ಪ್ರಸಕ್ತ ಜಗತ್ತಿನಲ್ಲಿ ಜೀವನದ ಸುವರ್ಣ ವರ್ಷಗಳಲ್ಲಿ ಆರ್ಥಿಕ ಸ್ಥಿರತೆಯನ್ನು ಸಾಧಿಸುವಲ್ಲಿ ನಿವೃತ್ತಿ ಯೋಜನೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ (ಎಲ್ಐಸಿ) ಹಲವು ರೀತಿಯ ಪಿಂಚಣಿ ಯೋಜನೆಗಳನ್ನು ಪರಿಚಯಿಸಿದೆ.
ಆ ಪೈಕಿ ಎಲ್ಐಸಿ ಸರಳ ಪಿಂಚಣಿ ಯೋಜನೆಯೂ ಒಂದು. ಈ ನಾನ್- ಲಿಂಕ್ಡ್ ಏಕ-ಪ್ರೀಮಿಯಂ ಪ್ಲ್ಯಾನ್ ನಿವೃತ್ತರಾದವರಿಗೆ ಆದಾಯದ ಮೂಲವನ್ನು ಒದಗಿಸುತ್ತದೆ. ಇಲ್ಲಿ ಈ ಯೋಜನೆ ಕುರಿತು ಮಾಹಿತಿ ತಿಳಿಯೋಣ.

ಈ ಯೋಜನೆ ಹೀಗಿರುತ್ತದೆ?
* ನೀವು ಎಲ್ಐಸಿ ಪಿಂಚಣಿ ಯೋಜನೆಯನ್ನು ವೈಯಕ್ತಿಕವಾಗಿ ಅಥವಾ ಸಂಗಾತಿ ಜತೆಯಾಗಿ ಆಯ್ಕೆ ಮಾಡಿಕೊಳ್ಳಬಹುದು.
* ಈ ಯೋಜನೆಗೆ ಒಂದು ದೊಡ್ಡ ಮೊತ್ತದ ಹೂಡಿಕೆ ಮಾಡಬೇಕಿರುತ್ತದೆ. ಅದರ ನಂತರ ನೀವು ನಿಯಮಿತವಾಗಿ ಪಿಂಚಣಿ ಮೊತ್ತವನ್ನು ಪಡೆಯಲು ಪ್ರಾರಂಭಿಸುತ್ತೀರಿ.
* ಈ ಯೋಜನೆಯಡಿ ಪಿಂಚಣಿ ಮೊತ್ತವು ನಿಮ್ಮ ಜೀವನದುದ್ದಕ್ಕೂ ಸ್ಥಿರವಾಗಿರುತ್ತದೆ ಹಾಗೂ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ.
ಪ್ರೀಮಿಯಂ ಪಾವತಿಯಲ್ಲಿ ಅನುಕೂಲತೆ
* ಈ ಯೋಜನೆಯನ್ನು ಮಾಡಿಸುವ ಸಮಯದಲ್ಲಿ ಪ್ರೀಮಿಯಂ ಅನ್ನು ಮುಂಗಡವಾಗಿ ಪಾವತಿಸಲಾಗುತ್ತದೆ.
* ಈ ಯೋಜನೆಯು ಮಾಸಿಕ, ತ್ರೈಮಾಸಿಕ, ಅರ್ಧ ವಾರ್ಷಿಕ ಅಥವಾ ವಾರ್ಷಿಕ ಸೇರಿದಂತೆ ವಿವಿಧ ಪಿಂಚಣಿ ಪಾವತಿ ಆಯ್ಕೆಗಳನ್ನು ಒದಗಿಸುತ್ತದೆ.
* ಈ ಯೋಜನೆಯಡಿ ಮಾಸಿಕ ಪಿಂಚಣಿ ಕನಿಷ್ಠ 1000 ರೂಪಾಯಿಗಳಿಂದ ಪ್ರಾರಂಭವಾಗುತ್ತದೆ ಹಾಗೂ ಗರಿಷ್ಠ ಮಿತಿ ಇರುವುದಿಲ್ಲ. ಪ್ರೀಮಿಯಂಗೆ ಅನುಗುಣವಾಗಿ ಹಾಗೂ ನಿಮ್ಮ ಅಗತ್ಯಗಳಿಗೆ ಅನುಗುಣವಾಗಿ ನೀವು ಪಿಂಚಣಿ ಮೊತ್ತವನ್ನು ಸರಿ ಹೊಂದಿಸಬಹುದು.
ಸಾಲ ಸೌಲಭ್ಯಗಳು
* ಎಲ್ಐಸಿ ಸರಳ ಪಿಂಚಣಿ ಯೋಜನೆ ಪಾಲಿಸಿಯನ್ನು ಪ್ರಾರಂಭಿಸಿದ ಆರು ತಿಂಗಳ ನಂತರ ಸಾಲ ಸೌಲಭ್ಯವನ್ನು ಪಡೆಯಬಹುದು.
* ವೈದ್ಯಕೀಯ ಚಿಕಿತ್ಸೆ ಅಥವಾ ತುರ್ತು ಸಂದರ್ಭಗಳು ಸೇರಿದಂತೆ ನಾನಾ ರೀತಿಯ ಅಗತ್ಯಗಳಿಗೆ ಸಾಲವನ್ನು ಪಡೆಯಬಹದು.
ಪಾಲಿಸಿ ಸರೆಂಡರ್:
* ಆರು ತಿಂಗಳ ನಂತರ ಪಾಲಿಸಿಯನ್ನು ಸರೆಂಡರ್ ಮಾಡುವ ಆಯ್ಕೆಯನ್ನು ಈ ಯೋಜನೆ ಒದಗಿಸುತ್ತದೆ. ಅಂದರೆ, ಮೂಲ ಧನದ ಶೇಕಡ 95 ರಷ್ಟು ಮೊತ್ತವನ್ನು ಮರುಪಾವತಿಸಲಾಗುತ್ತದೆ.
* ಈ ಯೋಜನೆಗೆ ಸೇರ್ಪಡೆಯಾಗಲು ಕನಿಷ್ಠ 40 ವಯಸ್ಸಾಗಿರಬೇಕು ಹಾಗೂ ಗರಿಷ್ಠ ವಯಸ್ಸು 80 ವರ್ಷ ಆಗಿದೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ವಾರಾಂತ್ಯದಲ್ಲೂ ಚಿನ್ನದ ಬೆಲೆ ಭರ್ಜರಿ ಇಳಿಕೆ! ದಿಢೀರ್ 10,300 ರೂ. ಕುಸಿತ



Click it and Unblock the Notifications