ಚಿತ್ರದುರ್ಗ, ಜುಲೈ 12: ಕರ್ನಾಟಕದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಮತ್ತು ರಾಜ್ಯದ ಇತರೆ ಪ್ರಾದೇಶಿಕ ಭಾಷಾ ಚಲನಚಿತ್ರಗಳಿಗೆ ಅನ್ವಯಿಸಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2019 ರ ಕ್ಯಾಲೆಂಡರ್ (ದಿನದರ್ಶಿ) ವರ್ಷದ ಸಹಾಯಧನಕ್ಕಾಗಿ ಅರ್ಹ ನಿರ್ಮಾಪಕರಿಂದ ಅರ್ಜಿ ಆಹ್ವಾನಿಸಿದೆ. ಆನ್ಲೈನ್ ವ್ಯವಸ್ಥೆಯಡಿ ಅರ್ಜಿ ಸಲ್ಲಿಸಲು ಆಗಸ್ಟ್ 8 ಕೊನೆ ದಿನಾಂಕವಾಗಿದೆ.
ದಿ. 1.1.2019 ರಿಂದ ದಿ. 31.12.2019 (ಎರಡು ದಿನಗಳು ಸೇರಿದಂತೆ) ರವರೆಗೆ ಸಿಬಿಎಫ್ಸಿ (ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್) ಯಿಂದ ಸೆನ್ಸಾರ್ ಪ್ರಮಾಣ ಪತ್ರ ಪಡೆದಿರುವ ಮತ್ತು ರಾಜ್ಯದಲ್ಲಿ ಚಿತ್ರೀಕರಣ ನಡೆಸಲು ಇಲಾಖೆಯಿಂದ ಅನುಮತಿ ಪಡೆದಿರುವ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಲನಚಿತ್ರಗಳು ಮಾತ್ರ 2019 ರ ಕ್ಯಾಲೆಂಡರ್ ವರ್ಷದ ಸಹಾಯಧನಕ್ಕೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅರ್ಹವಾಗಿರುತ್ತವೆ ಎಂದು ಇಲಾಖೆಯ ಆಯುಕ್ತ ಡಾ. ಪಿ. ಎಸ್. ಹರ್ಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಚಲನಚಿತ್ರ ನಿರ್ಮಾಪಕರು ಸಹಾಯಧನಕ್ಕಾಗಿ sevasindhuservices ವೆಬ್ ತಾಣದಲ್ಲಿ 10,647 ರೂ. ಶುಲ್ಕ ಪಾವತಿಸಿ, ಅಗತ್ಯ ಮಾಹಿತಿ, ದಾಖಲಾತಿ, ಪ್ರಮಾಣ ಪತ್ರದೊಂದಿಗೆ ಕೋರಿಕೆ ಅರ್ಜಿ ಸಲ್ಲಿಸಬೇಕು. ಬಳಿಕ ಆನ್ಲೈನ್ನಿಂದ ಭರ್ತಿ ಮಾಡಿದ ಅರ್ಜಿ ಮತ್ತು ಶುಲ್ಕ ಪಾವತಿ ರಸೀದಿಯನ್ನು ಡೌನ್ಲೋಡ್ ಮಾಡಿಕೊಂಡು, ಅದರೊಂದಿಗೆ ಸೆನ್ಸಾರ್ ಪ್ರಮಾಣ ಪತ್ರದಲ್ಲಿ ನಮೂದಾಗಿರುವ ಅವಧಿಗೆ ಅನುಗುಣವಾಗಿ ಎರಡು ಬ್ಲೂರೇ ಡಿಸ್ಕ್ ಮತ್ತು ನಿರ್ಮಾಪಕರು ದೃಢೀಕರಿಸಿರುವ ಎಲ್ಲಾ ದಾಖಲಾತಿ ಮತ್ತು ಪ್ರಮಾಣ ಪತ್ರಗಳನ್ನು ಒಟ್ಟು 10 (ಹತ್ತು) ಸೆಟ್ಗಳಂತೆ ಜೋಡಿಸಿಕೊಂಡು ಕೆಳಕಂಡ ವಿಳಾಸಕ್ಕೆ ಕಳಿಸತಕ್ಕದ್ದು.

ಚಲನಚಿತ್ರ ಶಾಖೆ, ವಾರ್ತಾ ಸೌಧ, #17, ಮೊದಲನೇ ಮಹಡಿ, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು-560001 ಈ ವಿಳಾಸಕ್ಕೆ ಖುದ್ದಾಗಿ ಕಚೇರಿ ಅವಧಿಯಲ್ಲಿ ಆಗಸ್ಟ್ 18 ರವರೆಗೆ ಭೇಟಿ ನೀಡಿ ಚಲನಚಿತ್ರ ನಿರ್ಮಾಪಕರು ಸಲ್ಲಿಸಬೇಕು.
ಅಗತ್ಯ ಮಾಹಿತಿಗಳನ್ನು ನಿರ್ಮಾಣ ಸಂಸ್ಥೆಯ ಶೀರ್ಷಿಕೆ ಪತ್ರದಲ್ಲಿ (ಲೆಟರ್ ಹೆಡ್) ಮೊಹರು ಮತ್ತು ಸಹಿಯೊಂದಿಗೆ ನೀಡಬೇಕು. ಆನ್ಲೈನ್ ಅರ್ಜಿಯಲ್ಲಿ ನಮೂದಿಸಿರುವ ಚಲನಚಿತ್ರದ ಬ್ಲೂರೇ ಡಿಸ್ಕ್ ಅನ್ನು ಭೌತಿಕವಾಗಿ ಇಲಾಖೆಗೆ ನೀಡುವ ವೇಳೆಯೇ ಅದರಲ್ಲಿನ ದತ್ತಾಂಶವನ್ನು ಪ್ರದರ್ಶಿಸಿ ಖಾತ್ರಿಪಡಿಸಬೇಕು.
ಆನ್ಲೈನ್ನಲ್ಲಿ ಶುಲ್ಕ ಮತ್ತು ಅರ್ಜಿ ಸಲ್ಲಿಸದೇ ನೇರವಾಗಿ ಸಹಾಯಧನ ಕೋರಿಕೆಯ ಅರ್ಜಿಗಳನ್ನು ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ. ಸೇವಾಸಿಂಧು ಹೊರತು ಪಡಿಸಿ ಅಂಚೆ, ಕೋರಿಯರ್, ಇಮೇಲ್ ಸೇರಿದಂತೆ ಇನ್ನಿತರ ಮಾರ್ಗಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಂತೆಯೇ, ನಿಗದಿತ ಅವಧಿ ಬಳಿಕ ಅರ್ಜಿಗಳನ್ನು ಆನ್ಲೈನ್ ಇಲ್ಲವೆ ಭೌತಿಕವಾಗಿ ಅಥವಾ ಇನ್ಯಾವುದೇ ರೂಪದಲ್ಲಿಯೂ ಸ್ವೀಕರಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications