ರಕ್ಷಣಾ ಸಚಿವಾಲಯದಲ್ಲಿರುವ ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿ ಒಂದು ದೊಡ್ಡ ಅಪ್ಡೇಟ್ ಇದೆ. ರಕ್ಷಣಾ ನಾಗರಿಕ ನೌಕರರ ಬಡ್ತಿಗೆ ಅಗತ್ಯವಿರುವ ಕನಿಷ್ಠ ಅರ್ಹತಾ ಸೇವೆಯ ಮಾನದಂಡಗಳನ್ನು ಕೇಂದ್ರ ಸಚಿವಾಲಯವು ಪರಿಷ್ಕರಿಸಿದೆ. 7 ನೇ ವೇತನ ಆಯೋಗದ ಅಡಿಯಲ್ಲಿ ವೇತನ ಪಡೆಯುವರಿಗೆ ಹಲವಾರು ಮಾನದಂಡದಲ್ಲಿ ಇದು ಅನ್ವಯವಾಗುತ್ತದೆ.
7 ನೇ ವೇತನ ಆಯೋಗದ ಅಡಿಯಲ್ಲಿ ವೇತನ ಪಡೆಯುವ ಮತ್ತು ವೇತನ ಮಟ್ಟಗಳನ್ನು ಅನುಸರಿಸುವ ಮತ್ತು ರಕ್ಷಣಾ ಸೇವೆಯಿಂದ ವೇತನವನ್ನು ಪಡೆಯುವ ರಕ್ಷಣಾ ನಾಗರಿಕ ಉದ್ಯೋಗಿಗಳಿಗೆ ಈ ಪರಿಷ್ಕೃತ ಮಾನದಂಡಗಳು ಅನ್ವಯವಾಗುತ್ತವೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ರಕ್ಷಣಾ ನಾಗರಿಕ ಉದ್ಯೋಗಿಗಳ ಬಡ್ತಿಗೆ ಅಗತ್ಯವಿರುವ ಕನಿಷ್ಠ ಅರ್ಹತಾ ಸೇವೆಯನ್ನು ಸಚಿವಾಲಯವು ಸುತ್ತೋಲೆಯಲ್ಲಿ ಉಲ್ಲೇಖಿಸಿದೆ.

ರಕ್ಷಣಾ ಸಚಿವಾಲಯದ ಅಧಿಕೃತ ಹೇಳಿಕೆ ಹೀಗಿದೆ
"ತಕ್ಷಣದ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಇದನ್ನು ರಕ್ಷಣಾ ಸಚಿವಾಲಯ/ರಕ್ಷಣಾ ಇಲಾಖೆ ವೆಬ್ಸೈಟ್ನಲ್ಲಿ 'ಉದ್ಯೋಗಿಗಳ ಕಾರ್ನರ್ > ಏಳನೇ ಕೇಂದ್ರ ವೇತನ ಆಯೋಗ' ಲಿಂಕ್ ಅಡಿಯಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ," ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳದ ಕುರಿತು ಕೇಂದ್ರದಿಂದ ಪ್ರಕಟಣೆಗಾಗಿ ಕಾಯುತ್ತಿರುವ ಸಮಯದಲ್ಲಿ ಈ ಬೆಳವಣಿಗೆ ಕಂಡು ಬಂದಿದೆ. ಕೇಂದ್ರ ಸರ್ಕಾರವು ಉದ್ಯೋಗಿಗಳಿಗೆ ಜುಲೈನಿಂದ ಅನ್ವಯವಾಗುವಂತೆ ಡಿಎ ಏರಿಕೆಯನ್ನು ಇನ್ನಷ್ಟೇ ಮಾಡಬೇಕಾಗಿದೆ.
ಈ ಬಾರಿ ಶೇಕಡ 3ರಷ್ಟು ಡಿಎ ಏರಿಕೆ ನಿರೀಕ್ಷೆ
ಈ ಮಧ್ಯೆ, ಕೇಂದ್ರ ಸರ್ಕಾರವು ತನ್ನ ಒಂದು ಕೋಟಿಗೂ ಹೆಚ್ಚು ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು (ಡಿಎ) ಶೇಕಡ 3ರಷ್ಟು ಏರಿಕೆ ಮಾಡುವ ಸಾಧ್ಯತೆಯಿದೆ. ಇಷ್ಟು ಏರಿಕೆಯಾದರೆ ತುಟ್ಟಿಭತ್ಯೆಯು ಶೇಕಡ 45ಕ್ಕೆ ಏರಿಕೆಯಾಗುತ್ತದೆ ಎಂದು ವರದಿಗಳು ಸೂಚಿಸುತ್ತದೆ. ಒಮ್ಮೆ ಜಾರಿಗೆ ಬಂದ ನಂತರ, ತುಟ್ಟಿ ಭತ್ಯೆಯ ಇತ್ತೀಚಿನ ಹೆಚ್ಚಳದಿಂದಾಗಿ ಜುಲೈ 1, 2023 ರಿಂದ ಜಾರಿಗೆ ಬರಲಿದೆ.
ಈ ವಿಷಯದ ಬಗ್ಗೆ ಕೇಂದ್ರವು ಇನ್ನೂ ಯಾವುದೇ ಘೋಷಣೆ ಮಾಡದಿದ್ದರೂ, ಅಖಿಲ ಭಾರತ ರೈಲ್ವೇಮೆನ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ತುಟ್ಟಿಭತ್ಯೆಯಲ್ಲಿ ಶೇಕಡ 4 ರಷ್ಟು ಏರಿಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
"ಜೂನ್ 2023 ರ ಸಿಪಿಐ - ಐಡಬ್ಲ್ಯೂ ಅನ್ನು ಜುಲೈ 31, 2023 ರಂದು ಬಿಡುಗಡೆ ಮಾಡಲಾಗಿದೆ. ನಾವು ತುಟ್ಟಿಭತ್ಯೆಯಲ್ಲಿ ನಾಲ್ಕು ಶೇಕಡದಷ್ಟು ಏರಿಕೆ ಮಾಡಬೇಕು ಎಂದು ನಾವು ಒತ್ತಾಯ ಮಾಡುತ್ತೇವೆ. ಆದರೆ ತುಟ್ಟಿಭತ್ಯೆ ಶೇಕಡ 3ಕ್ಕಿಂತ ಕೊಂಚ ಅಧಿಕ ಹೆಚ್ಚಳ ಮಾಡುವ ಅವಕಾಶ ಸರ್ಕಾರಕ್ಕಿದೆ. ಡಿಎ ಮೂರು ಶೇಕಡ ಹೆಚ್ಚಳವಾದರೆ, ಡಿಎ ಶೇಕಡ 45ಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ," ಎಂದು ಅಖಿಲ ಭಾರತ ರೈಲ್ವೇಮೆನ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಇತ್ತೀಚೆಗೆ ಹೇಳಿದ್ದಾರೆ.
ಡಿಎ ಹೆಚ್ಚಳವನ್ನು ಯಾವಾಗ ಘೋಷಿಸಲಾಗುತ್ತದೆ?
ಡಿಎ ಹೆಚ್ಚಳದ ನಿಖರವಾದ ದಿನಾಂಕವನ್ನು ಕೇಂದ್ರವು ಇನ್ನೂ ಘೋಷಿಸದಿದ್ದರೂ, ಹಣಕಾಸು ಸಚಿವಾಲಯದ ವೆಚ್ಚ ವಿಭಾಗವು ಅದರ ಆದಾಯದ ಪರಿಣಾಮದೊಂದಿಗೆ ಡಿಎಯನ್ನು ಹೆಚ್ಚಿಸುವ ಪ್ರಸ್ತಾಪವನ್ನು ರೂಪಿಸಿದ ನಂತರ ಕೇಂದ್ರ ಸಚಿವ ಸಂಪುಟವು ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ. ಇದಾದ ಬಳಿಕ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಿ ಅನುಮೋದನೆ ಪಡೆಯಲಾಗುವುದು.
ಡಿಎ ಹೆಚ್ಚಳವನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ?
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಕಾರ್ಮಿಕ ಬ್ಯೂರೋ ಪ್ರತಿ ತಿಂಗಳು ಹೊರತರುವ ಕೈಗಾರಿಕಾ ಕಾರ್ಮಿಕರ ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕದಲ್ಲಿನ ಅಂಶಗಳ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ. ಕೇಂದ್ರವು ನೌಕರರು ಮತ್ತು ಪಿಂಚಣಿದಾರರಿಗೆ ಪ್ರಸ್ತುತ ಸಂಬಳದ ಮೇಲೆ ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು ತುಟ್ಟಿ ಭತ್ಯೆಯನ್ನು ನೀಡಲಾಗುತ್ತದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications