ಸರ್ಕಾರವು ಕಾರ್ಮಿಕರು ಹಾಗೂ ದುಡಿಯುವ ವರ್ಗಕ್ಕೆ ಹಲವಾರು ಯೋಜನೆಗಳನ್ನು ಪರಿಚಯಿಸಿದೆ. ನೀವು ಪ್ರತಿದಿನ ಬರೀ 2 ರೂಪಾಯಿ ಹೂಡಿಕೆ ಮಾಡುವ ಮೂಲಕ ವಾರ್ಷಿಕವಾಗಿ 36 ಸಾವಿರ ರೂಪಾಯಿ ಪಿಂಚಣಿಯನ್ನು ಪಡೆಯುವ ಯೋಜನೆಯನ್ನು ಸರ್ಕಾರ ಹೊಂದಿದೆ. ಆ ಯೋಜನೆಯ ಬಗ್ಗೆ ನಾವಿಲ್ಲಿ ವಿವರಣೆ ನೀಡಿದ್ದೇವೆ.
ಕೇಂದ್ರ ಸರ್ಕಾರವು ಪ್ರಸ್ತುತ ದುಡಿಯುವ ವರ್ಗಕ್ಕಾಗಿ ಹಲವಾರು ಯೋಜನೆಗಳನ್ನು ಹೊಂದಿದೆ. ಕಾರ್ಮಿಕರ ಆರ್ಥಿಕ ಸ್ಥಿತಿ ಉತ್ತಮಗೊಳಿಸುವುದು ಈ ಯೋಜನೆಯ ಪ್ರಮುಖ ಉದ್ಧೇಶವಾಗಿದೆ. ಈ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆ ಕೂಡಾ ಒಂದಾಗಿದೆ.
ಈ ಯೋಜನೆಯಡಿಯಲ್ಲಿ ಕಾರ್ಮಿಕರು ವಾರ್ಷಿಕವಾಗಿ 36 ಸಾವಿರ ರೂಪಾಯಿ ಪಿಂಚಣಿಯನ್ನು ಪಡೆಯುವ ಅವಕಾಶವಿದೆ. ಅದು ಕೂಡಾ ಪ್ರತಿ ದಿನ ಬರೀ ಎರಡು ರೂಪಾಯಿ ಹೂಡಿಕೆ ಮಾಡುವ ಮೂಲಕ! ಈ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ...
ದಾಖಲೆಗಳು ಏನು ಬೇಕು?
ಈ ಯೋಜನೆಯ ಫಲಾನುಭವಿಗಳು ನೀವಾಗಬೇಕಾದರೆ ನಿಮ್ಮಲ್ಲಿ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಇರಬೇಕಾಗುತ್ತದೆ. ಇವೆರಡು ಇದ್ದರೆ ಮಾತ್ರ ನೀವು ಈ ಯೋಜನೆಯ ರಿಜಿಸ್ಟ್ರೇಷನ್ ಮಾಡಲು ಸಾಧ್ಯವಾಗುತ್ತದೆ. ನೀವು ಮಾಸಿಕವಾಗಿ ಕನಿಷ್ಠ 55 ರೂಪಾಯಿ ಹೂಡಿಕೆ ಮಾಡಲೇಬೇಕು. ನಿಮಗೆ 60 ವರ್ಷವಾದಾಗ ಪಿಂಚಣಿ ಆರಂಭವಾಗುತ್ತದೆ.ನೀವು ಪ್ರತಿ ದಿನ 2 ರೂಪಾಯಿಯಂತೆ ಮಾಸಿಕ 60 ರೂಪಾಯಿ ಹೂಡಿಕೆ ಮಾಡಿದರೆ ನಿಮಗೆ ಮಾಸಿಕ 3000 ರೂಪಾಯಿಯಂತೆ ವಾರ್ಷಿಕವಾಗಿ 36 ಸಾವಿರ ರೂಪಾಯಿ ಪಿಂಚಣಿ ಲಭ್ಯವಾಗುತ್ತದೆ.
ಯಾರೆಲ್ಲ ಹೂಡಿಕೆ ಮಾಡಬಹುದು?
ಈ ಯೋಜನೆಯು ಬೀದಿಬದಿ ವ್ಯಾಪಾರಸ್ಥರು, ಆಟೋ ಡ್ರೈವರ್ಗಳು, ಕಟ್ಟಡ ಕಾರ್ಮಿಕರು,ಇತರ ಕಾರ್ಮಿಕರಿಗಾಗಿ ಸರ್ಕಾರವು ಈ ಯೋಜನೆಯನ್ನು ಆರಂಭ ಮಾಡಿದೆ. ಅಸಂಘಟಿತ ವರ್ಗದ ಕಾರ್ಮಿಕರು ನಿವೃತ್ತಿ ಬಳಿಕ ಆರ್ಥಿಕ ಸುರಕ್ಷತೆ ಹೊಂದಿರಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆಯನ್ನು ಆರಂಭ ಮಾಡಿದೆ. ಈ ಯೋಜನೆಯು 18 ವರ್ಷದಿಂದ 40 ವರ್ಷದವರಿಗಾಗಿದೆ. ಈ ವಯೋಮಿತಿಯಲ್ಲಿ ಮಾತ್ರ ಹೂಡಿಕೆ ಮಾಡಬಹುದು.
2 ರೂ ಹೂಡಿಕೆ ಮಾಡಿ 36 ಸಾವಿರ ರೂ ಪಡೆಯುವುದು ಹೇಗೆ?
ನೀವು ಈ ಯೋಜನೆಗೆ 18 ವರ್ಷದಲ್ಲಿ ಹೂಡಿಕೆ ಆರಂಭಿಸಿದರೆ, ಪ್ರತಿ ತಿಂಗಳು 55 ರೂಪಾಯಿ ಹೂಡಿಕೆ ಮಾಡಬೇಕಾಗುತ್ತದೆ. ವಾರ್ಷಿಕವಾಗಿ 36 ಸಾವಿರ ಪಿಂಚಣಿ ಪಡೆಯಬಹುದು. ನಿಮಗೆ 40 ವರ್ಷವಾಗಿದ್ದರೆ ಮಾಸಿಕವಾಗಿ 200 ರೂಪಾಯಿ ಅಥವಾ ಪ್ರತಿದಿನ 6.50 ರೂಪಾಯಿ ಹೂಡಿಕೆ ಮಾಡಿ 36 ಸಾವಿರ ರೂಪಾಯಿ ಪಿಂಚಣಿ ಪಡೆಯಬಹುದು. ಆದರೆ ಈ ಯೋಜನೆಯಲ್ಲಿ ಹೂಡಿಕೆ ಮಾಡಬೇಕಾದರೆ ನೀವು ಮಾಸಿಕ 15 ಸಾವಿರ ಆದಾಯವನ್ನು ಹೊಂದಿರಬೇಕಾಗುತ್ತದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Gold Price Today: ಭಾರತದಲ್ಲಿ ಏರಿಕೆ ಕಂಡ ಚಿನ್ನದ ಬೆಲೆ! ದಿಢೀರ್ 12,000 ರೂ. ಹೆಚ್ಚಳ



Click it and Unblock the Notifications