2023-2024ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅಧಿವೇಶನ ಜನವರಿ 31ರಂದು ಆರಂಭವಾಗಿದೆ. ಅಧಿವೇಶನವು ರಾಷ್ಟ್ರಪತಿ ದ್ರೌಪತಿ ಮುರ್ಮು ಭಾಷಣದೊಂದಿಗೆ ಆರಂಭವಾಗಿದೆ. ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆಯನ್ನು ಮಂಡನೆ ಮಾಡಿದ್ದಾರೆ. ಈ ಆರ್ಥಿಕ ಸಮೀಕ್ಷೆಯಲ್ಲಿ 2022ರ ನವೆಂಬರ್ವರೆಗೆ 135.2 ಕೋಟಿ ಆಧಾರ್ ಸಂಖ್ಯೆ ಜನರೇಟ್ ಮಾಡಲಾಗಿದೆ ಎಂದು ಉಲ್ಲೇಖಿತವಾಗಿದೆ.
2022ರ ನವೆಂಬರ್ವರೆಗೆ 135.2 ಕೋಟಿ ಆಧಾರ್ ಸಂಖ್ಯೆ ಜನರೇಟ್ ಮಾಡಲಾಗಿದ್ದು, ಸುಮಾರು 71.1 ಕೋಟಿ ಆಧಾರ್ ಸಂಖ್ಯೆಯನ್ನು ಅಪ್ಡೇಟ್ ಮಾಡಲಾಗಿದೆ. ದೇಶದಲ್ಲಿ ಪ್ರಸ್ತುತ ಎಲ್ಲ ಕಾರ್ಯಗಳಿಗೂ ಮುಖ್ಯವಾಗಿರುವ 12 ಡಿಜಿಟಲ್ ವಿಶಿಷ್ಠ ಸಂಖ್ಯೆಯು ಈಗ ಪ್ರಮುಖ ಅಸ್ತ್ರದಂತಾಗಿದೆ ಎಂಬುವುದುನ್ನು ಇದು ಸೂಚಿಸುತ್ತದೆ.
ಪ್ರಸ್ತುತ ಎಲ್ಲ ವಹಿವಾಟಿಗೂ ಆಧಾರ್ ಕಾರ್ಡ್ ಅತೀ ಮುಖ್ಯ ಸಾಧನವಾಗಿದೆ. ಅತೀ ಮುಖ್ಯ ದಾಖಲೆಗಳಲ್ಲಿ ಒಂದಾದ ಪ್ಯಾನ್ ಕಾರ್ಡ್ಗೂ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಪ್ಯಾನ್ ಆಧಾರ್ ಲಿಂಕ್ಗೆ ಮಾರ್ಚ್ 31 ಕೊನೆಯ ದಿನವಾಗಿದೆ. ಅದಾದ ಬಳಿಕ ಪ್ಯಾನ್ ನಿಷ್ಕ್ರೀಯವಾಗುವ ಸಾಧ್ಯತೆಯಿದೆ. ಹಾಗೆಯೇ ಸರ್ಕಾರದ ಯಾವುದೇ ಒಂದು ಯೋಜನೆಯ ಫಲಾನುಭವಿಗಳು ನಾವಾಗಬೇಕಾದರೆ ನಮ್ಮ ಬಳಿ ಆಧಾರ್ ಕಾರ್ಡ್ ಇರಬೇಕಾಗುತ್ತದೆ. ಆಧಾರ್ ಇದ್ದರೆ ಮಾತ್ರ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತದೆ. ಈ ಆಧಾರ್ ಕಾರ್ಡ್ ಬಳಸಿ ಯಾವೆಲ್ಲ ಕಾರ್ಯಗಳನ್ನು ಮಾಡಲಾಗಿದೆ ತಿಳಿಯೋಣ ಮುಂದೆ ಓದಿ....
ಯಾವೆಲ್ಲ ಕಾರ್ಯಗಳಿಗೆ ಆಧಾರ್ ಬಳಕೆ ಮಾಡಲಾಗಿದೆ?
ನವೆಂಬರ್ 2022ರವರೆಗೆ ಆಧಾರ್ ಅಡಿಯಲ್ಲಿ 8,621.2 ಕೋಟಿ ದೃಢೀಕರಣ ಮಾಡಲಾಗಿದೆ. ಹಾಗೆಯೇ ಈವರೆಗೆ ಆಧಾರ್ ಬಳಿಸಿಕೊಂಡು 1,350.2 ಕೋಟಿ ಇಕೆವೈಸಿ ಮಾಡಲಾಗಿದೆ. ಆರ್ಥಿಕ ಸಮೀಕ್ಷೆಯ ಪ್ರಕಾರ ಭಾರತದಲ್ಲಿ 75.3 ಕೋಟಿ ಕಟುಂಬವು ತಮ್ಮ ರೇಷನ್ ಕಾರ್ಡ್ಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಸಿಕೊಂಡಿದ್ದಾರೆ. 27.9 ಕೋಟಿ ಜನರು ತಮ್ಮ ಆಧಾರ್ ಅನ್ನು ಎಲ್ಪಿಜಿ ಸಬ್ಸಿಡಿಗೆ ಲಿಂಕ್ ಮಾಡಿಕೊಂಡಿದ್ದಾರೆ. ಇನ್ನು 75.4 ಕೋಟಿ ಬ್ಯಾಂಕ್ ಖಾತೆಗಳು ಆಧಾರ್ನೊಂದಿಗೆ ಲಿಂಕ್ ಆಗಿದೆ. ಆಧಾರ್ ಪಾವತಿ ವಿಧಾನದಿಂದ (AePS) 1,549.8 ಕೋಟಿ ವಹಿವಾಟು ನಡೆದಿದೆ.
ಆಧಾರ್ ಪ್ರಾಮುಖ್ಯತೆ ತಿಳಿಯಿರಿ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (ಯುಐಡಿಎಐ) ದೇಶದಲ್ಲಿ ಆಧಾರ್ ಕಾರ್ಡ್ ಪ್ರಕ್ರಿಯೆಯನ್ನು ನಿರ್ವಹಣೆ ಮಾಡುವ ಜವಾಬ್ದಾರಿಯನ್ನು ಹೊಂದಿದೆ. ಪ್ರತಿ ವ್ಯಕ್ತಿಗೂ ಆಧಾರ್ ಸಂಖ್ಯೆ ನೀಡುವಲ್ಲಿ ಯುಐಡಿಎಐ ಪಾತ್ರ ಪ್ರಮುಖವಾಗಿದೆ. ಆಧಾರ್ ಸುರಕ್ಷತೆ ಹಾಗೂ ಆಧಾರ್ ದುರ್ಬಲಕೆಯಾಗದಂತೆ ನೋಡಿಕೊಳ್ಳುವ ಕಾರ್ಯವನ್ನು ಕೂಡಾ ಯುಐಡಿಎಐ ಮಾಡುತ್ತಾ ಬಂದಿದೆ. 318 ಕೇಂದ್ರ ಯೋಜನೆಗಳು ಮತ್ತು 720 ರಾಜ್ಯದ ನೇರ ಪ್ರಯೋಜನ ವರ್ಗಾವಣೆ ಯೋಜನೆಗಳಿಗೆ ಆಧಾರ್ ಕಾರ್ಡ್ ಅತೀ ಮುಖ್ಯವಾಗಿದೆ. ಹಣಕಾಸು ಸೇವೆ, ಸಬ್ಸಿಡಿ ಹಾಗೂ ಇತರೆ ಯೋಜನೆಗಳ ಲಾಭ ಪಡೆಯಲು ಆಧಾರ್ ಮುಖ್ಯವಾಗಿದೆ.
AePS ವಹಿವಾಟಿನ ಬಗ್ಗೆ ಮಾಹಿತಿ
ಆಧಾರ್ ಪಾವತಿ ವಿಧಾನದಿಂದ (AePS) ಬ್ಯಾಂಕಿಂಗ್ ವಹಿವಾಟು ಮತ್ತು ವಿತ್ಡ್ರಾ ಮಾಡಲು ಸಾಧ್ಯವಾಗುತ್ತದೆ. ನಗದು ಡೆಪಾಸಿಟ್ ಮಾಡಲು, ಒಂದು ಬ್ಯಾಂಕ್ ಖಾತೆಯಿಂದ ಇನ್ನೊಂದು ಖಾತೆಗೆ ಹಣ ವರ್ಗಾವಣೆ ಮಾಡಲೂ ಆಗುತ್ತದೆ. ಬರೀ ಬ್ಯಾಂಕ್ ಖಾತೆದಾರರ ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ಈ ವಹಿವಾಟು ನಡೆಸಬಹುದಾಗಿದೆ. ಕೋವಿಡ್ ಸಂದರ್ಭದಲ್ಲಿ ಮನೆ ಬಾಗಿಲಿಗೆ ತಲುಪಿ ಆಧಾರ್ ಮೂಲಕ ಬ್ಯಾಂಕಿಂಗ್ ಸೇವೆಯನ್ನು ನೀಡಲಾಗಿದೆ. PAHAL ಮತ್ತು MGNREGSನಂತಹ ಕೇಂದ್ರ ಯೋಜನೆಗಳು ಆಧಾರ್ ವಹಿವಾಟಿನ ಅಡಿಯಲ್ಲಿ ನವೆಂಬರ್ 2022ರವರೆಗೆ 1,010 ಕೋಟಿ ಯಶಸ್ವಿ ವಹಿವಾಟಿನಲ್ಲಿ 7,66,055.9 ಕೋಟಿ ರೂಪಾಯಿ ಪಾವತಿ ಮಾಡಿದೆ. ಕೋವಿನ್ ಪ್ಲಾಟ್ಫಾರ್ಮ್ನಲ್ಲಿಯೂ ಆಧಾರ್ ಮುಖ್ಯ ಪಾತ್ರ ವಹಿಸಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications