ನಗದು ರಹಿತ ಖರೀದಿಗಳನ್ನು ಮಾಡಲು ವಿಶ್ವದಾದ್ಯಂತ ವಿವಿಧ ಡಿಜಿಟಲ್ ಪಾವತಿ ವಿಧಾನವನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರಸ್ತುತ ನಾವು ಖರೀದಿ ಮಾಡಿದಾಗ ಆನ್ಲೈನ್ ಮೂಲಕವೇ ನಗದು ರಹಿತವಾಗಿ ಪಾವತಿ ಮಾಡಬಹುದಾಗಿದೆ. ಈಗ ನೀವು ಎಟಿಎಂ ಕಾರ್ಡ್ ಇಲ್ಲದೆಯೇ ಎಟಿಎಂ ಮಿಷನ್ನಿಂದ ಹಣವನ್ನು ಪಡೆಯಲು ಸಾಧ್ಯವಾಗುತ್ತದೆ.
ಎನ್ಸಿಆರ್ ಕಾರ್ಪೊರೇಷನ್ ಯುಪಿಐ ಪ್ಲಾಟ್ಫಾರ್ಮ್ಗಳಲ್ಲಿ ಇರುವ ಮೊದಲ ಇಂಟರ್ಆಪರೇಬಲ್ ಕಾರ್ಡ್ಲೆಸ್ ಕ್ಯಾಶ್ ವಿತ್ಡ್ರಾವಲ್ (ಐಸಿಸಿಡಬ್ಲ್ಯು) ಅನ್ನು ಪರಿಚಯಿಸಿದೆ. ಇದು ಬಳಕೆದಾರರು ಎಟಿಎಂ ಕಾರ್ಡ್ ಇಲ್ಲದೆಯೇ ಹಣವನ್ನು ಹಿಂದಕ್ಕೆ ಪಡೆಯಲು ಸಹಾಯಕವಾಗಿದೆ. ಯುಪಿಐ ಅಪ್ಲಿಕೇಶನ್ಗಳ ಮೂಲಕ ಹಣವನ್ನು ಹಿಂಪಡೆಯಬಹುದಾಗಿದೆ.
ಯುಪಿಐ ಅಪ್ಲಿಕೇಶನ್ಗಳು ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಲಭ್ಯವಿರುವ ಇತರ ಅಪ್ಲಿಕೇಶನ್ಗಳನ್ನು ಒಳಗೊಂಡಿರುತ್ತವೆ. ಈ ಸೌಲಭ್ಯವು ಬಳಕೆದಾರರಿಗೆ ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ಗಳನ್ನು ಕೊಂಡೊಯ್ಯದೆಯೇ ನಗದು ಹಿಂಪಡೆಯಲು ಸಹಾಯ ಮಾಡುತ್ತದೆ.

ಕಾರ್ಡ್ಗಳನ್ನು ಮರೆಯುವುದು, ಕಳೆದುಕೊಳ್ಳುವುದು ಅಥವಾ ಕಾರ್ಡ್ ಹಳೆಯದಾಗುವುದು, ತುಂಡಾದಂತಹ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲು ಈ ವಿಧಾನವಾಗಿದೆ. ನೀವು ಎಟಿಎಂ ಕಾರ್ಡ್ ಇಲ್ಲದೆಯೇ ಯುಪಿಐ ಸೇವೆಯೊಂದಿಗೆ ಹಣವನ್ನು ಪಡೆಯಬೇಕಾದರೆ ಜಿಪೇ, ಫೋನ್ಪೇ, ಅಮೆಜಾನ್ ಪೇ, ಪೇಟಿಎಂನಂತಹ ಯುಪಿಐ ಆಧಾರಿತ ಪಾವತಿ ಅಪ್ಲಿಕೇಶನ್ಗಳನ್ನು ಹೊಂದಿರಬೇಕು, ಇಂಟರ್ನೆಟ್ ಸಂಪರ್ಕವೂ ಕೂಡಾ ಇರಬೇಕು. ಹಾಗಾದರೆ ನೀವು ಯುಪಿಐ ಬಳಸಿ ಹೇಗೆ ಹಣ ವಿತ್ಡ್ರಾ ಮಾಡುವುದು ಎಂದು ತಿಳಿಯಲು ಮುಂದೆ ಓದಿ..
ಯುಪಿಐ ಪಾವತಿ ವಿಧಾನ ಬಳಿಕ ಎಟಿಎಂನಿಂದ ಹಣ ಪಡೆಯುವುದು ಹೇಗೆ?
ಹಂತ 1: ಯಾವುದೇ ಎಟಿಎಂಗೆ ಭೇಟಿ ನೀಡಿ, ನಗದು ವಿತ್ಡ್ರಾ ಆಯ್ಕೆಯನ್ನು ಆರಿಸಿ
ಹಂತ 2: ಎಟಿಎಂ ಯಂತ್ರದ ಪರದೆಯಲ್ಲಿ ಯುಪಿಐ ಎಂಬುವುದನ್ನು ಆಯ್ಕೆ ಮಾಡಿ
ಹಂತ 3: ನಂತರ, ಎಟಿಎಂ ಪರದೆಯ ಮೇಲೆ QR ಕೋಡ್ ಕಾಣಲಿದೆ
ಹಂತ 4: ಮೊಬೈಲ್ನಲ್ಲಿ ಯಾವುದೇ ಯುಪಿಐ ಆಧಾರಿತ ಪಾವತಿ ಆಪ್ ತೆರೆದು QR ಕೋಡ್ ಸ್ಕ್ಯಾನ್ ಮಾಡಿ
ಹಂತ 5: ಕೋಡ್ ಅನ್ನು ಸ್ಕ್ಯಾನ್ ಮಾಡಿದ ನಂತರ, ರೂ 5,000 ಮಿತಿಯೊಳಗೆ ಅಗತ್ಯವಿರುವ ಮೊತ್ತವನ್ನು ಹಿಂಪಡೆಯಬಹುದು
ಹಂತ 6: 'Hit Proceed' ಬಟನ್ ಕ್ಲಿಕ್ ಮಾಡುವ ಮೂಲಕ ಹಣವನ್ನು ಹಿಂಪಡೆಯಲು ಯುಪಿಐ ಪಿನ್ ಅನ್ನು ನಮೂದಿಸಿ ಇಲ್ಲಿಗೆ ಎಲ್ಲ ಪ್ರಕ್ರಿಯೆ ಪೂರ್ಣವಾಗಲಿದೆ
More From GoodReturns

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications