ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-2024ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡಿಸಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ ಐದನೇ ಬಾರಿಗೆ ಮಂಡನೆ ಮಾಡಿರುವ ಬಜೆಟ್ ಇದಾಗಿದೆ.
2024 ಲೋಕಸಭೆ ಚುನಾವಣೆಗೂ ಮುನ್ನ ಮಂಡನೆಯಾದ ಪೂರ್ಣ ಪ್ರಮಾಣದ ಬಜೆಟ್ ಇದಾದ ಕಾರಣ, ಬಜೆಟ್ ಮೇಲಿನ ನಿರೀಕ್ಷೆಗಳು ಅಧಿಕವಾಗಿದೆ. ಎಲ್ಲ ವಲಯವು ಸರ್ಕಾರವು ಚುನಾವಣೆ ಮೇಲೆ ಕಣ್ಣಿಟ್ಟು ಹಲವಾರು ಜನೋಪಯೋಗಿ ಯೋಜನೆಗಳನ್ನು ಜಾರಿ ಮಾಡಬಹುದು ಎಂಬ ಭರವಸೆಯನ್ನು ಹೊಂದಿದೆ. ತೆರಿಗೆದಾರರಿಗೆ ಸರ್ಕಾರ ಕೊಂಚ ರಿಲೀಫ್ ನೀಡಿದೆ.
ಈ ನಡುವೆ ಕೇಂದ್ರ ವಿತ್ತ ಸಚಿವೆ ಬಗ್ಗೆ ಕೆಲವು ಮಾಹಿತಿಯನ್ನು ನಾವು ತಿಳಿಯೋಣ. ಕಳೆದ ಐದು ವರ್ಷದಿಂದ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್ 2019ರಿಂದ ಹಣಕಾಸು ಸಚಿವೆಯಾಗಿದ್ದಾರೆ. 2014ರಲ್ಲಿ ನಿರ್ಮಲಾ ಸೀತಾರಾಮನ್ ರಾಜ್ಯಸಭೆ ಎಂಪಿ ಆಗಿದ್ದಾರೆ. ಪ್ರಸ್ತುತ ಸಂಸತ್ತಿನ ಮೇಲ್ಮನೆಯಲ್ಲಿ ಎಂಪಿ ಆಗಿದ್ದಾರೆ. ನಿರ್ಮಲಾ ಸೀತಾರಾಮನ್ ಬಗ್ಗೆ ಇಲ್ಲಿದೆ ಅಧಿಕ ಮಾಹಿತಿ.

ನಿರ್ಮಲಾ ಸೀತಾರಾಮನ್ ಶೈಕ್ಷಣಿಕ ಜೀವನ
ನಿರ್ಮಲಾ ಸೀತಾರಾಮನ್ ತಮಿಳುನಾಡಿನಲ್ಲಿ ಜನಿಸಿದ್ದಾರೆ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸೀತಾರಾಮನ್ ಮದ್ರಾಸ್ ಮತ್ತು ತಿರುಚಿರಪಳ್ಳಿಯಲ್ಲಿ ಪೂರ್ಣಗೊಳಿಸಿದ್ದಾರೆ. ಅರ್ಥಶಾಸ್ತ್ರದಲ್ಲಿ (economics) ಪದವಿಯನ್ನು (ಬಿಎ) ನಿರ್ಮಲಾ ಸೀತಾರಾಮನ್ ತಿರುಚಿರಪಳ್ಳಿಯ ಸೀತಾಲಕ್ಷ್ಮೀ ರಾಮಸ್ವಾಮಿ ಕಾಲೇಜಿನಲ್ಲಿ ಪಡೆದಿದ್ದಾರೆ. ಬಳಿಕ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು (ಎಂಎ) ಮತ್ತು ಎಂಫಿಲ್ ಅನ್ನು 1984ರಲ್ಲಿ ಜವಾಹರಲಾಲ್ ವಿಶ್ವವಿದ್ಯಾನಿಲಯದಲ್ಲಿ ಪೂರ್ಣಗೊಳಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ರಾಜಕೀಯ ಜೀವನ
ನಿರ್ಮಲಾ ಸೀತಾರಾಮನ್ ದೇಶದ ರಕ್ಷಣಾ ಸಚಿವೆಯಾಗಿಯೂ ಕಾರ್ಯ ನಿರ್ಹಹಣೆ ಮಾಡಿದ್ದಾರೆ. ಇಂದಿರಾ ಗಾಂಧಿಯ ಬಳಿಕ ನಿರ್ಮಲಾ ಸೀತಾರಾಮನ್ ಎರಡನೇ ಮಹಿಳಾ ಆರ್ಥಿಕ ಸಚಿವೆಯಾಗಿದ್ದಾರೆ. ಈ ಹಿಂದೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ವಕ್ತಾರರು ಕೂಡಾ ಆಗಿದ್ದರು.
ನಿರ್ಮಲಾ ಸೀತಾರಾಮನ್ 2006ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 2010ರಲ್ಲಿ ಬಿಜೆಪಿ ವಕ್ತಾರರಾಗಿದ್ದಾರೆ. ಆಂಧ್ರ ಪ್ರದೇಶದ ರಾಜ್ಯ ಸಭಾ ಸದಸ್ಯೆಯಾಗಿ 2014ರಲ್ಲಿ ನಿರ್ಮಲಾ ಸೀತಾರಾಮನ್ ಆಯ್ಕೆಯಾಗಿದ್ದಾರೆ. ಫೋರ್ಬ್ಸ್ನ ವಿಶ್ವದ 100 ಅತೀ ಪ್ರಬಲ ಮಹಿಳೆಯರ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್ 36ನೇ ಸ್ಥಾನದಲ್ಲಿದ್ದಾರೆ. ಫಾರ್ಚ್ಯೂನ್ ಕೂಡಾ ನಿರ್ಮಲಾ ಸೀತಾರಾಮನ್ರನ್ನು ಅತೀ ಪ್ರಬಲ ಭಾರತೀಯ ಮಹಿಳೆ ಎಂದು ಗುರುತಿಸಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications