ಕೇಂದ್ರ ಸರ್ಕಾರ ರೈತ ಪಿಂಚಣಿ ಯೋಜನೆ (ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆ) ನೋಂದಣಿಯನ್ನು ಪ್ರಾರಂಭಿಸಿದೆ. ಕೃಷಿ ಸಚಿವಾಲಯ, ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆಯಡಿ ಆಗಸ್ಟ್ 9 ರಿಂದ ರೈತರ ನೋಂದಣಿ ಪ್ರಾರಂಭಿಸಿದೆ.
ರೈತರ ಕಲ್ಯಾಣಕ್ಕಾಗಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಪರಿಚಯಿಸಿವೆ. ಈಗಾಗಲೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಪಿಂಚಣಿ ಯೋಜನೆ (ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆ) ನೋಂದಣಿಯನ್ನು ಪ್ರಾರಂಭಿಸಿದೆ. ಕೃಷಿ ಸಚಿವಾಲಯ, ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆಯಡಿ ಆಗಸ್ಟ್ 9 ರಿಂದ ರೈತರ ನೋಂದಣಿ ಪ್ರಾರಂಭಿಸಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸುವ ಕೆಲಸ ರಾಜ್ಯ ಸರ್ಕಾರದೊಂದಿಗೆ ನಡೆಯುತ್ತಿದೆ.
ನೋಂದಣಿ ಆರಂಭ
ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆ (ಪಿಎಂಕೆಪಿವೈ) ಅಡಿಯಲ್ಲಿ 5 ಕೋಟಿ ರೈತರಿಗೆ 60 ವರ್ಷ ದಾಟಿದ ನಂತರ ರೂ. 3000 ಪಿಂಚಣಿ ಸಿಗಲಿದೆ. ಒಂದು ವೇಳೆ ಫಲಾನುಭವ ಪಡೆಯಬೇಕಿದ್ದ ರೈತ ಸಾವನ್ನಪ್ಪಿದ್ದರೆ ಅವರ ಪತ್ನಿಗೆ ಶೇ. 50ರಷ್ಟು ಪ್ರಯೋಜನ ಸಿಗಲಿದೆ. ಭಾರತಿಯ ವಿಮಾ ನಿಗಮ (ಎಲ್ಐಸಿ) ಇದರ ನಿರ್ವಹಣೆಯ ಜವಾಬ್ಧಾರಿ ಹೊರಲಿದೆ. ಈಗಾಗಲೇ ರೈತರು ತಮ್ಮ ಹೆಸರನ್ನು ನೋಂದಾಯಿಸಲು ಪ್ರಾರಂಭಿಸಿದ್ದಾರೆ.
ಸರ್ಕಾರದಿಂದ ಅರ್ಧ ಹಣ
ಮಾಸಿಕವಾಗಿ ರೈತರು ಪಾವತಿಸುವ ಮೊತ್ತದಷ್ಟೇ ಸರ್ಕಾರವು ಹಣವನ್ನು ಪಾವತಿ ಮಾಡಲಿದೆ. ಅಂದರೆ ರೈತರು ಠೇವಣಿ ಇರಿಸುವ ಕಂತಿಗೆ ಸಮನಾದ ಕಂತು ಮೊತ್ತ ಸರ್ಕಾರ ಜಮಾ ಮಾಡುತ್ತದೆ. ರೈತರಿಗೆ 60 ವರ್ಷದ ನಂತರ ಪಾವತಿಸಿದ ಹಣ ಹಾಗೂ ಅದರ ಬಡ್ಡಿ ಸಿಗಲಿದೆ. ಯಾರಾದರೂ ಮಧ್ಯದಲ್ಲಿಯೇ ಯೋಜನೆಯಿಂದ ಹೊರ ಬರಲು ಬಯಸಿದರೆ ಠೇವಣಿ ಮೊತ್ತ ಮತ್ತು ಬಡ್ಡಿದರ ಪಡೆಯುತ್ತಾರೆ.
ರೈತ ಸಾವನ್ನಪ್ಪಿದರೆ?
ಒಂದು ವೇಳೆ 60 ವರ್ಷಗಳ ಒಳಗಾಗಿ ರೈತ ಸಾವನ್ನಪ್ಪಿದರೆ ಪತ್ನಿಗೆ ಪ್ರತಿ ತಿಂಗಳು ರೂ. 1500 ಪಿಂಚಣಿ ಸಿಗಲಿದೆ.
60 ವರ್ಷಗಳ ನಂತರ ಪ್ರಧಾನ ಮಂತ್ರಿ ಕಿಸಾನ್ ಪಿಂಚಣಿ ಯೋಜನೆಯಡಿ ರೈತರಿಗೆ ಪ್ರತಿ ವರ್ಷ 3 ಸಾವಿರ ರೂಪಾಯಿ ಸಿಗಲಿದೆ.
ಪಿಎಂ ಕಿಸಾನ್ ಪಿಂಚಣಿ ನೋಂದಣಿ ಹೇಗೆ?
ರೈತರು ಕಿಸಾನ್ ಕಾಲ್ ಸೆಂಟರ್ ನಂಬರ್ 1800-180-1551 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಇದಲ್ಲದೆ, ನಿಮ್ಮ ಭಾಗದ ಸಾಮಾನ್ಯ ಸೇವಾ ಕೇಂದ್ರ (CSC) ಮತ್ತು ರಾಜ್ಯ ನೋಡಲ್ ಅಧಿಕಾರಿ (ಪಿಎಂ-ಕಿಸಾನ್) ಬಳಿ ನಿಮ್ಮ ಹೆಸರನ್ನು ನೋಂದಾಯಿಸಬಹುದು.
ನಿಯಮ-ಅರ್ಹತೆಗಳೇನು?
- ಇದು ಸ್ವಯಂಪ್ರೇರಿತ ಮತ್ತು ಕೊಡುಗೆ ಪಿಂಚಣಿ ಯೋಜನೆಯಾಗಿದ್ದು, ಇದರಲ್ಲಿ 18 ರಿಂದ 40 ವರ್ಷ ವಯಸ್ಸಿನವರು ಇರುತ್ತಾರೆ.
- ಸಣ್ಣ ಮತ್ತು ಅತಿಸಣ್ಣ ರೈತರಿಗೆ ಈ ಯೋಜನೆಯ ಲಾಭ ಸಿಗಲಿದೆ.
- ಈ ಯೋಜನೆ ಮೊದಲ ಮೂರು ವರ್ಷಗಳಲ್ಲಿ 5 ಕೋಟಿ ಸಣ್ಣ ಮತ್ತು ಅತಿಸಣ್ಣ ರೈತರನ್ನು ತಲುಪುವ ಗುರಿ ಹೊಂದಿದೆ.
- ಈ ಯೋಜನೆಯನ್ನು ಕೇಂದ್ರ ಸರ್ಕಾರವು ಸಂಪೂರ್ಣವಾಗಿ ನಿರ್ವಹಿಸಲಿದೆ.
- ಈ ಯೋಜನೆಗಾಗಿ ಕೇಂದ್ರ ಸರ್ಕಾರ ಮೂರು ವರ್ಷಗಳ ಕಾಲಾವಧಿಗೆ ರೂ. 10774.50 ಕೋಟಿ ಮೀಸಲಿಟ್ಟಿದೆ.
- ಪಿಎಂ-ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳು ಈ ಯೋಜನೆಗೆ ನೇರವಾಗಿ ಸೇರಬಹುದು.
- ಫಲಾನುಭವಿಗೆ ತಿಂಗಳಿಗೆ ರೂ. 3 ಸಾವಿರ ಪಿಂಚಣಿ ಸಿಗುತ್ತದೆ.
- ಈ ಯೋಜನೆಯಡಿ, ತಿಂಗಳಿಗೆ ರೂ. 55 ರಿಂದ 100 ನಾಮಮಾತ್ರ ಕಂತು ಠೇವಣಿ ಇಡಬೇಕಾಗುತ್ತದೆ.
- ರೈತರು ಠೇವಣಿ ಇರಿಸುವ ಕಂತಿಗೆ ಸಮನಾದ ಕಂತು ಮೊತ್ತ ಸರ್ಕಾರ ಜಮಾ ಮಾಡುತ್ತದೆ.
- ಪಿಂಚಣಿದಾರರ ಮರಣದ ನಂತರ, ಅವರ ಸಂಗಾತಿಯು ಪಿಂಚಣಿಯ ಶೇ. 50 ರಷ್ಟು ಮೊತ್ತ ಪಡೆಯಬಹುದು.
- ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳು ಈ ಯೋಜನೆಗೆ ಸೇರುವ ಮೂಲಕ ನೇರವಾಗಿ ವಿಮಾ ಕಂತು ಪಾವತಿಸಬಹುದು.
ದಾಖಲಾತಿಗಳೇನು?
- ಆಧಾರ್ ಕಾರ್ಡ್ - ಅರ್ಜಿ ಸಲ್ಲಿಸುವ ರೈತರಿಗೆ ಆಧಾರ್ ಕಾರ್ಡ್ ಇರುವುದು ಅವಶ್ಯಕ.
- ಆದಾಯ ದಾಖಲಾತಿಯನ್ನು ರೈತರು ಒದಗಿಸಬೇಕಾಗುತ್ತದೆ. ಕೃಷಿ ಭೂಮಿ ವಿವರ ನೀಡಬೇಕು.
- ಉಳಿತಾಯ ಖಾತೆ/ಜನ ಧನ್ ಖಾತೆ- ಬ್ಯಾಂಕ್ ಪಾಸ್ಬುಕ್ ಹೊಂದಿರಬೇಕು.
- ರೈತರು ಮೊಬೈಲ್ ಸಂಖ್ಯೆಯನ್ನು ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ಗೆ ಲಿಂಕ್ ಮಾಡಬೇಕು.
- ರೇಷನ್ ಕಾರ್ಡ್, ಎರಡು ಪೋಟೋಗಳು
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications