ನೀವು 70+ ವರ್ಷಕ್ಕಿಂತ ಮೇಲ್ಪಟ್ಟವರೇ.. ಹಾಗಿದ್ರೆ ಈ ಸುದ್ದಿ ನಿಮಗೆ ತುಂಬಾನೇ ಉಪಯೋಗಕಾರಿ. ಏಕೆಂದರೆ ನೀವು ಓದುವ ಈ ಯೋಜನೆಯಿಂದ ನಿಮ್ಮ ಆರೋಗ್ಯ ಸಮಸ್ಯೆಗಳ ವೆಚ್ಚವನ್ನು ಕಡಿಮೆ ಮಾಡಬಹುದು. ಇದು ಯಾವ ಯೋಜನೆ? ಎಂಬುವುದನ್ನು ತಿಳಿಯಲು ಮುಂದೆ ಓದಿ..
ಹೌದು,ಕೇಂದ್ರ ಸರ್ಕಾರ ಆಯುಷ್ಮಾನ್ ವಯ ವಂದನಾ ಕಾರ್ಡ್ ಜಾರಿಗೆ ತಂದಿದೆ. ಇದು 70 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನಗದು ರಹಿತ ಆಸ್ಪತ್ರೆ ಸೌಲಭ್ಯ ಕಲ್ಪಿಸುವ ಉದ್ದೇಶವನ್ನು ಹೊಂದಿದೆ. ಹಣಕಾಸಿ ತೊಂದರೆ ಇಲ್ಲದಂತೆ ಹಿರಿಯ ನಾಗರೀಕರು ವೈದ್ಯಕೀಯ ಚಿಕಿತ್ಸೆಯನ್ನು ಈ ಯೋಜನೆಯ ಮೂಲಕ ಪಡೆದುಕೊಳ್ಳಬಹುದು. ನೀವು ಇನ್ನೂ ಆಯುಷ್ಮಾನ್ ವಯ ವಂದನ ಕಾರ್ಡ್ ಮಾಡಿಲ್ಲದಿದ್ದರೆ, ನೀವು ಚಿಂತಿಸಬೇಕಾಗಿಲ್ಲ, ಈಗ ನೀವು ಮನೆಯಲ್ಲಿಯೇ ಕುಳಿತು ಈ ಯೋಜನೆಗೆ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ಈ ಕಾರ್ಡ್ ಮಾಡಿಸಿಕೊಳ್ಳುವುದರಿಂದ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ಪಡೆಯಬಹುದು.

ಆಯುಷ್ಮಾನ್ ಭಾರತ್ ಯೋಜನೆಯ ಭಾಗವಾಗಿರುವ ಆಯುಷ್ಮಾನ್ ವಯ ವಂದನಾ ಕಾರ್ಡ್, ಪ್ರತಿ ಕುಟುಂಬಕ್ಕೂ ಆರೋಗ್ಯ ಸಂಬಂಧಿತ ನೆರವು ನೀಡುವ ಕೆಲಸ ಮಾಡುತ್ತದೆ. ವೃದ್ಧರಿಗೆ ಉತ್ತಮ ಆರೋಗ್ಯ ಸೌಲಭ್ಯಗಳು ಮತ್ತು ಉತ್ತಮ ಚಿಕಿತ್ಸೆಯನ್ನು ಒದಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಆಯುಷ್ಮಾನ್ ವಯ ವಂದನಾ ಕಾರ್ಡ್ ಎಂದರೇನು?
ಈ ಯೋಜನೆಯು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ (PM-JAY) ಒಂದು ಭಾಗವಾಗಿದೆ . ಈ ಯೋಜನೆಯನ್ನು 70 ವರ್ಷಕ್ಕಿಂತ ಮೇಲ್ಪಟ್ಟವರಿಗಾಗಿ ಪ್ರಾರಂಭಿಸಲಾಗಿದೆ. ಈ ಕಾರ್ಡ್ ಮೂಲಕ, ಸರ್ಕಾರಿ ಮತ್ತು ಕೆಲವು ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸಾ ಸೌಲಭ್ಯಗಳು ಲಭ್ಯವಿದೆ. ಪ್ರತಿ ಕುಟುಂಬವು ಪ್ರತಿ ವರ್ಷ 5 ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆಯನ್ನು ಪಡೆಯುತ್ತದೆ.
ಎಷ್ಟು ಜನರು ಅರ್ಜಿ ಸಲ್ಲಿಸಿದ್ದಾರೆ?
ಸರ್ಕಾರಿ ಮಾಹಿತಿಯ ಪ್ರಕಾರ, ಈ ಯೋಜನೆಯಡಿಯಲ್ಲಿ 25 ಮೇ 2025 ರೊಳಗೆ ಈ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ ಸ್ವೀಕರಿಸಲಾದ ಒಟ್ಟು ಅರ್ಜಿಗಳ ಸಂಖ್ಯೆ ಸುಮಾರು 66 ಲಕ್ಷ. ಅನುಮೋದನೆ ಅರ್ಜಿಗಳು 65 ಲಕ್ಷ ಮತ್ತು ಬಾಕಿ ಇರುವ ಅರ್ಜಿಗಳು 96 ಸಾವಿರಕ್ಕೂ ಹೆಚ್ಚು.
ಇಲ್ಲಿಯವರೆಗೆ ಕೆಲವೇ ಜನರು ಈ ಯೋಜನೆಯ ಕಾರ್ಡ್ಗಳನ್ನು ಪಡೆದಿದ್ದಾರೆ. ರಾಜ್ಯಗಳ ಪೈಕಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ಗಢ, ಗುಜರಾತ್ ಮತ್ತು ಕೇರಳದಿಂದ ಅತಿ ಹೆಚ್ಚು ಅರ್ಜಿಗಳು ಬಂದಿವೆ.
ಯಾರು ಅರ್ಜಿ ಸಲ್ಲಿಸಬಹುದು?
ನೀವು 70 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದರೆ ಮತ್ತು PM-JAY ಯೋಜನೆಯಡಿಯಲ್ಲಿ ಅರ್ಹರಾಗಿದ್ದರೆ, ನೀವು ಈ ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು. ಇದರಲ್ಲಿ ಆದಾಯ ಅಥವಾ ಜಾತಿಯ ಮೇಲೆ ಯಾವುದೇ ಮಿತಿ ಇರುವುದಿಲ್ಲ.
ಅರ್ಜಿ ಸಲ್ಲಿಕೆಗೆ ಯಾವ ದಾಖಲೆಗಳು ಬೇಕು..?
- ವಯಸ್ಸು ಮತ್ತು ಗುರುತಿಗಾಗಿ ಆಧಾರ್ ಕಾರ್ಡ್
- ಆಧಾರ್ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆ
- ಭಾವಚಿತ್ರ
ಮೊಬೈಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ..?
- ನಿಮ್ಮ ಮೊಬೈಲ್ನಲ್ಲಿ "ಆಯುಷ್ಮಾನ್ ಆಪ್" ಡೌನ್ಲೋಡ್ ಮಾಡಿ
- "ಫಲಾನುಭವಿಗಳು" ಎಂದು ಅಪ್ಲಿಕೇಶನ್ಗೆ ಲಾಗಿನ್ ಮಾಡಿ.
- ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು OTP ಯೊಂದಿಗೆ ಲಾಗಿನ್ ಮಾಡಿ.
- "70 ವರ್ಷ ಮೇಲ್ಪಟ್ಟವರು" ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
- ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು eKYC ಅನ್ನು ಪೂರ್ಣಗೊಳಿಸಿ
- ಅಗತ್ಯವಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಫೋಟೋದೊಂದಿಗೆ ಫಾರ್ಮ್ ಅನ್ನು ಸಲ್ಲಿಸಿ.
- ಸ್ವಲ್ಪ ಸಮಯದ ನಂತರ ಕಾರ್ಡ್ ಅಪ್ಲಿಕೇಶನ್ನಲ್ಲಿ ಡೌನ್ಲೋಡ್ ಮಾಡಲು ಲಭ್ಯವಿರುತ್ತದೆ
ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
- ಮೊದಲು ಅಧಿಕೃತ ವೆಬ್ ಸೈಟ್ ಆದ https://pmjay.gov.in ಭೇಟಿ ನೀಡಿ
- ನಿಮ್ಮ ಮೊಬೈಲ್ ಸಂಖ್ಯೆಯಿಂದ OTP ಬಳಸಿ ಲಾಗಿನ್ ಮಾಡಿ.
- ಹಿರಿಯ ನಾಗರಿಕ (70+) ಆಯ್ಕೆಯ ಮೇಲೆ ಕ್ಲಿಕ್ ಮಾಡಿ
- ಆಧಾರ್ ಜೊತೆ eKYC ಮಾಡಿ ಮತ್ತು ಉಳಿದ ವಿವರಗಳನ್ನು ಭರ್ತಿ ಮಾಡಿ.
- ಫೋಟೋ ಅಪ್ಲೋಡ್ ಮಾಡುವ ಮೂಲಕ ಫಾರ್ಮ್ ಅನ್ನು ಸಲ್ಲಿಸಿ.
- ನಿಮ್ಮ ಕಾರ್ಡ್ 15-20 ನಿಮಿಷಗಳಲ್ಲಿ ಸಿದ್ಧವಾಗುತ್ತದೆ.
ಸಹಾಯವಾಣಿಗೆ ಕರೆ
ನಿಮ್ಮಗೆ ಅರ್ಜಿ ಸಲ್ಲಿಸುವಲ್ಲಿ ಯಾವುದೇ ಸಮಸ್ಯೆ ಆದರೆ ನೀವು ಸರ್ಕಾರಿ ಸಹಾಯವಾಣಿಗೆ ಕರೆ ಮಾಡಬಹುದು. ಸಹಾಯವಾಣಿ ಸಂಖ್ಯೆ ಹೀಗಿದೆ 14555 ಅಥವಾ 1800-11-0770 (ಈ ಸಂಖ್ಯೆಗಳು 24x7 ಕೆಲಸ ಮಾಡುತ್ತವೆ)
ಆಯುಷ್ಮಾನ್ ವಯ ವಂದನ ಕಾರ್ಡ್ ಹಿರಿಯ ನಾಗರಿಕರಿಗೆ ಹಣಕಾಸಿನ ಸಮಸ್ಸೆಗೆ ನೇರವಾಗುತ್ತದೆ.ಈಗ ವಯಸ್ಸು ಆದವರೂ ಚಿಕಿತ್ಸೆಗಾಗಿ ತಮ್ಮ ಜೇಬಿನಿಂದ ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ. ಸರ್ಕಾರ ಆನ್ಲೈನ್ ಸೌಲಭ್ಯವನ್ನು ಒದಗಿಸುವ ಮೂಲಕ ಅದನ್ನು ಸುಲಭಗೊಳಿಸಿದೆ. ನಿಮ್ಮ ಕುಟುಂಬದಲ್ಲಿ 70 ವರ್ಷಕ್ಕಿಂತ ಮೇಲ್ಪಟ್ಟ ಸದಸ್ಯರಿದ್ದರೆ, ಇದೇ ಈ ಕಾರ್ಡ್ಗೆ ಅರ್ಜಿ ಸಲ್ಲಿಸಿ ಮತ್ತು ಅವರಿಗೆ ಆರೋಗ್ಯ ರಕ್ಷಣೆಯನ್ನು ಮಾಡಿ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications