಲ ಮನ್ನಾ ಮಾಡಿ ಘೋಷಣೆ ಮಾಡಿದ್ದಾರೆ. ಆದರೆ, ಸಾಲ ಮನ್ನಾ ಮಾಡುವುದಾಗಿ ಘೋಷಣೆಯಾಗಿ ಐದಾರು ತಿಂಗಳುಗಳೇ ಕಳೆದರೂ ಸಾಲ ಮನ್ನಾ ಆಗಿರುವ ಹಣ ಸಿಕ್ಕಿಲ್ಲ. ಬ್ಯಾಂಕುಗಳಿಂದ ಇದುವರೆಗೂ ರೈತರಿಗೆ ಯಾವುದೇ ಋಣಮುಕ್ತ ಪತ್ರ ಸಿಕ್ಕಿಲ್ಲ. ಹೀಗಾಗಿ ರೈತರು ಸಾಲ ಮನ್ನಾ ಆಗಿದೆಯೋ ಇಲ್ಲವೋ ಎಂಬ ಗೊಂದಲದಲ್ಲಿದ್ದಾರೆ.
ವೆಬ್ಸೈಟ್ ನಲ್ಲಿ ಚೆಕ್ ಮಾಡಿ
ಸಾಲ ಮನ್ನಾ ಹಾಗು ಋಣಮುಕ್ತ ಪತ್ರ ವಿಷಯವಾಗಿ ಮಾಹಿತಿ ನೀಡಲು ಸರ್ಕಾರ ವೆಬಸ್ಐಟ್ ನಲ್ಲಿ ಮಾಹಿತಿ ಪ್ರಕಟಿಸಿದೆ. ಯಾವೆಲ್ಲ ರೈತರ ಸಾಲ ಮನ್ನಾ ಆಗಿದೆ ಎಂಬುದನ್ನು (http://clws.karnataka.gov.in/clws/pacs/pacsreports/)ಲಿಂಕ್ ಮೂಲಕ ತಿಳಿದುಕೊಳ್ಳಬಹುದು.
ಮೊದಲ ಹಂತ
ಮೊದಲು ಇಲ್ಲಿ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ನಿಮಗೆ ಸಂಬಂಧಿಸಿದ ಜಿಲ್ಲೆ, ತಾಲೂಕು, ಬ್ಯಾಂಕ್ ಹೆಸರು, ಬ್ರಾಂಚ್ ಆಯ್ಕೆ ಮಾಡಿ. (http://clws.karnataka.gov.in/clws/pacs/pacsreports/BankVerified.aspx)
ಸಾಲ ಮನ್ನಾ ವೆರಿಫೀಕೆಶನ್ ಸ್ಟೇಟಸ್
ಶಾಖೆಗಳಿಗನುಗುಣವಾಗಿ ಒಂದು ಜಿಲ್ಲೆಯ ಎಲ್ಲಾ ತಾಲೂಕುಗಳ ಸಾಲ ಮನ್ನಾ ವೆರಿಫೀಕೆಶನ್ ಸ್ಟೇಟಸ್ ವರದಿಯನ್ನು ನೋಡಬಹುದು. (http://clws.karnataka.gov.in/clws/pacs/pacsreports/BranchWiseCropLoanVerificationStatus.aspx) ವರದಿ ನಂತರ ಎಕ್ಸ್ಪೋರ್ಟ್ ಟು ಎಕ್ಸೆಲ್ ಮೇಲೆ ಕ್ಲಿಕ್ ಮಾಡಿ. ಆಗ ಯಾವ ಶಾಖೆಯಲ್ಲಿ ಯಾವೆಲ್ಲ ರೈತರ ಸಾಲ ಮನ್ನಾ ಆಗಿದೆ ಎಂಬುದರ ಪಟ್ಟಿ ಕಾಣಿಸಿಕೊಳ್ಳುತ್ತದೆ. ಆನ್ಲೈನ್ ನಲ್ಲಿ ನಿಮ್ಮ ಸಾಲ ಮನ್ನಾ ಆಗಿರುವುದನ್ನು ಚೆಕ್ ಮಾಡಿಕೂಳ್ಳುವುದಕ್ಕೆ ಈ ಮೇಲಿನ ಹಂತಗಳನ್ನು ಅನುಸರಿಸಿ.
ಹೆಚ್ಚಿನ ಮಾಹಿತಿ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ
ಈಗಾಗಲೇ ಎಚ್ ಡಿ ಕುಮಾರಸ್ವಾಮಿಯವರು ರಾಷ್ಟ್ರೀಕೃತ ಬ್ಯಾಂಕುಗಳ ರೂ. 2 ಲಕ್ಷದವರೆಗಿನ ಸುಸ್ತಿ ಸಾಲ ಮನ್ನಾ ಘೋಷಣೆ ಮಾಡಿದ್ದಾರೆ.. ಇದರಿಂದ 17 ಲಕ್ಷ ಮಂದಿ ರೈತರು ಸುಸ್ತಿ ಸಾಲ ಮನ್ನಾದ ಲಾಭ ಪಡೆಯಲಿದ್ದಾರೆ.
ರೂ. 2 ಲಕ್ಷ ವರೆಗಿನ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಜೊತೆಗೆ ರೂ. 25 ಸಾವಿರದವರೆಗಿನ ಚಾಲ್ತಿ ಬೆಳೆ ಸಾಲ ಮನ್ನಾ ಮಾಡುವ ಬಗ್ಗೆ ಕೂಡ ಹೇಳಿದ್ದರು. ಇದರಿಂದ ಸರ್ಕಾರಕ್ಕೆ ರೂ. 32,000 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications