ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆಯಲ್ಲಿ ಪೆಟ್ರೋಲ್-ಡೀಸೆಲ್ ದರದಲ್ಲಿ ಏರಿಳಿಕೆ ಆಗುತ್ತಲೇ ಇರುತ್ತದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ ಗೆ ಬದಲಾವಣೆ ಆದಂತೆ ದೇಶದಲ್ಲಿ ತೈಲ ಬೆಲೆ ಏರಿಳಿತಗೊಳ್ಳುತ್ತದೆ. ಪ್ರತಿನಿತ್ಯವು ಅತ್ಯವಶ್ಯಕ ಸಂಪನ್ಮೂಲವಾಗಿರುವ ಪೆಟ್ರೋಲ್-ಡೀಸೆಲ್ ಬೆಲೆಯು ನಿನ್ನೆ ಇದ್ದಂತೆಯೇ ಇಂದು ಇರುವುದಿಲ್ಲ. ಹೀಗೆ ಪ್ರತಿ ದಿನ ಏರಿಳಿತಗೊಳ್ಳುವ ತೈಲ ದರವನ್ನು ನೀವು ಇದ್ದಲ್ಲಿಯೇ ತಿಳಿದುಕೊಳ್ಳಬಹುದು.
ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್ (ಐಒಸಿಎಲ್) ದೇಶದ ವಿವಿಧ ಭಾಗಗಳಲ್ಲಿ ಪ್ರಸ್ತುತ ಇಂಧನ ಬೆಲೆಗಳ ಬಗ್ಗೆ ಗ್ರಾಹಕರಿಗೆ ತಿಳಿಸಲು ಎಸ್ಎಂಎಸ್(SMS) ಆಧಾರಿತ ಸೇವೆಯನ್ನು ಒದಗಿಸುತ್ತದೆ. ದೇಶದ ಅತಿದೊಡ್ಡ ಇಂಧನ ಚಿಲ್ಲರೆ ವ್ಯಾಪಾರಿ ಇಂಡಿಯನ್ ಆಯಿಲ್ ಕಾರ್ಪೋರೇಶನ್ ಮೊಬೈನಲ್ ನಲ್ಲಿ SMS ಮೂಲಕ ಮಾಹಿತಿ ನೀಡಲು ಅನುವು ಮಾಡಿಕೊಟ್ಟಿದೆ.

ಈ ಸೇವೆಯನ್ನು ಬಳಸಲು ಬಳಕೆದಾರರು ನಿರ್ದಿಷ್ಟ ಸ್ವರೂಪದಲ್ಲಿ SMS ಕಳುಹಿಸುವ ಅಗತ್ಯವಿದೆ. ಬಳಿಕ ನೀವು ಕೇಳಿದ ನಿರ್ದಿಷ್ಟ ಸ್ಥಳದಲ್ಲಿ ಪೆಟ್ರೋಲ್-ಡೀಸೆಲ್ ದರಗಳ ಮಾಹಿತಿಗಳನ್ನೊಳಗೊಂಡ SMS ನಿಮ್ಮ ಮೊಬೈಲ್ಗೆ ಬರಲಿದೆ.
ಪೆಟ್ರೋಲ್-ಡೀಸೆಲ್ ದರ ತಿಳಿದುಕೊಳ್ಳಲು ಏನು ಮಾಡಬೇಕು?
ಇಂದಿನ ಪ್ರಸ್ತುತ ಪೆಟ್ರೋಲ್-ಡೀಸೆಲ್ ದರ ತಿಳಿದುಕೊಳ್ಳಲು ನಿಮ್ಮ ಮೊಬೈಲ್ನಿಂದ RSP(ಸ್ಪೇಸ್) ಪೆಟ್ರೋಲ್ ಪಂಪ್ ಡೀಲರ್ ಕೋಡ್ ಟೈಪ್ ಮಾಡಿ 9224992249 ನಂಬರ್ ಗೆ SMS ಮಾಡಬೇಕು.

ಇಂಡಿಯನ್ ಆಯಿಲ್ ದೇಶದ 41 ನಗರಗಳ ಪೆಟ್ರೋಲ್-ಡೀಸೆಲ್ ದರದ ಮಾಹಿತಿಯನ್ನು ಒದಗಿಸುತ್ತದೆ. ಅವುಗಳಲ್ಲಿ ಪ್ರಮುಖವಾದವು ಈ ಕೆಳಗಿವೆ.
City SMS Text
ಬೆಂಗಳೂರು RSP 118219
ಚೆನ್ನೈ RSP 133593
ಹೈದ್ರಾಬಾದ್ RSP 134483
ಜೈಪುರ RSP 123143
ಕೊಲ್ಕತ್ತಾ RSP 119941
ಲಕ್ನೋ RSP 155054
ಮುಂಬೈ RSP 108412
ದೆಹಲಿ RSP 102072
ನೊಯ್ಡಾ RSP 155444
ಪಾಟ್ನಾ RSP 166873
ವಿಜಯವಾಡ RSP 127611
ವಿಶಾಖಪಟ್ಟಣ RSP 127290
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications