ಬೆಂಗಳೂರು, ಜನವರಿ 15: ವಿಶ್ವದ ಯಶಸ್ವಿ ಹಾಗೂ ಶ್ರೀಮಂತ ಕೈಗಾರಿಕೋದ್ಯಮಿಗಳ ಪೈಕಿ ಭಾರತದ ಮುಕೇಶ್ ಅಂಬಾನಿ ಮುಂಚೂಣಿಯಲ್ಲಿದ್ದಾರೆ. ಏಕೆಂದರೆ ರಿಲಯನ್ಸ್ 1,79,000 ಕೋಟಿ ರೂ. ಗಿಂತಲೂ ಅಧಿಕ ಮಾರುಕಟ್ಟೆ ಕ್ಯಾಪ್ ಹೊಂದಿರುವ ದೇಶದ ಅತ್ಯಂತ ಮೌಲ್ಯಯುತವಾದ ಕಂಪನಿ ಅಂಬಾನಿ ಅವರ ರಿಲಯನ್ಸ್ ಇಂಡಸ್ಟ್ರೀಸ್.
ಮುಕೇಶ್ ಅವರು ಪ್ರಸ್ತುತ 8,29,514 ಕೋಟಿ ರೂ. ನಿವ್ವಳ ಲಾಭದೊಂದಿಗೆ ಭಾರತದ ಹಾಗೂ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಹೀಗಿರುವಾಗ, ಮುಕೇಶ್ ಅಂಬಾನಿ ಹಾಗೂ ಅವರ ಕುಟುಂಬಸ್ಥರು ವೀರೇನ್ ಮರ್ಚೆಂಟ್, ರಸೆಲ್ ಮೆಹ್ತಾ ಹಾಗೂ ಇತರರೊಂದಿಗೆ ಸಂಬಂಧವನ್ನು ಹೊಂದಿದ್ದಾರೆ. ಆ ಪೈಕಿ ಮುಕೇಶ್ ಅಂಬಾನಿ ಕುಟುಂಬದೊಂದಿಗೆ ಬಹಳ ಹತ್ತಿರದ ಸಂಬಂಧ ಹೊಂದಿರುವ ಶ್ರೀಮಂತ ಕುಟುಂಬ ಅರವಿಂದ್ ಪೋದಾರ್. 29126 ಕೋಟಿ ರೂ. ನಿವ್ವಳ ಆಸ್ತಿ ಮೌಲ್ಯದೊಂದಿಗೆ ಪೋದಾರ್ ಅವರು ಭಾರತ ಹಾಗೂ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು.

ಅರವಿಂದ ಪೋದಾರ್ ಅವರು ಜನಪ್ರಿಯ ಬಾಲಕೃಷ್ಣ ಇಂಡಸ್ಟ್ರೀಸ್ ಅನ್ನು ಸ್ಥಾಪಿಸಿರುವ ಮಹಾಬೀರಪ್ರಸಾದ್ ಪೋದಾರ್ ಅವರ ಮಗ. ಬಿಕೆಟಿ ಎಂದು ಹೆಸರುವಾಸಿಯಾಗಿರುವ ಬಾಲಕೃಷ್ಣ ಇಂಡಸ್ಟ್ರೀಸ್ 49654 ಕೋಟಿ ರೂ. ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ. ಈ ಕಂಪನಿಯು ಕೃಷಿ, ಗಣಿಗಾರಿಕೆ ಹಾಗೂ ನಿರ್ಮಾಣ ಕ್ಷೇತ್ರದ ವಾಹನಗಳಿಗೆ ಬಿಡಿಭಾಗಗಳು ಹಾಗೂ ಆಫ್ರೋಡ್ ಟೈರ್ಗಳನ್ನು ತಯಾರಿಸುತ್ತಿದೆ. ಈ ಕಂಪನಿಯನ್ನು ಪ್ರಸ್ತುತ ಅರವಿಂದ್ ಪೋದಾರ್ ಅವರು ಮುನ್ನಡೆಸುತ್ತಿದ್ದಾರೆ. ಹಾಗಾದರೆ, ಅರವಿಂದ್ ಕುಟುಂಬ ಅಂಬಾನಿ ಅವರ ಕುಟುಂಬದೊಂದಿಗೆ ಹೇಗೆ ಸಂಬಂಧ ಹೊಂದಿದೆ ಎನ್ನುವುದು ನಿಮಗೆ ಆಶ್ಚರ್ಯವಾಗಬಹುದು.
ಅರವಿಂದ್ ಪೋದಾರ್ ಅವರ ಮಗ ರಾಜೀವ್ ಪೋದಾರ್ ಅವರು ಮನೋಜ್ ಮೋದಿ ಅವರ ಮಗಳನ್ನು ಮದುವೆಯಾಗಿದ್ದಾರೆ. ಮನೋಜ್ ಮೋದಿ ಅವರು ಅಂಬಾನಿ ಅವರ ಬಹಳ ವಿಶ್ವಾಸಾರ್ಹ ವ್ಯಕ್ತಿಯಾಗಿದ್ದು, ರಿಲಯನ್ಸ್ ಕಂಪನಿಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ವ್ಯಕ್ತಿಯಾಗಿದ್ದಾರೆ. ಮೋದಿ ಅವರಿಗೆ ಅಂಬಾನಿ ಅವರು ಅಂಟಿಲಾದಲ್ಲಿ 1500 ಕೋಟಿ ರೂ. ಮೌಲ್ಯದ ಮನೆಯನ್ನು ಗಿಫ್ಟ್ ಮಾಡಿದ್ದಾರೆ.
ಅರವಿಂದ್ ಪೋದಾರ್ ಅವರು ಫೋರ್ಬ್ಸ್ ಪಟ್ಟಿಯ ಪ್ರಕಾರ ಭಾರತದ 59ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಕೃಷಿ ಹಾಗೂ ಕೈಗಾರಿಕಾ ವಲಯದ ವಾಹನಗಳಿಗೆ ಪೂರಕವಾಗುವ ಟೈರ್ ತಯಾರಿಸುವ ಘಟಕವನ್ನು ಮಹಾರಾಷ್ಟ್ರದಲ್ಲಿ 2021ರಲ್ಲಿ ಸ್ಥಾಪಿಸಿದ್ದಾರೆ. ಹಲವು ಬಿಲಿಯನೇರ್ಗಳಂತೆ ಅರವಿಂದ್ ಪೋದಾರ್ ಹಾಗೂ ಅವರ ಕುಟುಂಬವು ಸಾರ್ವಜನಿಕ ಬದುಕಿನಲ್ಲಿ ಹೆಚ್ಚು ಗುರುತಿಸಿಕೊಳ್ಳದೆ ಪ್ರಚಾರಗಳಿಂದ ದೂರ ಉಳಿದಿದ್ದಾರೆ.
ಅರವಿಂದ್ ಪೋದಾರ್ ಅವರು ತಮ್ಮ ಕಂಪನಿಯಲ್ಲಿ ಅಧ್ಯಕ್ಷರಾಗಿದ್ದು, ಮಗ ರಾಜೀವ್ ಪೋದಾರ್ ಅವರು ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ರಾಜೀವ್ ಪೋದಾರ್ ಅವರ ಪತ್ನಿ, ಮನೋಜ್ ಮೋದಿ ಅವರ ಮಗಳು ಖುಷ್ಬೂ ಪೋದಾರ್ ಕಂಪನಿಯಲ್ಲಿ ಜಂಟಿ ವ್ಯವಸ್ಥಾಪಕರಾಗಿದ್ದಾರೆ. ಬಾಲಕೃಷ್ಣ ಇಂಡಸ್ಟ್ರೀಸ್ ಕಂಪನಿಯು 1951ರಲ್ಲೇ ಟೈರ್ ಉತ್ಪಾದನಾ ಕ್ಷೇತ್ರಕ್ಕೆ ಕಾಲಿಟ್ಟಿತ್ತು. ಪ್ರಸ್ತುತ ಅಮೆರಿಕಾ, ಯುರೋಪ್ ದೇಶಗಳಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications