ಪ್ರತಿ ವರ್ಷ ಆದಾಯ ತೆರಿಗೆಯನ್ನು ಪಾವತಿ ಮಾಡುವುದು ಕಡ್ಡಾಯವಾಗಿದೆ. ನಾವು ಪ್ರತಿ ಬಾರಿ ಆದಾಯ ತೆರಿಗೆಯನ್ನು ಪಾವತಿ ಮಾಡುವಾಗಲೂ ತೆರಿಗೆಯನ್ನು ಇನ್ನಷ್ಟು ಉಳಿತಾಯ ಮಾಡುವುದು ಹೇಗೆ ಎಂದು ನೋಡುತ್ತೇವೆ. ನಾವಿಲ್ಲಿ ಸರ್ಕಾರಿ ಯೋಜನೆಗಳ ಮೂಲಕ ತೆರಿಗೆಯನ್ನು ಉಳಿತಾಯ ಮಾಡಲು ಸಾಧ್ಯವಾಗುತ್ತದೆ.
ಕೆಲವರು ಅಕ್ರಮವಾಗಿ ಆದಾಯ ತೆರಿಗೆ ಉಳಿತಾಯ ಮಾಡುತ್ತಾರೆ. ಆದರೆ ಅದು ಇಂದಲ್ಲ ನಾಳೆ ಬೆಳಕಿಗೆ ಬರುವುದು ಖಂಡಿತ. ಆದರೆ ನಾವು ಆದಾಯ ತೆರಿಗೆಯನ್ನು ಉಳಿತಾಯ ಮಾಡಲು ಸಾಧ್ಯವಾಗುವಂತಹ ದಾರಿಯನ್ನು ಸರ್ಕಾರವೇ ನಮಗೆ ನೀಡಿದೆ. ಈ ಎಲ್ಲ ವಿಧಾನವು ಸಕ್ರಮವಾಗಿದೆ ಹಾಗೂ ಎಲ್ಲ ತೆರಿಗೆ ಪಾವತಿದಾರರಿಗೆ ಲಭ್ಯವಾಗುತ್ತದೆ.
ಆದಾಯ ತೆರಿಗೆ ಕಾಯ್ದೆ 1962 ತೆರಿಗೆದಾರರು ಆದಾಯವನ್ನು ಉಳಿತಾಯ ಮಾಡಲು ಸಾಧ್ಯವಾಗುವಂತಹ ಹಲವಾರು ವಿಧಾನವನ್ನು ನೀಡಿದೆ. ಸರ್ಕಾರದ ಯೋಜನೆಗಳಲ್ಲಿ ಹೂಡಿಕೆ ಮಾಡುವ ಮೂಲಕ ನಾವು ತೆರಿಗೆಯನ್ನು ಉಳಿತಾಯ ಮಾಡಲು ಸಾಧ್ಯವಾಗುತ್ತದೆ. ಆ ಯೋಜನೆಗಳು ಯಾವುದು ಎಂದು ನಾವಿಲ್ಲಿ ವಿವರಿಸಿದ್ದೇವೆ ಮುಂದೆ ಓದಿ....
ಹಿರಿಯ ನಾಗರಿಕರ ಉಳಿತಾಯ ಯೋಜನೆ
ನೀವು ಈಗಾಗಲೇ ನಿವೃತ್ತಿಯನ್ನು ಹೊಂದಿದ್ದರೆ, ಅಥವಾ ನಿವೃತ್ತಿಗಾಗಿ ಅರ್ಜಿಯ್ನನು ಸಲ್ಲಿಸಿದ್ದರೆ, ನೀವು ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ತೆರಿಗೆಯನ್ನು ಉಳಿತಾಯ ಮಾಡಬಹುದು. ಇದು ಸುರಕ್ಷಿತ ಹೂಡಿಕೆ ಯೋಜನೆಯಾಗಿದೆ. ಇದರ ಮೂಲಕ ನಾವು ತೆರಿಗೆ ಕಡಿತವನ್ನು ಪಡೆಯಬಹುದು. ಇದು ಸರ್ಕಾರದ ಯೋಜನೆಯಾಗಿದೆ. ಹೂಡಿಕೆದಾರರು ಹೂಡಿಕೆ ಅವಧಿಯನ್ನು ಮೂರು ವರ್ಷ ಕಾಲ ವಿಸ್ತರಣೆ ಮಾಡುವ ಅವಕಾಶವಿದೆ. ಈ ಖಾತೆಯನ್ನು ತೆರೆದ ಒಂದು ವರ್ಷದ ಬಳಿಕವೇ ನೀವು ಮೆಚ್ಯೂರಿಟಿಗೂ ಮುನ್ನ ವಿತ್ಡ್ರಾ ಮಾಡುವ ಅವಕಾಶವನ್ನು ಪಡೆಯಲು ಸಾಧ್ಯವಾಗುತ್ತದೆ. ಪ್ರಸ್ತುತ ಬಡ್ಡಿದರ ಶೇಕಡ 8.6 ಆಗಿದೆ. ಎರಡು ವರ್ಷಕ್ಕೂ ಮುನ್ನ ಖಾತೆಯನ್ನು ಮುಚ್ಚಿದರೆ ನೀವು ಶೇಕಡ 1.5ರಷ್ಟು ಮೊತ್ತವನ್ನು ದಂಡವನ್ನು ಪಾವತಿ ಮಾಡಬೇಕಾಗುತ್ತದೆ. ವರ್ಷಕ್ಕೆ 10 ಸಾವಿರ ರೂಪಾಯಿಗಿಂತ ಅಧಿಕ ಬಡ್ಡಿದರ ಲಭ್ಯವಾದರೆ, ಬಡ್ಡಿದರದ ಮೇಲೆ ತೆರಿಗೆ ವಿಧಿಸಲಾಗುತ್ತದೆ.
ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್)
ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್) ನಾವು ನಿವೃತ್ತಿಯಾಗುವಾಗ ಮೊತ್ತ ಲಭ್ಯವಾಗುವ ಯೋಜನೆಯಾಗಿದೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80C ಅಡಿಯಲ್ಲಿ ನಾವು ತೆರಿಗೆ ವಿನಾಯಿತಿಯನ್ನು ಪಡೆಯಬಹುದು. ನೀವು ವಾರ್ಷಿಕವಾಗಿ 1.5 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ ಆದಾಯ ತೆರಿಗೆ ಕಾಯ್ದೆಯಡಿ 50 ಸಾವಿರ ರೂಪಾಯಿವರೆಗೆ ವಿನಾಯಿತಿಯನ್ನು ಪಡೆಯಬಹುದು. ನೀವು ಸುಮಾರು 2 ಲಕ್ಷ ರೂಪಾಯಿವರೆಗೆ ತೆರಿಗೆ ವಿನಾಯಿತಿಯನ್ನು ಪಡೆಯಲು ಸಾಧ್ಯವಾಗುತ್ತದೆ.
ಪಬ್ಲಿಕ್ ಪ್ರಾವಿಡೆಂಟ್ ಫಂಡ್ (ಪಿಪಿಎಫ್)
ಪಬ್ಲಿಕ್ ಪ್ರಾವಿಂಡೆಂಟ್ ಫಂಡ್ (ಪಿಪಿಎಫ್) ಮೂಲಕವೂ ನೀವು ತೆರಿಗೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಪ್ರಸ್ತುತ ಪಿಪಿಎಫ್ ಮೇಲೆ ಶೇಕಡ 7.1ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ನೀವು ಈ ಯೋಜನೆಯಲ್ಲಿ ಹೂಡಿಕೆ ಮಾಡಿ ತೆರಿಗೆ ವಿನಾಯಿತಿ ಪಡೆಯಬಹುದು. ನೀವು ಪ್ರತಿ ವರ್ಷ 1.5 ಲಕ್ಷ ರೂಪಾಯಿ ಹೂಡಿಕೆ ಮಾಡಿದರೆ, ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ವಿನಾಯಿತಿಯನ್ನು ಪಡೆಯಬಹುದು. ಸರ್ಕಾರದ ಯೋಜನೆ ಇದಾಗಿರುವ ಕಾರಣ ನಮಗೆ ಸುರಕ್ಷತೆ ಇರುತ್ತದೆ.
ಸುಕನ್ಯ ಸಮೃದ್ಧಿ ಯೋಜನೆ (ಎಸ್ಎಸ್ವೈ)
ಸುಕನ್ಯ ಸಮೃದ್ಧಿ ಯೋಜನೆಯಲ್ಲಿ (ಎಸ್ಎಸ್ವೈ) ಹೂಡಿಕೆ ಮಾಡುವುದರಿಂದ ನೀವು ತೆರಿಗೆಯನ್ನು ಉಳಿತಾಯ ಮಾಡಲು ಸಾಧ್ಯವಾಗುತ್ತದೆ. ಈ ಯೋಜನೆಯನ್ನು ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳಿಗಾಗಿ ಆರಂಭ ಮಾಡಿದೆ. ಈ ಹೂಡಿಕೆಯಲ್ಲಿ ನಾವು ಶೇಕಡ 7.6ರಷ್ಟು ಬಡ್ಡಿದರವನ್ನು ಪಡೆಯಬಹುದು. ನಿಮಗೆ ಕೇವಲ ಇಬ್ಬರು ಹೆಣ್ಣು ಮಕ್ಕಳು ಇದ್ದರೆ ಮಾತ್ರ ಆದಾಯ ತೆರಿಗೆಯ 80C ಕಾಯ್ದೆಯಡಿಯಲ್ಲಿ ತೆರಿಗೆ ವಿನಾಯಿತಿಯನ್ನು ಪಡೆಯಬಹುದು. ಆದರೆ ಸರ್ಕಾರ ಅದನ್ನು ಪರಿಷ್ಕರಣೆ ಮಾಡಿದೆ. ತಂದೆ ತಾಯಿಗೆ ಮೊದಲ ಮಗು ಹೆಣ್ಣಾಗಿದ್ದು, ಎರಡನೇ ಹೆರಿಗೆಯಲ್ಲಿ ಅವಳಿ ಜವಳಿ ಹೆಣ್ಣು ಮಕ್ಕಳು ಜನಿಸಿದರೆ ಮೂರು ಮಕ್ಕಳು ಕೂಡಾ ಈ ಯೋಜನೆಯ ಫಲಾನುಭವಿಗಳು ಆಗುತ್ತಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications