ಕಳೆದ ಒಂದು ವರ್ಷದ ಅವಧಿಯಲ್ಲಿ ಹಲವಾರು ಸಂಸ್ಥೆಗಳು ವೆಚ್ಚವನ್ನು ಕಡಿತ ಮಾಡುವ ನಿಟ್ಟಿನಲ್ಲಿ ಮತ್ತು ನಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ಉದ್ಯೋಗ ಕಡಿತವನ್ನು ಮಾಡುತ್ತಾ ಬಂದಿದೆ. ಹಾಗೆಯೇ ಶಿಕ್ಷಣ ಪ್ಲಾಟ್ಫಾರ್ಮ್ ಆದ ಫ್ರಂಟ್ರೋ ಸುಮಾರು ಶೇಕಡ 75ರಷ್ಟು ಉದ್ಯೋಗವನ್ನು ಕಡಿತ ಮಾಡಿತ್ತು. ಈಗ ಈ ದೀಪಿಕಾ ಪಡುಕೋಣೆ ಮತ್ತು ರಫ್ತಾರ್ ನೇತೃತ್ವದ ಸಂಸ್ಥೆಯು ಸಂಪೂರ್ಣವಾಗಿ ಬಂದ್ ಆಗಿದೆ.
ಸೋಮವಾರ ಬಿಕ್ಯೂ ಪ್ರೈಮ್ಗೆ ನೀಡಿದ ಹೇಳಿಕೆಯಲ್ಲಿ, ಸಹ-ಸಂಸ್ಥಾಪಕ ಇಶಾನ್ ಪ್ರೀತ್ ಸಿಂಗ್ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ. ಜೂನ್ 30 ರಂದು ಸ್ಟಾರ್ಟ್ಅಪ್ ಅಧಿಕೃತವಾಗಿ ನಿಯಮಿತ ಕಾರ್ಯಾಚರಣೆಯನ್ನು ನಿಲ್ಲಿಸಿದೆ ಎಂದು ಹೇಳಿದ್ದಾರೆ. "ಈ ಪ್ಲಾಟ್ಫಾರ್ಮ್ ಸದ್ಯ ಮುಚ್ಚಲಾಗುತ್ತದೆ. ಸಂಭವನೀಯ ಖರೀದಿ ಒಪ್ಪಂದಗಳನ್ನು ಪರಿಶೀಲಿಸುತ್ತಿದೆ ಎಂದು ಹೇಳಿಕೆಯಲ್ಲಿ ಇಶಾನ್ ಪ್ರೀತ್ ಸಿಂಗ್ ತಿಳಿಸಿದ್ದಾರೆ.

ಮುಂದಿನ ತಿಂಗಳುಗಳಲ್ಲಿ ಒಪ್ಪಂದದ ಬಗ್ಗೆ ನಿರ್ಧಾರವನ್ನು ಮಾಡಲಾಗುತ್ತದೆ. "ಮಕ್ಕಳ ಶಿಕ್ಷಣದ ನಿಟ್ಟಿನಲ್ಲಿ ನಾವು ಮೂರರಿಂದ ನಾಲ್ಕು ಟೆಸ್ಟ್ಗಳನ್ನು ಮಾಡಿದ್ದೇವೆ. ಎಲಿವೇಶನ್ ಕ್ಯಾಪಿಟಲ್, ಲೈಟ್ಸ್ಪೀಡ್ ವೆಂಚರ್ ಪಾರ್ಟ್ನರ್ಸ್, ಕ್ರೆಡ್ನ ಕುನಾಲ್ ಶಾ, ಅನಾಕಾಡೆಮಿಯ ಗೌರವ್ ಮುಂಜಾಲ್ ಮತ್ತು ಶೇರ್ಚಾಟ್ನ ಫರೀದ್ ಅಹ್ಸನ್ನಂತಹ ಹೂಡಿಕೆದಾರರ ಸಹಾಯದಿಂದ ಈ ಸ್ಟಾರ್ಟ್ಅಪ್ ಸರಿಸುಮಾರು 17.2 ಮಿಲಿಯನ್ ಡಾಲರ್ ಅಥವಾ 130 ಕೋಟಿ ರೂಪಾಯಿ ಫಂಡ್ ರೈಸ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Startups: ಬೆಂಗಳೂರು ಅಲ್ಲದೆ ಬೇರೆ ಜಿಲ್ಲೆಗಳಲ್ಲೂ ಸ್ಟಾರ್ಟ್ಅಪ್ ರಾಜ್ಯ ಸರ್ಕಾರದ ಬಯಕೆ, ಇಲ್ಲಿದೆ ವಿವರ
"ಕಂಪನಿಯನ್ನು ಎಲ್ಲಿ ಲೋಕೆಟ್ ಮಾಡುವುದು ಎಂಬ ಬಗ್ಗೆ ನಾವು ಚರ್ಚೆ ನಡೆಸುತ್ತಿದ್ದೇವೆ. ನಮ್ಮ ಸಂಸ್ಥೆಯು ಉತ್ತಮ ಬೆಳವಣಿಗೆಯನ್ನು ಕಂಡಿದೆ. ಉತ್ತಮ ಮಾರ್ಜಿನ್ ಅನ್ನು ಕೂಡಾ ಗಳಿಸಿದ್ದೇವೆ. ಆದರೆ ಸಣ್ಣ ಸಂಸ್ಥೆಯಾಗಿದೆ," ಎಂದು ಇಶಾನ್ ಪ್ರೀತ್ ಸಿಂಗ್ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಇದು ಫಂಡಿಂಗ್ ಅಥವಾ ಹಣದ ವಿವಾರವಲ್ಲ. ರನ್ವೇ ಮೂರು ವರ್ಷಕ್ಕಿಂತ ಹೆಚ್ಚು ಎಂದು ಘೋಷಣೆ ಮಾಡಿದ್ದಾರೆ. ನೀವು ಹೆಚ್ಚಿನ ಜ್ಞಾನವನ್ನು ಪಡೆದಂತೆ, ಒಂದು ಪ್ರಮುಖ ಕಂಪನಿಯನ್ನು ರಚಿಸುವ ನಿಮ್ಮ ಗುರಿಯು ವಾಸ್ತವಿಕವಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಹೆಚ್ಚು ಮುಖ್ಯವಾಗಿದೆ ಎಂದು ಕೂಡಾ ಹೇಳಿದ್ದಾರೆ.
ದೀಪಿಕಾ ಪಡುಕೋಣೆ ವ್ಯವಹಾರ
ಸ್ಟಾರ್ಟ್-ಅಪ್ಗಳಲ್ಲಿ ಹೂಡಿಕೆ ಮಾಡುವ ವಿಚಾರದಲ್ಲಿ ದೀಪಿಕಾ ಪಡುಕೋಣೆ ಹೆಸರುವಾಸಿಯಾಗಿದ್ದಾರೆ. ಹಲವಾರು ಉದ್ಯಮಗಳಲ್ಲಿ ಹೂಡಿಕೆ ಮಾಡುತ್ತಾ ಬಂದಿದ್ದಾರೆ. 2014 ರಲ್ಲಿ ಕೆಎ ಎಂಟರ್ಪ್ರೈಸಸ್ ಅನ್ನು ಸ್ಥಾಪನೆ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಸ್ಕಿನ್ಕೇರ್ ಸಂಸ್ಥೆಗಳಿಗೆ ಹೂಡಿಕೆ ಮಾಡಿದ್ದಾರೆ. ದೀಪಿಕಾ ಪಡುಕೋಣೆ ಬೆಂಬಲ ಮಾಡಿದ ಫ್ರಂಟ್ರೋ ಬಂದ್ ಆದರೂ ಕೂಡಾ ಬೇರೆ ಬೇರೆ ವ್ಯಾಪಾರಗಳಲ್ಲಿ ಹೂಡಿಕೆಗೆ ಮುಂದಾಗಿದ್ದಾರೆ.
More From GoodReturns

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ



Click it and Unblock the Notifications