ಈ ಹಿಂದೆ ಕೇಂದ್ರ ಸರ್ಕಾರವು ಮಾರ್ಚ್ ತಿಂಗಳಲ್ಲಿ ತುಟ್ಟಿಭತ್ಯೆಯನ್ನು ಶೇಕಡ 4ರಷ್ಟು ಏರಿಕೆ ಮಾಡಿದೆ. ಇದೀಗ ಮತ್ತೆ ಕೇಂದ್ರ ಸರ್ಕಾರವು ಜುಲೈ ತಿಂಗಳಿನಲ್ಲಿ ತುಟ್ಟಿಭತ್ಯೆಯನ್ನು ಏರಿಕೆ ಮಾಡುವ ಸಾಧ್ಯತೆಯ ಬಗ್ಗೆ ವರದಿಯಾಗಿದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಷ್ಟತೆಯು ದೊರೆತಿಲ್ಲ. ಕಳೆದ ನಾಲ್ಕು ತಿಂಗಳ ಡೇಟಾವನ್ನು ಪರಿಶೀಲನೆ ಮಾಡಿ ನೋಡಿದ ತಜ್ಞರ ಪ್ರಕಾರ ಜುಲೈನಲ್ಲಿ ಕೇಂದ್ರ ಸರ್ಕಾರವು ಶೇಕಡ 4ರಷ್ಟು ಡಿಎಯನ್ನು ಹೆಚ್ಚಳ ಮಾಡಲಿದೆ. ಆದರೆ ಕೇಂದ್ರ ಸರ್ಕಾರವು ಡಿಎ ಏರಿಕೆಗೆ ಹೊಸ ಸೂತ್ರವನ್ನು ಜಾರಿ ಮಾಡುವ ಸಾಧ್ಯತೆಯಿದೆ ಎಂದು ಕೂಡಾ ವರದಿಯಾಗಿದೆ.
ಕೇಂದ್ರ ಸಚಿವ ಅನುರಾದ್ ಠಾಕೂರ್ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡ 4ರಷ್ಟು ತುಟ್ಟಿಭತ್ಯೆ ಏರಿಕೆಯ ಘೋಷಣೆಯನ್ನು ಮಾಡಿದ್ದಾರೆ. 7ನೇ ವೇತನ ಆಯೋಗಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರವು ಇತ್ತೀಚೆಗೆ ಮಾಡಿದ ಡಿಎ ಏರಿಕೆ ಬಳಿಕ ಕೇಂದ್ರ ಸರ್ಕಾರಿ ನೌಕರರರಿಗೆ ಲಭ್ಯವಾಗುವ ಡಿಎ ಪ್ರಮಾಣ ಶೇಕಡ 42ಕ್ಕೆ ಏರಿಕೆಯಾಗಿದೆ. ಏಪ್ರಿಲ್ ತಿಂಗಳಿನಿಂದ ಈ ನೂತನ ಡಿಎ ಲಾಭವನ್ನು ಕೇಂದ್ರ ಸರ್ಕಾರಿ ನೌಕರರು ಪಡೆಯಲಿದ್ದಾರೆ.

ಜುಲೈ ಡಿಎ ಏರಿಕೆಗೆ ಹೊಸ ಸೂತ್ರ
ಕಾರ್ಮಿಕ ಇಲಾಖೆಯು ಡಿಎ ಲೆಕ್ಕಾಚಾರದ ಸೂತ್ರವನ್ನು ಪರಿಷ್ಕರಣೆ ಮಾಡಿದೆ ಎಂದು ಝೀ ಬ್ಯುಜಿನೆಸ್ ವರದಿ ಮಾಡಿದೆ. ಕೇಂದ್ರ ಸರ್ಕಾರವು ಡಿಎಯ ಮೂಲ ವರ್ಷವನ್ನು 2016ರಲ್ಲಿ ಬದಲಾಯಿಸಿದೆ, ಹೊಸ ವೇತನ ದರ ಸೂಚ್ಯಂಕವನ್ನು ಜಾರಿ ಮಾಡಿದೆ. (ಡಬ್ಲ್ಯೂಆರ್ಐ-ವೇಜ್ ರೇಟ್ ಇಂಡೆಕ್ಸ್). 2016=100 ಮೂಲ ವರ್ಷದೊಂದಿಗಿನ ಡಬ್ಲ್ಯೂಆರ್ಐ ಹೊಸ ಸೀರಿಸ್ ಅನ್ನು ಮೂಲ ವರ್ಷದ 1963-65 ರ ಹಳೆಯ ಸೀರಿಸ್ಗೆ ಬದಲಾವಣೆ ಮಾಡಲಾಗಿದೆ ಎಂದು ಕಾರ್ಮಿಕ ಸಚಿವಾಲಯ ಹೇಳಿದೆ.
