ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು 2023-24ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಈ ಸಂದರ್ಭದಲ್ಲೇ ಹಲವಾರು ಯೋಜನೆಗಳನ್ನು ಸರ್ಕಾರವು ಜಾರಿ ಮಾಡಿದೆ. ಕೆಲವು ಯೋಜನೆಗಳಿಗೆ ನಿಧಿ ಹಂಚಿಕೆಯನ್ನು ಕೂಡಾ ಮಾಡಿದೆ. ಈ ಪೈಕಿ ಪ್ರಧಾನ ಮಂತ್ರಿ ಪ್ರಣಾಮ ಯೋಜನೆ ಕೂಡಾ ಒಂದಾಗಿದೆ.
ಪ್ರಧಾನ ಮಂತ್ರಿ ಪ್ರಣಾಮ ಯೋಜನೆಯು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಪರ್ಯಾಯ ರಸಗೊಬ್ಬರಗಳನ್ನು ತಮ್ಮ ರಾಜ್ಯದಲ್ಲಿ ಪರಿಚಯಿಸಲು ಸಹಕಾರಿಯಾದ ಯೋಜನೆ ಇದಾಗಿದೆ. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯು ಈ ಪ್ರಧಾನ ಮಂತ್ರಿ ಪ್ರಣಾಮ ಯೋಜನೆಯನ್ನು ಜಾರಿ ಮಾಡಿದೆ. 2022ರ ಸೆಪ್ಟೆಂಬರ್ 7ರಂದು ರಾಬಿ ಕ್ಯಾಂಪೇನ್ಗಾಗಿ ನಡೆಸಲಾದ ನ್ಯಾಷನಲ್ ಕಾನ್ಫೆರೆನ್ಸ್ನಲ್ಲಿ ಈ ಯೋಜನೆಯನ್ನು ಜಾರಿ ಮಾಡಲಾಗಿದೆ.
ಇಲಾಖೆಯ ಅಧಿಕಾರಿಗಳು ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ಪ್ರಣಾಮ ಯೋಜನೆಯೇ ಅದರ ಪೂರ್ಣ ಹೆಸರಲ್ಲ. ಪ್ರಧಾನ ಮಂತ್ರಿ ಪ್ರೊಮೋಷನ್ ಆಫ್ ಆಲ್ಟರ್ನೇಟಿವ್ ನ್ಯುಟ್ರಿಯಂಟ್ಸ್ ಫಾರ್ ಅಗ್ರಿಕಲ್ಚರ್ ಮ್ಯಾನೆಜ್ಮೆಂಟ್ ಯೋಜನೆ ಎಂದಾಗಿದೆ. ಈ ಯೋಜನೆಯ ಬಗ್ಗೆ ಇಲ್ಲಿದೆ.
ಪಿಎಂ ಪ್ರಣಾಮ ಯೋಜನೆ ಎಂದರೇನು?
ಪ್ರಧಾನ ಮಂತ್ರಿ ಪ್ರಣಾಮ ಯೋಜನೆಯು ಪರ್ಯಾಯ ರಸಗೊಬ್ಬರಗಳ ಬಳಕೆಗೆ ಉತ್ತೇಜನ ನೀಡಲು ಆರಂಭ ಮಾಡಲಾಗಿದೆ. ಭೂಮಿಯನ್ನು ಕಾಪಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಇದಾಗಿದೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ತಮ್ಮ ಪ್ರದೇಶದಲ್ಲಿ ರೈತರು ಪರ್ಯಾಯ ರಸಗೊಬ್ಬರವನ್ನು ಬಳಸಲು ಪ್ರೋತ್ಸಾಹ ನೀಡಬೇಕು ಮತ್ತು ರಾಸಾಯನಿಕ ರಸಗೊಬ್ಬರದ ಮಿತ ಬಳಕೆಯ ಅರಿವನ್ನು ಕೂಡಾ ಮೂಡಿಸಬೇಕು ಎಂಬುವುದು ಈ ಯೋಜನೆಯ ಉದ್ದೇಶವಾಗಿದೆ.
ಯೋಜನೆಯ ಬಗ್ಗೆ ಪ್ರಮುಖ ಮಾಹಿತಿ
* ರಾಸಾಯನಿಕ ರಸಗೊಬ್ಬರದ ಮೇಲಿನ ಸಬ್ಸಿಡಿ ಹೊರೆಯನ್ನು ಕಡಿಮೆ ಮಾಡುವುದು ಯೋಜನೆಯ ಗುರಿಯಾಗಿದೆ. 2022-2023ರ ಹಣಕಾಸು ವರ್ಷದಲ್ಲಿ ಸಬ್ಸಿಡಿಯನ್ನು ಶೇಕಡ 39ರಷ್ಟು ಏರಿಸಿ, 2.25 ಲಕ್ಷ ಕೋಟಿ ರೂಪಾಯಿಷ್ಟು ಮಾಡುವ ಉದ್ದೇಶವನ್ನು ಹೊಂದಿದೆ. ಈ ಹಿಂದಿನ ವರ್ಷ 1.62 ಲಕ್ಷ ಕೋಟಿ ರೂಪಾಯಿ ಆಗಿತ್ತು.
* ರಾಸಾಯನಿಕ ರಸಗೊಬ್ಬರದ ಬಳಕೆಗೆ ಅಧಿಕ ಉತ್ತೇಜನ ನೀಡದಿರುವುದು ಈ ಯೋಜನೆಯ ಗುರಿಯಾಗಿದೆ.
ಯೋಜನೆಯ ಪ್ರಯೋಜನಗಳೇನು?
* ಈ ಯೋಜನೆಯು ಕಡಿಮೆ ರಾಸಾಯನಿಕ ರಸಗೊಬ್ಬರವನ್ನು ಬಳಸುವಂತೆ ಅರಿವುದು ಮೂಡಿಸುತ್ತದೆ.
* ಪರ್ಯಾಯ ಪೋಷಕಾಂಶಗಳು ಮತ್ತು ರಸಗೊಬ್ಬರಗಳ ಬಳಕೆಗೆ ಉತ್ತೇಜನ ನೀಡುತ್ತದೆ.
* ಮಣ್ಣಿನ ಗುಣಮಟ್ಟವನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ರಾಸಾಯನಿಕ ರಸಗೊಬ್ಬರದ ಬಳಕೆ ಮಾಡಬಾರದು ಎಂಬ ಅರಿವನ್ನು ರೈತರಲ್ಲಿ ಮೂಡಿಸಲಾಗುತ್ತದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications