ನಮ್ಮ ಜೀವನದಲ್ಲಿ ಅದೆಷ್ಟೋ ಪ್ರಮುಖ ಘಟ್ಟಗಳನ್ನು ನಾವು ದಾಟಿರುತ್ತೇವೆ. ಆ ಪ್ರಮುಖ ಘಟ್ಟಗಳಲ್ಲಿ ಈ ವಿವಾಹ ಕೂಡಾ ಒಂದಾಗಿದೆ. ಜೀವನದ ಯಾವುದೇ ಪ್ರಮುಖ ಘಟ್ಟಗಳಲ್ಲೂ ನಮಗೆ ಹಣವು ಅತೀ ಮುಖ್ಯವಾಗಿರುತ್ತದೆ. ಅದರಂತೆಯೇ ವಿವಾಹಕ್ಕೂ ಕೂಡಾ ಹಣ ಅತೀ ಮುಖ್ಯವಾಗಿದೆ.
ನೀವು ವಿವಾಹಿತರಾಗಿದ್ದರೆ ಮಾಸಿಕ ಐದು ಸಾವಿರ ರೂಪಾಯಿ ನಿಮಗೆ ದೊರೆಯುತ್ತದೆ ಎಂದಾದರೆ ನೀವು ಏನು ಹೇಳುತ್ತೀರಿ? ಬೇಡ ಎನ್ನುತ್ತೀರಾ?, ಅದು ಕೂಡಾ ಈ ಹಣದುಬ್ಬರದ ಸಂಕಷ್ಟದ ಸ್ಥಿತಿಯಲ್ಲಿ? ಹೌದು ಈ ಒಂದು ಯೋಜನೆಯಲ್ಲಿ ನೀವು ವಿವಾಹಿತರಾಗಿದ್ದರೆ ಮಾಸಿಕ ಐದು ಸಾವಿರ ರೂಪಾಯಿಯನ್ನು ಪಡೆಯಲು ಸಾಧ್ಯವಾಗುತ್ತದೆ.
ಈಗಾಗಲೇ ವಿವಾಹಕ್ಕೆ ಸಾಕಷ್ಟು ಖರ್ಚಾಗಿರುವಾಗ ನೀವು ಕೂಡಾ ಈ ಯೋಜನೆಯ ಫಲಾನುಭವಿಗಳಾಗಬೇಕು ಎಂದು ಬಯಸುತ್ತೀರೇ? ಈ ಯೋಜನೆಯ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ ಮುಂದೆ ಓದಿ....
ಏನಿದು ಯೋಜನೆ?
ಅಟಲ್ ಪಿಂಚಣಿ ಯೋಜನೆಯಲ್ಲಿ ನೀವು ವಿವಾಹಿತರಾಗಿದ್ದರೆ ಮಾತ್ರ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಯೋಜನೆ ಪ್ರಕಾರ ನೀವು ಮಾಸಿಕವಾಗಿ 5 ಸಾವಿರ ರೂಪಾಯಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಇನ್ನು ಅಟಲ್ ಪಿಂಚಣಿ ಯೋಜನೆಯು ಅತೀ ಸುರಕ್ಷಿತ ಹೂಡಿಕೆ ಆಯ್ಕೆಗಳಲ್ಲಿ ಒಂದಾಗಿದೆ. ನೀವು ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ ನಿಮ್ಮಲ್ಲಿ ಬ್ಯಾಂಕ್ ಖಾತೆ ಇರಬೇಕಾಗುತ್ತದೆ. ಹಾಗೆಯೇ ಆಧಾರ್ ಕಾರ್ಡ್, ಮೊಬೈಲ್ ಫೋನ್ ಅನ್ನು ಕೂಡಾ ನೀವು ಹೊಂದಿರಬೇಕು. ಈ ಯೋಜನೆಯ ಲಾಭವನ್ನು ಪತಿ, ಪತ್ನಿ ಇಬ್ಬರೂ ಪಡೆಯಬಹುದು. ನೀವು ಈ ಯೋಜನೆಯಲ್ಲಿ ವಾರ್ಷಿಕವಾಗಿ 1.5 ಲಕ್ಷ ರೂಪಾಯಿವರೆಗೆ ಹಣವನ್ನು ಪಡೆಯಬಹುದು.
ಯೋಜನೆಯ ಲಾಭ ಪಡೆಯುವುದು ಹೇಗೆ?
ಯೋಜನೆಯ ಲಾಭವನ್ನು ನೀವು ಪಡೆಯಬೇಕಾದರೆ ಮೊದಲು ನಿಮ್ಮಲ್ಲಿ ಯಾವುದೇ ಬ್ಯಾಂಕ್ ಖಾತೆ ಇಲ್ಲವಾದರೆ ಬ್ಯಾಂಕ್ ಖಾತೆಯನ್ನು ತೆರೆಯಿರಿ. ಬಳಿಕ ಸಮೀಪದ ಅಂಚೆ ಕಚೇರಿಯಲ್ಲಿ ಅಟಲ್ ಪಿಂಚಣಿ ಯೋಜನೆಯ ಅರ್ಜಿಯನ್ನು ಭರ್ತಿ ಮಾಡಿಕೊಳ್ಳಿ. ಈ ಯೋಜನೆಯು 18 ವರ್ಷದಿಂದ 40 ವರ್ಷದೊಳಗಿನವರಿಗೆ ಆಗಿದೆ. ನೀವು ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ ಮೊದಲು ಹೂಡಿಕೆಯನ್ನು ಮಾಡಬೇಕಾಗುತ್ತದೆ. ಇದು ಪಿಂಚಣಿ ಆಧಾರದಲ್ಲಿ ನಿಮಗೆ ಲಭ್ಯವಾಗಲಿದೆ. ಅಂದರೆ ನಿಮಗೆ 60 ವರ್ಚವಾದಾಗ ಈ ಯೋಜನೆಯಡಿಯಲ್ಲಿ ನಿಮಗೆ ಪಿಂಚಣಿ ಲಭ್ಯವಾಗಲಿದೆ.
ಅರ್ಜಿದಾರರ ಮರಣದ ನಂತರವೂ ಪಿಂಚಣಿ ಲಭ್ಯ!
ಅಟಲ್ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿದಾರರು ಸಾವನ್ನಪ್ಪಿದರೆ ಈ ಯೋಜನೆಯ ಕಥೆಯೇನು ಎಂದು ಹಲವಾರು ಮಂದಿಗೆ ಅನಿಸಬಹುದು. ಆದರೆ ಈ ಯೋಜನೆಯಲ್ಲಿ ಅರ್ಜಿದಾರರು ಸಾವನ್ನಪ್ಪಿದರೂ ಯೋಜನೆಯ ಲಾಭ ಲಭ್ಯವಾಗಲಿದೆ. ಅಂದರೆ ವೃದ್ಧಾಪ್ಯದಲ್ಲಿ ಮಾಸಿಕ ಪಿಂಚಣಿ ಲಭ್ಯವಾಗಲಿದೆ. ಅರ್ಜಿದಾರರಾದ ಪತಿ ಮರಣ ಹೊಂದಿದರೆ ಕುಟುಂಬ ಸದಸ್ಯೆಯಾದ ಪತ್ನಿಗೆ ಈ ಪಿಂಚಣಿ ಲಭ್ಯವಾಗಲಿದೆ. ಅರ್ಜಿದಾರರಾ ಪತ್ನಿ ಮರಣ ಹೊಂದಿದರೆ ಕುಟುಂಬ ಸದಸ್ಯರಾದ ಪತಿಗೆ ಪಿಂಚಣಿ ದೊರೆಯಲಿದೆ. ಒಂದು ವೇಳೆ ಪತಿ, ಪತ್ನಿ ಇಬ್ಬರೂ ಸಾವನ್ನಪ್ಪಿದರೆ ಮಕ್ಕಳಿಗೆ ಈ ಯೋಜನೆಯ ಲಾಭ ದೊರೆಯಲಿದೆ. ಆದರೆ ಕೆಲವು ಷರತ್ತುಗಳು ಕೂಡಾ ಇದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications