ಭಾರತ ಸರ್ಕಾರ ದೇಶದ ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಪರಿಚಯಿಸಿದ್ದು, ಕೈಗೆಟಕುವ ದರದಲ್ಲಿ ಸಾಲ ಒದಗಿಸಲು ಇದು ಸಹಾಯಕವಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಬೇಕೆಂದರೆ ಇನ್ಮುಂದೆ ಮೂರು ದಾಖಲೆಗಳನ್ನು ಸಲ್ಲಿಸಬೇಕು.
ಭಾರತ ಸರ್ಕಾರ ದೇಶದ ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಪರಿಚಯಿಸಿದ್ದು, ಕೈಗೆಟಕುವ ದರದಲ್ಲಿ ಸಾಲ ಒದಗಿಸಲು ಇದು ಸಹಾಯಕವಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಪಡೆಯಬೇಕೆಂದರೆ ಇನ್ಮುಂದೆ ಮೂರು ದಾಖಲೆಗಳನ್ನು ಸಲ್ಲಿಸಬೇಕು ಎಂದು ಕೇಂದ್ರ ಕೃಷಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ.
ರೈತರು ತಮ್ಮ ಕೃಷಿ ಅಗತ್ಯಗಳಿಗಾಗಿ ಬೀಜಗಳು, ಕೀಟನಾಶಕಗಳು, ರಸಗೊಬ್ಬರಗಳು ಇತ್ಯಾದಿಗಳನ್ನು ಖರೀದಿಸಲು ಸಾಂಸ್ಥಿಕ ಹನಕಾಸು ಮೂಲಗಳನ್ನು ಹೆಚ್ಚಾಗಿ ಅವಲಂಬಿಸಬೇಕಾಗಿರುವುದರಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಕಲ್ಪಿಸಲಾಗಿದೆ. ನಿಮ್ಮ ಬೆಳೆ ಸಾಲ ಮನ್ನಾ ಆಗಿದೆಯೋ? ಇಲ್ಲವೋ? ಇಲ್ಲಿ ಚೆಕ್ ಮಾಡಿ..
ಮೂರು ದಾಖಲಾತಿಗಳು
- ಕಿಸಾನ್ ಕಾರ್ಡ್ ಪಡೆಯಲು ಇಚ್ಚಿಸುವ ರೈತರು ಮೊದಲಿಗೆ ತಾವು ರೈತ ಎಂಬುದಕ್ಕೆ ಸಾಕ್ಷಿ ಒದಗಿಸಬೇಕು.
- ವಾಸದ ದೃಢೀಕರಣ ಪತ್ರ ಒದಗಿಸಬೇಕು.
- ಮೂರನೆಯದಾಗಿ ಬ್ಯಾಂಕ್ ನಲ್ಲಿ ಯಾವುದೇ ಸಾಲ ಉಳಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಲು ಅಫಿಡವಿಟ್ ಸಲ್ಲಿಸುವಂತೆ ತಿಳಿಸಲಾಗಿದೆ.
ಈ ಮೂರು ದಾಖಲೆಗಳೊಂದಿಗೆ ಕಿಸಾನ್ ಕಾರ್ಡ್ ಪಡೆಯಬಹುದು.
ರೂ. 3 ಲಕ್ಷದವರೆಗೆ ಸಾಲ
ಈ ಯೋಜನೆ ಮೂಲಕ ರೈತರು ಕೃಷಿ ಮೇಲೆ ರೂ. 3 ಲಕ್ಷದವರೆಗೆ ಸಾಲ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರ ಈ ಯೋಜನೆಯನ್ನು ಕೇವಲ ಕೃಷಿಕರಿಗೆ ಮಾತ್ರ ಸೀಮಿತವಾಗಿಸಿಲ್ಲ. ಬದಲಿಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆಗೂ ಸಾಲ ನೀಡುತ್ತಿದೆ.
ಶೇ.7 ಬಡ್ಡಿ ದರ
ಈ ಸಾಲವನ್ನು ರಾಜ್ಯ ಸರ್ಕಾರಗಳು ಬ್ಯಾಂಕ್ ಮತ್ತು ಗ್ರಾಮ ಪಂಚಾಯತಿ ಸಹಾಯದಿಂದ ವಿತರಿಸಬಹುದಾಗಿದೆ.
ಇನ್ನು 3 ಲಕ್ಷದವರೆಗಿನ ಸಾಲಕ್ಕೆ ಇಲ್ಲಿ ಶೇ.7 ರಷ್ಟು ಬಡ್ಡಿ ದರವನ್ನು ವಿಧಿಸಲಾಗಿದೆ. ಅಲ್ಲದೆ ಈ ಸಾಲದ ಮೊತ್ತವನ್ನು 1 ವರ್ಷದೊಳಗೆ ಮರು ಪಾವತಿಸಿದರೆ ಶೇ. 3 ರಷ್ಟು ರಿಯಾಯಿತಿ ಪಡೆಯಬಹುದಾಗಿದೆ.
ಕಾರ್ಡ್ ಒದಗಿಸುವ ಬ್ಯಾಂಕುಗಳು
ಕಿಸಾನ್ ಕ್ರೆಡಿಟ್ ಕಾರ್ಡ್ ಅನೇಕ ಸಾರ್ವಜನಿಕ ವಲಯದ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಮತ್ತು ಭಾರತದ ಗ್ರಾಮೀಣ ಬ್ಯಾಂಕುಗಳಿಂದ ನೀಡಲ್ಪಡುತ್ತದೆ. ಅವುಗಳಲ್ಲಿ ಕೆಲವು:
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)
- ಬ್ಯಾಂಕ್ ಆಫ್ ಇಂಡಿಯಾ (BOI)
- ಇಂಡಿಯಾ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ)
- ನಬಾರ್ಡ್
- ನ್ಯಾಷನಲ್ ಪೇಮೆಮಟ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ಪಿಸಿಐ) ಪಿಎಂ ಕಿಸಾನ್ ಯೋಜನೆ: ರೈತರು 6 ಸಾವಿರ ಸಹಾಯಧನ ಪಡೆಯುವುದು ಹೇಗೆ?
More From GoodReturns

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications