ಮೇ 25 ರಂದು ಭಾರತ್ ಬಂದ್ ನಡೆಯಲಿದೆ. ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನೌಕರರ ಒಕ್ಕೂಟವು ಬುಧವಾರ ಅಂದರೆ ಮೇ 25 ರಂದು ಭಾರತ್ ಬಂದ್ಗೆ ಕರೆ ನೀಡಿದೆ. ಈ ವೇಳೆ ಹಲವಾರು ವಹಿವಾಟುಗಳು ವ್ಯತ್ಯಯವಾಗುವ ಸಾಧ್ಯತೆ ಇದೆ.
ಒಬಿಸಿ ಆಧಾರಿತ ಜನಗಣತಿ ನಡೆಸಬೇಕೆಂದು ಹಲವಾರು ರಾಜಕೀಯ ನಾಯಕರುಗಳು, ಸಂಘಟನೆಗಳು ಒತ್ತಾಯ ಮಾಡಿದ್ದವು. ಆದರೆ ಕೇಂದ್ರ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿಲ್ಲ. ಈಗಾಗಲೇ ಜನಗಣತಿಯ ಎಲ್ಲಾ ಸಿದ್ಧತೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು.
ಈಗ ಸರ್ಕಾರದ ನಡೆಯನ್ನು ವಿರೋಧ ಮಾಡಿ ಭಾರತ್ ಬಂದ್ಗೆ ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನೌಕರರ ಒಕ್ಕೂಟವು ಕರೆ ನೀಡಿದೆ ಎಂದು ಬಹುಜನ ಮುಕ್ತಿ ಪಕ್ಷದ (ಬಿಎಂಪಿ) ಸಹರಾನ್ಪುರ ಜಿಲ್ಲಾ ಅಧ್ಯಕ್ಷ ನೀರಜ್ ಧಿಮಾನ್ ಮಾಹಿತಿ ನೀಡಿದ್ದಾರೆ.

ಹಾಗೆಯೇ ಬಿಎಂಪಿ ಅಧ್ಯಕ್ಷರು ಚುನಾವಣೆಯಲ್ಲಿ ಇವಿಎಂಗಳ ಬಳಕೆ ಮತ್ತು ಖಾಸಗಿ ವಲಯಗಳಲ್ಲಿ ಎಸ್ಸಿ/ಎಸ್ಟಿ/ಒಬಿಸಿಗೆ ಮೀಸಲಾತಿಯನ್ನು ಜಾರಿಗೊಳಿಸದಿರುವುದನ್ನು ವಿರೋಧ ಮಾಡಲಾಗಿದೆ. ಬಹುಜನ ಮುಕ್ತಿ ಪಕ್ಷದ ಹಂಗಾಮಿ ರಾಜ್ಯಾಧ್ಯಕ್ಷ ಡಿಪಿ ಸಿಂಗ್ ಭಾರತ್ ಬಂದ್ ಅನ್ನು ಯಶಸ್ವಿಗೊಳಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಹಾಗಾದರೆ ಬಹುಜನ ಮುಕ್ತಿ ಪಕ್ಷದ ಬೇಡಿಕೆಗಳು ಏನು, ಮೇ 25 ರಂದು ಭಾರತ್ ಬಂದ್ಗೆ ಏಕೆ ಕರೆ ನೀಡಿದೆ ಎಂದು ತಿಳಯಲು ಮುಂದೆ ಓದಿ...
ಭಾರತ್ ಬಂದ್ ಯಾಕಾಗಿ, ಆರೋಪವೇನು, ಬೇಡಿಕೆ ಏನು?
* ಚುನಾವಣೆಯಲ್ಲಿ ಇವಿಎಂ ಹಗರಣ ಆರೋಪ
* ಕೇಂದ್ರವು ಜಾತಿ ಆಧಾರಿತ ಒಬಿಸಿ ಜನಗಣತಿ ನಡೆಸದಿರುವುದಕ್ಕೆ ವಿರೋಧ
* ಖಾಸಗಿ ವಲಯದಲ್ಲಿ ಎಸ್ಸಿ/ಎಸ್ಟಿ/ಒಬಿಸಿ ಮೀಸಲಾತಿಗೆ ಬೇಡಿಕೆ
* ರೈತರಿಗೆ ಎಂಎಸ್ಪಿ ಖಾತ್ರಿಪಡಿಸಲು ಕಾನೂನನ್ನು ಪರಿಚಯಿಸಲು ಆಗ್ರಹ
* ಎನ್ಆರ್ಸಿ/ಸಿಎಎ/ಎನ್ಆರ್ಪಿ ವಿರುದ್ಧ ಆಕ್ರೋಶ
* ಹಳೆಯ ಪಿಂಚಣಿ ಯೋಜನೆಯನ್ನು ಪುನರಾರಂಭಿಸಲು ಒತ್ತಾಯ
* ಒಡಿಶಾ ಮತ್ತು ಮಧ್ಯಪ್ರದೇಶದಲ್ಲಿ ಪಂಚಾಯತ್ ಚುನಾವಣೆಗಳಲ್ಲಿ ಒಬಿಸಿ ಮೀಸಲಾತಿಯಲ್ಲಿ ಪ್ರತ್ಯೇಕ ಮತದಾನದ ಬೇಡಿಕೆ
* ಪರಿಸರ ಸಂರಕ್ಷಣೆಯ ನೆಪದಲ್ಲಿ ಬುಡಕಟ್ಟು ಜನರನ್ನು ಸ್ಥಳಾಂತರಿಸುವುದಕ್ಕೆ ವಿರೋಧ
* ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಜನರನ್ನು ಒತ್ತಾಯಿಸುವುದರ ವಿರುದ್ಧ
* ಕೋವಿಡ್-19 ಲಾಕ್ಡೌನ್ ಸಮಯದಲ್ಲಿ ಕಾರ್ಮಿಕರ ವಿರುದ್ಧ ರಹಸ್ಯವಾಗಿ ಮಾಡಲಾದ ಕಾರ್ಮಿಕ ಕಾನೂನುಗಳ ವಿರುದ್ಧ ರಕ್ಷಣೆಗೆ ಒತ್ತಾಯ
ಇನ್ನು ಸಾಮಾಜಿಕ ಜಾಲತಾಣದಲ್ಲಿಯೂ ಭಾರತ್ ಬಂದ್ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜನರು ಈ ಭಾರತ್ ಬಂದ್ ಪರವಾಗಿ ವಿರೋಧವಾಗಿ ಟ್ವೀಟ್ಗಳನ್ನು ಮಾಡುತ್ತಿದ್ದಾರೆ.
More From GoodReturns

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

T20 World Cup: ಟಿ20 ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 96 ರನ್ಗಳ ಗೆಲುವು...ತಂಡಕ್ಕೆ ಸಿಕ್ಕ ಬಹುಮಾನಗಳೇನು?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Gold Guidelines: ಭಾರತದಲ್ಲಿ ಚಿನ್ನಾಭರಣ ಎಷ್ಟು ಇಟ್ಟುಕೊಳ್ಳಬಹುದು? ಕಾನೂನಾತ್ಮಕವಾಗಿ ನಿರ್ವಹಿಸುವುದು ಹೇಗೆ ತಿಳಿಯಿರ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications