ಬೆಂಗಳೂರು: ಅನ್ನಭಾಗ್ಯ ಯೋಜನೆಗಾಗಿ, ಸರ್ಕಾರದ ಹಲವು ಸೌಲಭ್ಯಗಳನ್ನು ಪಡೆಯುವ ನಿಟ್ಟಿನಲ್ಲಿ ಜಾರಿಗೆ ತಂದ ಪಡಿತರ ಚೀಟಿ (Ration Card), ಇಂದು ಹಲವು ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಬಡತನ ನಿರ್ಮೂಲನೆ ದೃಷ್ಟಿಯಿಂದ, ಬಡತನ ರೇಖೆಯಲ್ಲಿರುವವರಿಗೆ ನೀಡಲಾಗುವ ಈ ಬಿಪಿಎಲ್ ಕಾರ್ಡ್ (BPL Card), ಸದ್ಯ ದುರುಪಯೋಗವಾಗುತ್ತಿದೆ ಎಂಬ ಕೂಗು ಕೇಳುತ್ತಲೇ ಇದೆ. ಅದೇ ಕಾರಣದಿಂದ ಇದೀಗ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದು, ಈಗಾಗಲೇ ಲಕ್ಷಾಂತರ ಕಾರ್ಡ್ಗಳನ್ನು ಸಹ ರದ್ದುಗೊಳಿಸಿದೆ.

ಅಕ್ರಮ ಬಿಪಿಎಲ್ ಕಾರ್ಡ್ ಬಳಸುತ್ತಿರುವವರಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸರ್ಕಾರ ರದ್ದು ಪಡಿಸುವ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಎಚ್ಚೆತ್ತ ಆಹಾರ ಇಲಾಖೆ ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಅಲ್ಲದೇ ಈಗಾಗಲೇ ಲಕ್ಷಾಂತರ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿದೆ. ಇದೀಗ ಸರ್ಕಾರ ಬೆಂಗಳೂರಿನಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಇಲಾಖೆ ಮುಂದಾಗಲಿದೆ.
ಲಕ್ಷಗಟ್ಟಲೆ ಬಿಪಿಎಲ್ ಕಾರ್ಡ್ ರದ್ದು!
ಸರ್ಕಾರದ ಆದೇಶದಂತೆ ಆಹಾರ ಇಲಾಖೆ ಖಡಕ್ ನಿರ್ಧಾರ ಕೈಗೊಂಡಿದೆ. ಆ ಪ್ರಕಾರ 1 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ಗಳು ರದ್ದಾಗಿದೆ. ಮಾಧ್ಯಮಗಳ ವರದಿ ಪ್ರಕಾರ, ಬೆಂಗಳೂರು ದಕ್ಷಿಣ 15,916, ಬೆಂಗಳೂರು ನಗರ 48,891, ಬೆಂಗಳೂರು ಉತ್ತರ 12,431, ಬೆಂಗಳೂರು ಪಶ್ಚಿಮ 25,143, ಬೆಂಗಳೂರು ಪೂರ್ವ 10,376, ಬೆಂಗಳೂರು ಗ್ರಾಮಾಂತರ 5,963 ಎಪಿಎಲ್ ಕಾರ್ಡ್ಗಳು ರದ್ದಾಗಿದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲೇ ಒಟ್ಟು 3.90 ಲಕ್ಷ ಪಡಿತರ ಕಾರ್ಡ್ಗಳಿವೆ. ಪ್ರಸ್ತುತ ಬೆಂಗಳೂರು ಒಂದರಲ್ಲೇ 1 ಲಕ್ಷಕ್ಕೂ ಅಧಿಕ ಪಡಿತರ ಚೀಟಿ ಬಿಪಿಎಲ್ನಿಂದ ಎಪಿಎಲ್ಗೆ ವರ್ಗಾವಣೆಯಾಗಿದೆ ಎಂದು ಹೇಳಲಾಗಿದೆ.
ಆದಾಯ ಮಿತಿ ಪರಿಷ್ಕರಣೆಗೆ ಮುಂದಾದ ಸರ್ಕಾರ!
ಗುರುವಾರ ವಿಧಾನಸಭೆ ಸದನದಲ್ಲಿ ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್, ಪಡಿತರ ಚೀಟಿಗೆ ಸಂಬಂಧಿಸಿ, ಸರ್ಕಾರದ ನಿರ್ಧಾರದ ಬಗ್ಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದರು. ಈ ವೇಳೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಉತ್ತರಿಸಿ, ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪಡೆಯಬೇಕಾದರೆ ನೀಡಲಾಗಿರುವ ಆದಾಯ ಮಿತಿಯನ್ನು ಪರಿಷ್ಕರಿಸಲು ಮುಂದಾಗಿದೆ ಎಂದು ಹೇಳಿದ್ದಾರೆ.
ಬಿಪಿಎಲ್ ಕಾರ್ಡ್ ಪಡೆಯಬೇಕೆಂದರೆ ಆದಾಯ ಮಿತಿ 1.20 ಲಕ್ಷ ರೂಪಾಯಿ ಇರಬೇಕು. ಆದ್ರೆ ಇದೀಗ ಆದಾಯ ಮಿತಿಯನ್ನು ಹೆಚ್ಚಳ ಮಾಡುವ ಯೋಜನೆಯಲ್ಲಿದೆ ಎಂದು ಹೇಳಿದ್ದಾರೆ. ಅಲ್ಲದೇ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಚರ್ಚೆ ನಡೆಸಿ, ಪರಿಷ್ಕರಿಸುವುದಾಗಿ ಹೇಳಿದ್ದಾರೆ.
ಕಾರಣವೇನು?
ಸಾಮಾನ್ಯವಾಗಿ ಇಂದಿನ ಪರಿಸ್ಥಿತಿಯಲ್ಲಿ ಒಬ್ಬ ಕೂಲಿ ಕಾರ್ಮಿಕನ ದಿನದ ಸಂಬಳ ಕಮ್ಮಿ ಅಂದರೂ 500 ರೂ. ಇದೆ.ಅದನ್ನೇ ಒಟ್ಟು ಲೆಕ್ಕ ಹಾಕಿದರೆ, ವಾರ್ಷಿಕವಾಗಿ 1.80 ಲಕ್ಷ ರೂ. ಆಗುತ್ತದೆ. ಅಂದರೆ ಇದು ಬಿಪಿಎಲ್ ಕಾರ್ಡ್ ಆದಾಯ ಮಿತಿಗಿಂತಲೂ ಹೆಚ್ಚಿದೆ. ಅದೇ ಕಾರಣದಿಂದ ಎಷ್ಟೋ ಜನರ ಬಿಪಿಎಲ್ ಕಾರ್ಡ್ ರದ್ದಾಗಿದೆ ಎಂದು ಹೇಳಲಾಗುತ್ತಿದೆ. ಅದಕ್ಕಾಗಿ ಸರಕಾರ ಇದೀಗ ಪರಿಷ್ಕರಣೆಗೆ ಮುಂದಾಗಿದೆ ಎಂದು ಹೇಳಲಾಗಿದೆ.
More From GoodReturns

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications