ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಆಂಡ್ ಟೂರಿಸಂ ಕಾರ್ಪೋರೇಷನ್ (ಐಆರ್ಸಿಟಿಸಿ) ಹಲವಾರು ಪ್ರವಾಸ ಪ್ಯಾಕೇಜ್ಗಳನ್ನು ಪರಿಚಯಿಸುತ್ತಾ ಬರುತ್ತಿದೆ. ಪ್ರಮುಖವಾಗಿ ನಾವು ಯಾವುದೇ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಲು ಬಯಸಿದರೆ, ಅದಕ್ಕೆ ಐಆರ್ಸಿಟಿಸಿಯ ಪ್ರವಾಸ ಪ್ಯಾಕೇಜ್ ಅತೀ ಉತ್ತಮವಾಗಿದೆ. ನೀವು ಬೆಂಗಳೂರಿಗರಾಗಿದ್ದರೆ, ಇಂತಹುದ್ದೆ ಪ್ರವಾಸ ಪ್ಯಾಕೇಜ್ ಬಗ್ಗೆ ವಿವರ ನಾವಿಲ್ಲಿ ನೀಡಿದ್ದೇವೆ.
ಐಆರ್ಸಿಟಿಸಿಯ ಬೆಂಗಳೂರಿನಿಂದ ಹೊರಡಬಹುದಾದ ಪ್ರವಾಸ ಪ್ಯಾಕೇಜ್ಗಳಲ್ಲಿ ಶಿರಡಿ ಪ್ರವಾಸ ಪ್ಯಾಕೇಜ್ ಕೂಡಾ ಒಂದಾಗಿದೆ. ನೀವು ಶಿರಡಿಗೆ ಹೋಗಲು ಬಯಸುವುದಾದರೆ ಈ ಪ್ಯಾಕೇಜ್ ಖರೀದಿ ಮಾಡಬಹುದು, ಮುಂದಿನ ಪ್ರವಾಸ ನೆವಂಬರ್ 11 ರಂದು ಇರಲಿದೆ ಎಂದು ವೆಬ್ಸೈಟ್ನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಇದು ದೈನಂದಿನ ಪ್ಯಾಕೇಜ್ ಎಂದು ಕೂಡಾ ಉಲ್ಲೇಖಿಸಲಾಗಿದೆ. ಪ್ಯಾಕೇಜ್ ವಿವರ ತಿಳಿಯಲು ಮುಂದೆ ಓದಿ.....

ಪ್ಯಾಕೇಜ್ ಬಗ್ಗೆ ವಿವರ ತಿಳಿಯಿರಿ
ಪ್ಯಾಕೇಜ್ ಪೂರ್ಣ ಹೆಸರು: ಶಿರಡಿ ರೈಲ್ ಟೂರ್ ಪ್ಯಾಕೇಜ್ ಎಕ್ಸ್ ಬೆಂಗಳೂರು (SBR001)
ಪ್ರವಾಸ ಅವಧಿ: ಮೂರು ರಾತ್ರಿಗಳು, ನಾಲ್ಕು ದಿನಗಳ ಪ್ರವಾಸ ಪ್ಯಾಕೇಜ್
ಪ್ರವಾಸ: ರೈಲಿನಲ್ಲಿ ಪ್ರವಾಸ, ಸ್ಥಳೀಯವಾಗಿ ಕ್ಯಾಬ್ನಲ್ಲಿ ಪ್ರವಾಸ
ಪ್ಯಾಕೇಜ್ ದರ ಎಷ್ಟಿದೆ ನೋಡಿ
ಕನ್ಫರ್ಟ್ ಕ್ಯಾಟಗರಿಯಲ್ಲಿ ವಯಸ್ಕರಿಗೆ ಒಬ್ಬರಿಗೆ ಪ್ಯಾಕೇಜ್ ದರವು 10350 ರೂಪಾಯಿ ಆಗಿದೆ. ವಯಸ್ಕರು ಇಬ್ಬರಿದ್ದರೆ ಪ್ರತಿ ವ್ಯಕ್ತಿಯ ಪ್ಯಾಕೇಜ್ ದರವು 8090 ರೂಪಾಯಿ ಆಗಿದೆ. ವಯಸ್ಕರು ಮೂವರು ಇದ್ದರೆ, ಪ್ರತಿ ವ್ಯಕ್ತಿಯ ಪ್ಯಾಕೇಜ್ ದರ 7690 ರೂಪಾಯಿ ಆಗಿದೆ. 5-11 ವರ್ಷದ ಮಗುವಿಗೆ ಬೆಡ್ ಸಹಿತವಾಗಿ ಪ್ಯಾಕೇಜ್ ದರ 7070 ರೂಪಾಯಿ ಆಗಿದೆ. ಬೆಡ್ ಇಲ್ಲದೆ 5-11 ವರ್ಷದ ಮಗುವಿಗೆ ಪ್ಯಾಕೇಜ್ ದರ 5950 ರೂಪಾಯಿ ಆಗಿದೆ.
ಸ್ಟಾಡರ್ಡ್ ಕ್ಯಾಟಗರಿಯಲ್ಲಿ ವಯಸ್ಕರಿಗೆ ಒಬ್ಬರಿಗೆ ಪ್ಯಾಕೇಜ್ ದರವು 7890 ರೂಪಾಯಿ ಆಗಿದೆ. ವಯಸ್ಕರು ಇಬ್ಬರಿದ್ದರೆ ಪ್ರತಿ ವ್ಯಕ್ತಿಯ ಪ್ಯಾಕೇಜ್ ದರವು 5630 ರೂಪಾಯಿ ಆಗಿದೆ. ವಯಸ್ಕರು ಮೂವರು ಇದ್ದರೆ, ಪ್ರತಿ ವ್ಯಕ್ತಿಯ ಪ್ಯಾಕೇಜ್ ದರ 5230 ರೂಪಾಯಿ ಆಗಿದೆ. 5-11 ವರ್ಷದ ಮಗುವಿಗೆ ಬೆಡ್ ಸಹಿತವಾಗಿ ಪ್ಯಾಕೇಜ್ ದರ 4610 ರೂಪಾಯಿ ಆಗಿದೆ. ಬೆಡ್ ಇಲ್ಲದೆ 5-11 ವರ್ಷದ ಮಗುವಿಗೆ ಪ್ಯಾಕೇಜ್ ದರ 3500 ರೂಪಾಯಿ ಆಗಿದೆ.
ಯಾವ ದಿನ, ಎಲ್ಲಿ ಪ್ರವಾಸ?
ದಿನ 01: ಕೆಎಸ್ಆರ್ ಬೆಂಗಳೂರು ರೈಲು ನಿಲ್ದಾಣದಿಂದ ರೈಲು ಸಂಖ್ಯೆ 12627 ಮೂಲಕ 19:20 ಗಂಟೆಗೆ ಪ್ರಯಾಣ ಆರಂಭವಾಗುತ್ತದೆ. ರಾತ್ರಿ ಪ್ರಯಾಣ ಮಾಡಲಾಗುತ್ತದೆ.
ದಿನ 02: ಕೊಪ್ರಗಾಂವ್ ನಿಲ್ದಾಣಕ್ಕೆ 1:47 ಕ್ಕೆ ತಲುಪುತ್ತೀರಿ. ಶಿರಡಿ ಹೋಟೆಲ್ಗೆ ಚೆಕಿನ್ ಆಗಿ. ಶ್ರೀ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ. ಶಿರಡಿಯಲ್ಲಿ ರಾತ್ರಿ ಉಳಿಯಿರಿ.
ದಿನ 03: ಬೆಳಗಿನ ಉಪಹಾರದ ನಂತರ ಚೆಕ್ ಔಟ್ ಆಗಿ. ಶನಿಸಿಂಗನಾಪುರ ದೇವಸ್ಥಾನಕ್ಕೆ ಹೋಗಿ. ಕೋಪರ್ಗೊನ್ ರೈಲು ನಿಲ್ದಾಣಕ್ಕೆ 3.30 ಗಂಟೆಗೆ ತಲುಪಿ.
ದಿನ 04: 12.30 ಗಂಟೆಗೆ ಕೆಎಸ್ಆರ್ ಬೆಂಗಳೂರು ಸಿಟಿ ರೈಲು ನಿಲ್ದಾಣವನ್ನು ತಲುಪಿ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications