ದಿನ ಕಳೆದಂತೆ ಆಧಾರ್ ಕಾರ್ಡ್ ಎಲ್ಲ ಕಾರ್ಯಗಳಿಗೂ ಪ್ರಮುಖ ದಾಖಲೆಯಾಗಿದೆ. ಒಬ್ಬ ವ್ಯಕ್ತಿಯ ಗುರುತಿಗೆ ಆಧಾರ್ ಕಾರ್ಡ್ ಮೂಲವಾಗಿದೆ. ನಾವು ಹುಟ್ಟಿದಾಗಿನಿಂದ ಸಾಯುವವರೆಗೂ ಆಧಾರ್ ಕಾರ್ಡ್ ಮುಖ್ಯವಾಗಿದೆ. ನಾವು ಆಧಾರ್ ಕಾರ್ಡ್ ಅನ್ನು ಬೇರೆ ಬೇರೆ ಕಾರ್ಯಗಳಿಗೆ ಬಳಕೆ ಮಾಡಬಹುದಾಗಿದೆ.
ಆಧಾರ್ ಕಾರ್ಡ್ ನಿಮ್ಮ ಬಯೋಮೆಟ್ರಿಕ್ ಡೇಟಾದೊಂದಿಗೆ ಲಿಂಕ್ ಆಗುತ್ತದೆ. ಇದರಲ್ಲಿ ನಮ್ಮ ಫಿಂಗರ್ ಪ್ರಿಂಟ್ ಹಾಗೂ ಐರಿಸ್ ಸ್ಕ್ಯಾನ್ ಇರಲಿದೆ. ನಾವು ಆಧಾರ್ ಕಾರ್ಡ್ ಅನ್ನು ಬಳಕೆ ಮಾಡಿಕೊಂಡು ನಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣವಿದೆ ಎಂದು ಕೂಡಾ ನೋಡಲು ಸಾಧ್ಯವಾಗಲಿದೆ. ನಾವು ನಮ್ಮ ಬ್ಯಾಂಕ್ನ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗದೆಯೇ ಆಧಾರ್ ಕಾರ್ಡ್ ಅನ್ನು ಬಳಕೆ ಮಾಡಿಕೊಂಡು ನಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣವಿದೆ ಎಂದು ನೋಡಲು ಸಾಧ್ಯವಾಗಲಿದೆ.
ನಮ್ಮ ಆಧಾರ್ ಕಾರ್ಡ್ ನಮ್ಮ ಬಯೋಮೆಟ್ರಿಲ್ ಡೇಟಾವನ್ನು ಹೊಂದಿರುವ ಕಾರಣದಿಂದಾಗಿ ನಮಗೆ ಅಗತ್ಯ ಕಾರ್ಯಗಳನ್ನು ಆಧಾರ್ ಬಳಸಿ ಮಾಡಲು ಸಾಧ್ಯವಾಗುತ್ತದೆ. ಈ ಲಿಂಕ್ ಆದ ಮಾಹಿತಿಗಳು ನಮ್ಮ ಬ್ಯಾಂಕ್ ಬ್ಯಾಲೆನ್ಸ್ ಅನ್ನು ಆಧಾರ್ ಸಂಖ್ಯೆಯ ಮೂಲಕ ಸುಲಭವಾಗಿ ಚೆಕ್ ಮಾಡಲು ಸಹಾಯ ಮಾಡಲಿದೆ.

ಆಧಾರ್ ಸಂಖ್ಯೆಯನ್ನು ಬಳಸಿಕೊಂಡು ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸುವ ಈ ಹೊಸ ಫೀಚರ್ ಪ್ರಮುಖವಾಗಿ ಹಿರಿಯ ನಾಗರಿಕರಿಗೆ ಮತ್ತು ಸ್ಮಾರ್ಟ್ಫೋನ್ ಹೊಂದಿರದ ಇತರ ಜನರಿಗೆ ಪ್ರಯೋಜನಕಾರಿಯಾಗಿದೆ. ಬ್ಯಾಂಕ್ನಲ್ಲಿ ಸರತಿ ಸಾಲಿನಲ್ಲಿ ನಿಂತು ಹಿರಿಯ ನಾಗರಿಕರು ಬ್ಯಾಂಕ್ ಬ್ಯಾಲೆನ್ಸ್ ಅನ್ನು ಪರಿಶೀಲಿಸುವುದು ತಪ್ಪುತ್ತದೆ. ಇಂಟರ್ನೆಟ್ ಸಂಪರ್ಕವಿಲ್ಲದಿದ್ದರೂ ಸಹ ವ್ಯಕ್ತಿಗಳು ತಮ್ಮ ಫೋನ್ಗಳಲ್ಲಿ ತಮ್ಮ ಬ್ಯಾಂಕ್ ಬ್ಯಾಲೆನ್ಸ್ಗಳನ್ನು ಪರಿಶೀಲಿಸಲು ತಮ್ಮ ಆಧಾರ್ ಕಾರ್ಡ್ಗಳನ್ನು ಬಳಸಬಹುದು. ಅದು ಹೇಗೆ ಎಂದು ಈ ಕೆಳಗೆ ವಿವರಿಸಲಾಗಿದೆ ಮುಂದೆ ಓದಿ....
ಬ್ಯಾಂಕ್ ಬ್ಯಾಲೆನ್ಸ್ ಅನ್ನು ಆಧಾರ್ ಮೂಲಕ ಚೆಕ್ ಮಾಡಿ
ಹಂತ 1: ನಿಮ್ಮ ರಿಜಿಸ್ಟರ್ ಆದ ಮೊಬೈಲ್ ಸಂಖ್ಯೆಯನ್ನು ನೀವು ಹೊಂದಿರುವುದು ಮುಖ್ಯವಾಗಿದೆ
ಹಂತ 2: ನಿಮ್ಮ ರಿಜಿಸ್ಟರ್ ಆದ ಮೊಬೈಲ್ ಸಂಖ್ಯೆಯಿಂದ *99*99*1# ಗೆ ಡಯಲ್ ಮಾಡಿ
ಹಂತ 3: ನಿಮ್ಮ 12 ಡಿಜಿಟ್ಗಳ ಆಧಾರ್ ಸಂಖ್ಯೆಯನ್ನು ನಮೂದಿಸಿ
ಹಂತ 4: ದೃಢೀಕರಣಕ್ಕಾಗಿ ನಿಮ್ಮ 12 ಡಿಜಿಟ್ಗಳ ಆಧಾರ್ ಸಂಖ್ಯೆಯನ್ನು ಮತ್ತೆ ನಮೂದಿಸಿ
ಹಂತ 5: ನಿಮ್ಮ ಮೊಬೈಲ್ನಲ್ಲಿ ಫ್ಲ್ಯಾಶ್ ನೋಟಿಫಿಕೇಶನ್ ಬರಲಿದೆ
ಹಂತ 6: ಈ ನೋಟಿಫಿಕೇಶನ್ನಲ್ಲಿ ಬ್ಯಾಂಕ್ ಬ್ಯಾಲೆನ್ಸ್ ಮಾಹಿತಿ ಇರಲಿದೆ
ಇನ್ನು ಈ ಫ್ಲಾಶ್ ಮೆಸೇಜ್ ಅನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಪ್ರಕಟ ಮಾಡುತ್ತದೆ. ಇನ್ನು ಆಧಾರ್ ಹಾಗೂ ಪ್ಯಾನ್ ಅನ್ನು ಲಿಂಕ್ ಮಾಡುವುದು ಕೂಡಾ ಕಡ್ಡಾಯವಾಗಿದೆ ಎಂದು ಗಮನದಲ್ಲಿರಲಿ.
More From GoodReturns

Bank holiday: ಯುಗಾದಿ ಹಬ್ಬದ ದಿನ ಬ್ಯಾಂಕ್ಗಳು ಬಂದ್-ಗ್ರಾಹಕರು ಈ ಕೆಲಸಗಳನ್ನು ಮುಂಚಿತವಾಗಿ ಮಾಡಿ

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Gold Price Bengaluru: ಯುಗಾದಿಗೂ ಮುನ್ನ ಚಿನ್ನದ ಬೆಲೆ ಇಳಿಕೆ; ನಿನ್ನೆಗಿಂತ 3,300 ರೂ. ಕುಸಿತ

Eid Ul-Fitr 2026: ಯುಎಇ, ಕುವೈತ್, ಕತಾರ್ನಲ್ಲಿ ಮೈದಾನ ಪ್ರಾರ್ಥನೆಗೆ ಬ್ರೇಕ್!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ



Click it and Unblock the Notifications