ಡಿಎ ಹೇಗೆ ಲೆಕ್ಕಾಚಾರ ಮಾಡುವುದು?
7ನೇ ವೇತನ ಆಯೋಗದ ಪ್ರಸ್ತುತ ತುಟ್ಟಿಭತ್ಯೆ ದರವನ್ನು ಮೂಲ ವೇತನದೊಂದಿಗೆ ಗುಣಿಸಿ ತುಟ್ಟಿಭತ್ಯೆಯನ್ನು ಲೆಕ್ಕ ಹಾಕಲಾಗುತ್ತದೆ. ಆಗಿದ್ದರೆ, ಪ್ರಸ್ತುತ ಶೇಕಡಾವಾರು ದರವು 12% ಆಗಿರುತ್ತದೆ. ನಿಮ್ಮ ಮೂಲ ವೇತನ ರೂ.56,900 ಆಗಿದ್ದರೆ, ಲೆಕ್ಕಾಚಾರ ಡಿಎ (56,900 x12)/100 ಆಗುತ್ತದೆ. ತುಟ್ಟಿಭತ್ಯೆ ಶೇಕಡವಾರು = ಕಳೆದ 12 ತಿಂಗಳ ಸರಾಸರಿ ಸಿಪಿಐ -115.76 ಎಂದು ಲೆಕ್ಕಾಚಾರವಾಗುತ್ತದೆ. ಇದಾದ ಬಳಿಕ ಬಂದ ಮೊತ್ತವನ್ನು 115.76 ರಿಂದ ಭಾಗಿಸಲಾಗುತ್ತದೆ. ಅದಾದ ಬಳಿಕ ಬರುವ ಸಂಖ್ಯೆಯನ್ನು 100 ರಿಂದ ಗುಣಿಸಲಾಗುತ್ತದೆ.
ತುಟ್ಟಿಭತ್ಯೆ ಮೇಲೆ ತೆರಿಗೆ ವಿಧಿಸಲಾಗುತ್ತದೆಯೇ?: ತುಟ್ಟಿಭತ್ಯೆಯು ಸಂಪೂರ್ಣವಾಗಿ ತೆರಿಗೆಗೆ ಒಳಪಡುತ್ತದೆ. ಭಾರತದಲ್ಲಿನ ಆದಾಯ ತೆರಿಗೆ ನಿಯಮದ ಪ್ರಕಾರ ಆದಾಯ ತೆರಿಗೆ ರಿಟರ್ನ್ (ಐಟಿಆರ್) ನಲ್ಲಿ ತುಟ್ಟಿಭತ್ಯೆಯ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ನೀಡಬೇಕಾಗುತ್ತದೆ.
ಕೇಂದ್ರ ಸರ್ಕಾರವು ತುಟ್ಟಿಭತ್ಯೆ (ಡಿಎ) ಅನ್ನು ಏರಿಕೆ ಮಾಡುವ ನಿರೀಕ್ಷೆಯಲ್ಲಿದ್ದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಿಹಿ ಸುದ್ದಿಯನ್ನು ಮಾರ್ಚ್ನಲ್ಲಿ ಕೇಂದ್ರ ಸರ್ಕಾರವು ನೀಡಿದೆ. ಕೇಂದ್ರ ಸರ್ಕಾರವು ತುಟ್ಟಿ ಭತ್ಯೆ (ಡಿಎ) ಮತ್ತು ಡಿಯರೆನ್ಸ್ ರಿಲೀಫ್ (ಡಿಆರ್- ತುಟ್ಟಿಭತ್ಯೆ ಪರಿಹಾರ) ಶೇಕಡ 4ರಷ್ಟು ಏರಿಕೆ ಮಾಡಿದೆ. ಈ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಮಾರ್ಚ್ 24ರಂದು ಮಾಹಿತಿ ನೀಡಿದರು. ಈ ಡಿಎ ಏರಿಕೆ ಬಳಿಕ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯು ಶೇಕಡ 42ಕ್ಕೆ ಏರಿಕೆಯಾಗಲಿದೆ ಎಂದು ತಿಳಿಸಿದ್ದಾರೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications