ರಿಲಯನ್ಸ್ ಇಂಡಸ್ಟ್ರೀಸ್ನಲ್ಲಿ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪದಲ್ಲಿ ಮುಕೇಶ್ ಅಂಬಾನಿ, ಅನಿಲ್ ಅಂಬಾನಿ ಮತ್ತು ಇತರ ಘಟಕಗಳಿಗೆ ಸೆಬಿಯು 25 ಕೋಟಿ ರೂಪಾಯಿ ದಂಡ ವಿಧಿಸಿದೆ. ಈ ಆದೇಶವನ್ನು ಸೆಕ್ಯುರಿಟೀಸ್ ಅಪೆಲೇಟ್ ಟ್ರಿಬ್ಯೂನಲ್ (ಎಸ್ಎಟಿ) ಶುಕ್ರವಾರ ರದ್ದುಗೊಳಿಸಿದೆ. ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ನಿರ್ದೇಶನದ ವಿರುದ್ಧ ಅಂಬಾನಿ ಸಂಸ್ಥೆಗಳು ಮೇಲ್ಮನವಿ ಸಲ್ಲಿಸಿದ ಬಳಿಕ ಈ ಕ್ರಮವನ್ನು ಕೈಗೊಳ್ಳಲಾಗಿದೆ.
"ಅರ್ಜಿದಾರರು ಎಸ್ಎಎಸ್ಟಿ (ಷೇರುಗಳು ಮತ್ತು ಸ್ವಾಧೀನಗಳ ಗಣನೀಯ ಸ್ವಾಧೀನ) ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ನಾವು ಕಂಡುಕೊಂಡಿದ್ದೇವೆ. ಮೇಲ್ಮನವಿದಾರರ ಮೇಲೆ ದಂಡವನ್ನು ವಿಧಿಸುವ ಯಾವುದೇ ಕಾನೂನು ಅಧಿಕಾರವಿಲ್ಲ. ಆದ್ದರಿಂದಾಗಿ ಸೆಬಿ ಆದೇಶವನ್ನು ನಾವು ಉಳಿಸಿಕೊಳ್ಳಲು ಸಾಧ್ಯವಿಲ್ಲ, ನಾವದನ್ನು ರದ್ದುಗೊಳಿಸುತ್ತೇವೆ," ಎಂದು ಎಸ್ಎಟಿ ತನ್ನ 124 ಪುಟಗಳ ಆದೇಶದಲ್ಲಿ ಹೇಳಿದೆ.

ಈ ಪ್ರಕರಣದಲ್ಲಿ ಸ್ವಾಧೀನ ನಿಯಮಗಳನ್ನು ಅನುಸರಿಸಲು ವಿಫಲವಾಗಿದೆ ಎಂದು ಆರೋಪ ಮಾಡಲಾಗಿದೆ. ಸೆಬಿಯ ಆದೇಶದ ನಂತರದ ದಂಡದ ಮೊತ್ತವನ್ನು ಮೇಲ್ಮನವಿದಾರರು ಡೆಪಾಸಿಟ್ ಮಾಡಿದ್ದಾರೆ ಎಂದು ಎಸ್ಎಟಿ ಪರಿಶೀಲನೆಯ ವೇಳೆ ತಿಳಿದುಬಂದಿದೆ. 25 ಕೋಟಿ ರೂಪಾಯಿ ಮೊತ್ತವನ್ನು ನಾಲ್ಕು ವಾರಗಳಲ್ಲಿ ಮರುಪಾವತಿ ಮಾಡುವಂತೆ ಮಾರುಕಟ್ಟೆ ನಿಯಂತ್ರಕರಿಗೆ ನಿರ್ದೇಶನ ನೀಡಿದೆ.
2000 ರ ಹಿಂದಿನ ರಿಲಯನ್ಸ್ ಇಂಡಸ್ಟ್ರೀಸ್ ಪ್ರಕರಣದಲ್ಲಿ ಸ್ವಾಧೀನದ ಮಾನದಂಡಗಳನ್ನು ಅನುಸರಿಸದಿದ್ದಕ್ಕಾಗಿ ಸೆಬಿ 2021 ರ ಏಪ್ರಿಲ್ನಲ್ಲಿ ಮುಕೇಶ್ ಅಂಬಾನಿ, ಅನಿಲ್ ಅಂಬಾನಿ, ನೀತಾ ಅಂಬಾನಿ, ಟೀನಾ ಅಂಬಾನಿ ಮತ್ತು ಇತರ ಘಟಕಗಳ ಮೇಲೆ ಒಟ್ಟು 25 ಕೋಟಿ ರೂಪಾಯಿ ದಂಡವನ್ನು ವಿಧಿಸಿತ್ತು.
ಆರ್ಐಎಲ್ ಪ್ರವರ್ತಕರು ಮತ್ತು ಕನ್ಸರ್ಟ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗಳು (ಪಿಎಸಿ) 2000 ರಲ್ಲಿ ಕಂಪನಿಯಲ್ಲಿ ಶೇಕಡ 5 ಕ್ಕಿಂತ ಹೆಚ್ಚು ಷೇರುಗಳನ್ನು ಸ್ವಾಧೀನಪಡಿಸಿಕೊಂಡಿರುವುದನ್ನು ಬಹಿರಂಗಪಡಿಸಲು ವಿಫಲರಾಗಿದ್ದಾರೆ ಎಂದು ಸೆಬಿ ಆದೇಶವು ಹೇಳಿತ್ತು. ಇನ್ನು ಮುಕೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ತಮ್ಮ ತಂದೆ ನಿರ್ಮಿಸಿದ ವ್ಯಾಪಾರಂ ಸಾಮ್ರಾಜ್ಯವನ್ನು
ಆರ್ಐಎಲ್ ಪ್ರವರ್ತಕರು ಮತ್ತು ಕನ್ಸರ್ಟ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗಳು (ಪಿಎಸಿ) 2000 ರಲ್ಲಿ ಕಂಪನಿಯಲ್ಲಿ ಶೇಕಡಾ 5 ಕ್ಕಿಂತ ಹೆಚ್ಚು ಷೇರುಗಳನ್ನು ಸ್ವಾಧೀನಪಡಿಸಿಕೊಂಡಿರುವುದನ್ನು ಬಹಿರಂಗಪಡಿಸಲು ವಿಫಲರಾಗಿದ್ದಾರೆ ಎಂದು ಸೆಬಿ ಆದೇಶವು ಹೇಳಿತ್ತು. ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ತಮ್ಮ ತಂದೆ ಧೀರೂಭಾಯಿ ಅಂಬಾನಿ ನಿರ್ಮಿಸಿದ ವ್ಯಾಪಾರ ಸಾಮ್ರಾಜ್ಯವನ್ನು ಈಗಾಗಲೇ ಹಂಚಿಕೊಂಡಿದ್ದಾರೆ.
ಶೇಕಡ 6.83 ರಷ್ಟು ಪಾಲನ್ನು ಆರ್ಐಎಲ್ ಪ್ರವರ್ತಕರು ಮತ್ತು ಪಿಎಸಿಗಳು ಸ್ವಾಧೀನಪಡಿಸಿಕೊಂಡಿವೆ ಎಂದು ಸೆಬಿ ಗಮನಿಸಿದೆ. ಷೇರುಗಳನ್ನು ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಸಾರ್ವಜನಿಕ ಘೋಷಣೆ ಮಾಡುವ ಜವಾಬ್ದಾರಿಯು ಜನವರಿ 7, 2000 ರಂದು ಹುಟ್ಟಿಕೊಂಡಿದೆ. ಜನವರಿ 1994 ರಲ್ಲಿ ನೀಡಲಾದ ವಾರಂಟ್ಗಳ ಅನುಷ್ಠಾನದ ಮೇಲೆ ಪಿಎಸಿಗಳುಗೆ ಆರ್ಐಎಲ್ ಈಕ್ವಿಟಿ ಷೇರುಗಳನ್ನು ಹಂಚಿಕೆ ಮಾಡಿದ ದಿನಾಂಕ ಇದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಆದರೆ ಪ್ರವರ್ತಕರು ಮತ್ತು ಪಿಎಸಿಗಳು ಷೇರುಗಳನ್ನು ಸ್ವಾಧೀನಪಡಿಸಿಕೊಳ್ಳಲು ಯಾವುದೇ ಸಾರ್ವಜನಿಕ ಪ್ರಕಟಣೆಯನ್ನು ಮಾಡಿಲ್ಲ ಎಂದು ಸೆಬಿ ಗಮನಿಸಿದೆ. ಈ ಕಾರಣದಿಂದಾಗಿ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲು ಮಾಡಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications