ಭದ್ರತೆಯನ್ನು ಬಲಪಡಿಸುವ ಮತ್ತು ಆಧಾರ್ ಕಾರ್ಡ್ ಹೊಂದಿರುವವರಿಗೆ ನಿಯಂತ್ರಣವನ್ನು ಒದಗಿಸುವ ಪ್ರಯತ್ನವನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಮಾಡಿದೆ. ಅದಕ್ಕಾಗಿ 12 ಅಂಕಿಗಳ ಗುರುತಿನ ಚೀಟಿಯನ್ನು ಲಾಕ್ ಮಾಡಲು ಮತ್ತು ಅನ್ಲಾಕ್ ಮಾಡುವ ಅವಕಾಶವನ್ನು ನೀಡಿದೆ.
ವೈಯಕ್ತಿಕ ಡೇಟಾದ ಸುರಕ್ಷತೆ ಮತ್ತು ಗೌಪ್ಯತೆ ಅಪಾಯದಲ್ಲಿದೆ ಎಂದು ನೀವು ಭಾವಿಸಿದಾಗ, ಆಧಾರ್ ಬಯೋಮೆಟ್ರಿಕ್ಸ್ ಅನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ನೀವು ಲಾಕ್ ಮತ್ತು ಅನ್ಲಾಕ್ ಮಾಡಲು ಆಯ್ಕೆ ಮಾಡಬಹುದು.
ಯಾವುದೇ ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ಬಯೋಮೆಟ್ರಿಕ್ಗಳನ್ನು ಲಾಕ್ ಮಾಡಲು ಅಧಿಕಾರ ನೀಡುವ ಸೇವೆಯನ್ನು ಬಳಸಲು ಅನುಮತಿಸಲಾಗಿದೆ. ಲಾಕ್ ಮಾಡಲಾದ ಬಯೋಮೆಟ್ರಿಕ್ಸ್ ಆಧಾರ್ ಹೊಂದಿರುವವರು ತಮ್ಮ ಬಯೋಮೆಟ್ರಿಕ್ಗಳನ್ನು (ಬೆರಳಚ್ಚುಗಳು/ಐರಿಸ್) ದೃಢೀಕರಣಕ್ಕಾಗಿ ಬಳಸಲು ಸಾಧ್ಯವಾಗುವುದಿಲ್ಲ ಎಂದು ಖಚಿತಪಡಿಸುತ್ತದೆ.

"ಬಯೋಮೆಟ್ರಿಕ್ಸ್ ಅನ್ನು ಲಾಕ್ ಮಾಡಿದ ನಂತರ, ಬಯೋಮೆಟ್ರಿಕ್ಸ್ ಲಾಕ್ ಆಗಿರುವುದನ್ನು ಎರರ್ ಕೋಡ್ '330' ದೃಡಪಡಿಸುತ್ತದೆ. ಬಯೋಮೆಟ್ರಿಕ್ ವಿಧಾನ (ಫಿಂಗರ್ಪ್ರಿಂಟ್/ಐರಿಸ್) ಬಳಸಿಕೊಂಡು ಯಾವುದೇ ಸೇವೆ ತೆರೆಯಲು ಹೋದಾಗ ಲಾಕ್ ಆಗಿರುವುದು ತಿಳಿಯಲಿದೆ," ಎಂದು ಯುಐಡಿಎಐ ಹೇಳಿದೆ.
ನಿಮ್ಮ ಆಧಾರ್ನಲ್ಲಿರುವ ಫಿಂಗರ್ಪ್ರಿಂಟ್ ಮತ್ತು ಐರಿಸ್ ಡೇಟಾವನ್ನು ಲಾಕ್ ಮಾಡಬಹುದಾಗಿದೆ. ಒಮ್ಮೆ ಬಯೋಮೆಟ್ರಿಕ್ ಲಾಕಿಂಗ್ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದರೆ, ಆಧಾರ್ ಹೊಂದಿರುವವರು ಆಯ್ಕೆ ಮಾಡುವವರೆಗೆ ಅವರ ಬಯೋಮೆಟ್ರಿಕ್ ಲಾಕ್ ಆಗಿರುತ್ತದೆ. ಅದಕ್ಕಾಗಿ ಅನ್ಲಾಕ್ ಮಾಡಿ ಅಥವಾ ಲಾಕ್ ಸಿಸ್ಟಮ್ ಅನ್ನು ನಿಷ್ಕ್ರಿಯಗೊಳಿಸಿ ಎಂಬ ಆಯ್ಕೆಯನ್ನು ಮಾಡಬಹುದು. ಹಾಗಾದರೆ ನಿಮ್ಮ ಆಧಾರ್ ಬಯೋಮೆಟ್ರಿಕ್ಸ್ ಅನ್ನು ಲಾಕ್ ಮತ್ತು ಅನ್ಲಾಕ್ ಮಾಡುವುದು ಹೇಗೆ ಎಂಬುವುದನ್ನು ತಿಳಿಯಲು ಮುಂದೆ ಓದಿ...
ಆಧಾರ್ ಬಯೋಮೆಟ್ರಿಕ್ಸ್ ಲಾಕ್, ಅನ್ಲಾಕ್ ಮಾಡುವುದು ಹೇಗೆ?
* ಯುಐಡಿಎಐ ಅಧಿಕೃತ ವೆಬ್ಸೈಟ್ uidai.gov.in ಗೆ ಭೇಟಿ ನೀಡಿ
* My Aadhaar ಗೆ ಹೋಗಿ, ಆಧಾರ್ ಸೇವೆಗಳನ್ನು (Aadhaar Services) ಆಯ್ಕೆಮಾಡಿ
* ಲಾಕ್/ಅನ್ಲಾಕ್ ಬಯೋಮೆಟ್ರಿಕ್ಸ್ ಮೇಲೆ ಕ್ಲಿಕ್ ಮಾಡಿ
* "Lock Enable" ಆಯ್ಕೆಮಾಡಿ
* ಮುಂದಿನ ವೆಬ್ಪುಟದಲ್ಲಿ, ನಿಮ್ಮ 12 ಅಂಕಿಯ ಆಧಾರ್ ಸಂಖ್ಯೆಯನ್ನು ನಮೂದಿಸಿ
* ಕ್ಯಾಪ್ಚಾ ಕೋಡ್ ನಮೂದಿಸಿ
* Send OTP ಮೇಲೆ ಕ್ಲಿಕ್ ಮಾಡಿ, ಅದನ್ನು ನಮೂದಿಸಿ
* ಬಯೋಮೆಟ್ರಿಕ್ ಡೇಟಾವನ್ನು ಲಾಕ್ ಮಾಡಲು/ಅನ್ಲಾಕ್ ಮಾಡಲು ಆಯ್ಕೆಯನ್ನು ಆರಿಸಿ
ಈ ಸೇವೆಯನ್ನು ಪಡೆಯಲು ನೋಂದಾಯಿತ ಮೊಬೈಲ್ ಸಂಖ್ಯೆ ಅತ್ಯಗತ್ಯ ಎಂಬುದನ್ನು ನೀವು ಗಮನಿಸಬೇಕು. ನಿಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ನೊಂದಿಗೆ ನೋಂದಾಯಿಸದಿದ್ದರೆ, ನೀವು ಹತ್ತಿರದ ದಾಖಲಾತಿ ಕೇಂದ್ರ/ಮೊಬೈಲ್ ಅಪ್ಡೇಟ್ ಎಂಡ್ ಪಾಯಿಂಟ್ಗೆ ಭೇಟಿ ನೀಡಬಹುದು. ನಿಮ್ಮ ಫೋನ್ ಸಂಖ್ಯೆಯನ್ನು ನವೀಕರಿಸಬಹುದು.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications