ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ ಆಸ್ಪತ್ರೆ ಚಿಕಿತ್ಸೆಯ ವೆಚ್ಚವು ವೇಗವಾಗಿ ಏರುತ್ತಿದೆ. ಒಂದು ಸಾಮಾನ್ಯ ಶಸ್ತ್ರಚಿಕಿತ್ಸೆಯೇ ಲಕ್ಷಾಂತರ ರೂಪಾಯಿ ಖರ್ಚಾಗುವ ಸ್ಥಿತಿಗೆ ತಲುಪಿದೆ. ಇಂತಹ ಸಂದರ್ಭದಲ್ಲಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಕೇಂದ್ರ ಸರ್ಕಾರ ಆರಂಭಿಸಿರುವ ಮಹತ್ವದ ಯೋಜನೆಯೇ ಆಯುಷ್ಮಾನ್ ಭಾರತ್ - ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PM-JAY).

2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಈ ಯೋಜನೆಯನ್ನು ಆರಂಭಿಸಲಾಯಿತು. ಇದರ ಮುಖ್ಯ ಉದ್ದೇಶ ದೇಶದ ಬಡ ಮತ್ತು ಅಸಹಾಯಕ ಕುಟುಂಬಗಳಿಗೆ ಯಾವುದೇ ಹಣ ಪಾವತಿ ಇಲ್ಲದೆ ಆಸ್ಪತ್ರೆ ಚಿಕಿತ್ಸೆ ಸಿಗುವಂತೆ ಮಾಡುವುದು. ಈ ಯೋಜನೆಯ ಅಡಿಯಲ್ಲಿ ನೀಡಲಾಗುವ ಆಯುಷ್ಮಾನ್ ಕಾರ್ಡ್ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಭದ್ರತೆಯಂತಿದೆ.
ಆಯುಷ್ಮಾನ್ ಕಾರ್ಡ್ ಇದ್ದರೆ ಯಾವ ಸೌಲಭ್ಯ?
ಆಯುಷ್ಮಾನ್ ಕಾರ್ಡ್ ಹೊಂದಿರುವ ಕುಟುಂಬಗಳು ಪ್ರತಿ ವರ್ಷ ₹5 ಲಕ್ಷ ರೂಪಾಯಿಗಳವರೆಗೆ ನಗದುರಹಿತ ಮತ್ತು ಕಾಗದರಹಿತ ಆಸ್ಪತ್ರೆ ಚಿಕಿತ್ಸೆ ಪಡೆಯಬಹುದು. ಈ ಸೌಲಭ್ಯ ದೇಶದಾದ್ಯಂತ ಸಾವಿರಾರು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ.
ಕ್ಯಾನ್ಸರ್, ಹೃದಯ ಕಾಯಿಲೆ, ಮೂತ್ರಪಿಂಡ ಸಮಸ್ಯೆ, ಡಯಾಲಿಸಿಸ್, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಡೆಂಗ್ಯೂ, ಮಲೇರಿಯಾ ಸೇರಿದಂತೆ ಅನೇಕ ಗಂಭೀರ ಕಾಯಿಲೆಗಳ ಚಿಕಿತ್ಸೆಯನ್ನು ಈ ಯೋಜನೆ ಒಳಗೊಂಡಿದೆ. ಆಸ್ಪತ್ರೆಗೆ ಹೋಗುವಾಗ ಹಣ ಕಟ್ಟಿ, ನಂತರ ವಿಮಾ ಕ್ಲೈಮ್ ಮಾಡುವ ತಲೆನೋವು ಇಲ್ಲದೇ ನೇರ ಚಿಕಿತ್ಸೆ ಸಿಗುವುದು ಇದರ ದೊಡ್ಡ ಲಾಭ.
ಆಯುಷ್ಮಾನ್ ಕಾರ್ಡ್ ಯಾರಿಗೆ ಸಿಗುತ್ತದೆ?
ಈ ಯೋಜನೆ ಎಲ್ಲರಿಗೂ ಅಲ್ಲ. ಅರ್ಹತೆ ಮುಖ್ಯವಾಗಿ ಸಾಮಾಜಿಕ-ಆರ್ಥಿಕ ಜಾತಿ ಗಣತಿ (SECC) ದತ್ತಾಂಶದ ಆಧಾರದಲ್ಲಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಬಡ ಕುಟುಂಬಗಳು, ದಿನಗೂಲಿ ಕಾರ್ಮಿಕರು, ಅಸಂಘಟಿತ ವಲಯದ ಉದ್ಯೋಗಿಗಳು, ವೃದ್ಧರು, ಅಂಗವಿಕಲರು ಈ ಯೋಜನೆಯ ಪ್ರಮುಖ ಲಾಭಾರ್ಥಿಗಳು.
ಆಯುಷ್ಮಾನ್ ಕಾರ್ಡ್ ಅರ್ಜಿಯಲ್ಲಿ ಆಗುವ ಸಾಮಾನ್ಯ ತಪ್ಪುಗಳು:
1 - ಅರ್ಹತೆ ಪರಿಶೀಲಿಸದೇ ಅರ್ಜಿ ಸಲ್ಲಿಸುವುದು.
ಅರ್ಹರಲ್ಲದವರು ಅರ್ಜಿ ಸಲ್ಲಿಸಿದರೆ ಅದು ಸ್ವಯಂಚಾಲಿತವಾಗಿ ತಿರಸ್ಕೃತವಾಗುತ್ತದೆ.
2 - ಮಾಹಿತಿ ಹೊಂದಾಣಿಕೆ ಇಲ್ಲದಿರುವುದು.
ಹೆಸರು, ವಯಸ್ಸು, ವಿಳಾಸ, ಕುಟುಂಬದ ಸದಸ್ಯರ ವಿವರಗಳು ಆಧಾರ್ ಮತ್ತು ಇತರ ದಾಖಲೆಗಳೊಂದಿಗೆ ಹೊಂದಿಕೆಯಾಗಲೇಬೇಕು.
3 - ದಾಖಲೆಗಳು ಅಪೂರ್ಣವಾಗಿರುವುದು.
ಆಧಾರ್ ಕಾರ್ಡ್, ಪಡಿತರ ಚೀಟಿ, ವಸತಿ ಪುರಾವೆ, ಆದಾಯ ಅಥವಾ ಜಾತಿ ಪ್ರಮಾಣಪತ್ರಗಳನ್ನು ಸರಿಯಾಗಿ ಸಲ್ಲಿಸದೇ ಇದ್ದರೆ ಸಮಸ್ಯೆ ಉಂಟಾಗುತ್ತದೆ.
4- ವಿಳಾಸದ ವ್ಯತ್ಯಾಸ.
ನಿಮ್ಮ ಪ್ರಸ್ತುತ ವಿಳಾಸ ಮತ್ತು ಸರ್ಕಾರಿ ದಾಖಲೆಗಳಲ್ಲಿರುವ ವಿಳಾಸ ಒಂದೇ ಆಗಿರಬೇಕು.
5- ಆಧಾರ್ ಮತ್ತು NHA ದತ್ತಾಂಶ ತಾಳೆಯಾಗದಿರುವುದು.
ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ (NHA) ಮಾಹಿತಿಯು ಆಧಾರ್ ದತ್ತಾಂಶದೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗಬೇಕು.
ಆಯುಷ್ಮಾನ್ ಕಾರ್ಡ್ಗೆ ಹೇಗೆ ಅರ್ಜಿ ಸಲ್ಲಿಸಬೇಕು?
- ಆಯುಷ್ಮಾನ್ ಕಾರ್ಡ್ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಬಹಳ ಸರಳವಾಗಿದೆ.
- ಮೊದಲು ಅಧಿಕೃತ PM-JAY ವೆಬ್ಸೈಟ್ ಗೆ ಭೇಟಿ ನೀಡಿ. ಅಲ್ಲಿ "ನಾನು ಅರ್ಹನೇ?" ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ OTP ಮೂಲಕ ಲಾಗಿನ್ ಆಗಬೇಕು.
- ನಂತರ ರಾಜ್ಯ, ಜಿಲ್ಲೆ ಮತ್ತು ಹುಡುಕಾಟದ ವಿಧವನ್ನು ಆಯ್ಕೆ ಮಾಡಿ ನಿಮ್ಮ ವಿವರಗಳನ್ನು ಪರಿಶೀಲಿಸಿ. ಅರ್ಹತೆ ದೃಢಪಟ್ಟ ನಂತರ ಇ-ಕೆವೈಸಿ ಪ್ರಕ್ರಿಯೆ ಆರಂಭಿಸಬೇಕು. ಇದಕ್ಕಾಗಿ ನಿಮ್ಮ ಆಧಾರ್ ಸಂಖ್ಯೆಗೆ ಬರುವ OTP ಅನ್ನು ನಮೂದಿಸಬೇಕು.
- ಇ-ಕೆವೈಸಿ ಯಶಸ್ವಿಯಾಗಿ ಪೂರ್ಣಗೊಂಡ ನಂತರ ಕೆಲವು ನಿಮಿಷಗಳ ಒಳಗೆ ನಿಮ್ಮ ಆಯುಷ್ಮಾನ್ ಕಾರ್ಡ್ ಸಿದ್ಧವಾಗುತ್ತದೆ. ನಂತರ ಅದನ್ನು ವೆಬ್ಸೈಟ್ನಿಂದಲೇ ಡೌನ್ಲೋಡ್ ಮಾಡಬಹುದು.
ಅರ್ಜಿ ತಿರಸ್ಕೃತವಾದರೆ ಏನು ಮಾಡಬೇಕು?
ಅರ್ಜಿ ಸಲ್ಲಿಸಿದ ನಂತರ ಅದರ ಸ್ಥಿತಿಯನ್ನು ನಿಯಮಿತವಾಗಿ ಪರಿಶೀಲಿಸುವುದು ಉತ್ತಮ. ತಿರಸ್ಕೃತವಾದಲ್ಲಿ ಆತಂಕಪಡಬೇಕಾಗಿಲ್ಲ. ಹೆಚ್ಚಿನ ಸಂದರ್ಭಗಳಲ್ಲಿ ಮಾಹಿತಿ ತಪ್ಪು ಅಥವಾ ದಾಖಲೆ ಹೊಂದಾಣಿಕೆ ಇಲ್ಲದಿರುವುದೇ ಕಾರಣವಾಗಿರುತ್ತದೆ.ಎಲ್ಲಾ ವಿವರಗಳನ್ನು ಸರಿಪಡಿಸಿ ಮತ್ತೆ ಅರ್ಜಿ ಸಲ್ಲಿಸಿದರೆ ಕಾರ್ಡ್ ಸಿಗುವ ಸಾಧ್ಯತೆ ಹೆಚ್ಚು. ಆಯುಷ್ಮಾನ್ ಕಾರ್ಡ್ ಇದ್ದರೆ ಅನಿರೀಕ್ಷಿತ ಆರೋಗ್ಯ ಸಮಸ್ಯೆಗಳ ಸಮಯದಲ್ಲಿ ಅದು ನಿಮ್ಮ ಕುಟುಂಬಕ್ಕೆ ದೊಡ್ಡ ಆಧಾರವಾಗುತ್ತದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications