ಪ್ರತಿ ವರ್ಷದಂತೆ ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. 2023-24 ಹಣಕಾಸು ವರ್ಷದ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ಮಂಡಿಸಿದ್ದಾರೆ. ಆದರೆ ಈಗ 2023-24ನೇ ಸಾಲಿನ ಕರ್ನಾಟಕ ಬಜೆಟ್ಗಾಗಿ ಜನರು ಕಾತುರದಿಂದ ಕಾಯುತ್ತಿದ್ದಾರೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 17ರಂದು ಕರ್ನಾಟಕ ಬಜೆಟ್ 2023-24 ಮಂಡನೆ ಮಾಡಲಿದ್ದಾರೆ. 2024ರಲ್ಲಿ ಚುನಾವಣೆ ನಡೆಯಲಿದೆ, ಇದರಿಂದಾಗಿ ಬಜೆಟ್ನಲ್ಲಿ ಹಲವಾರು ಕೊಡುಗೆಯನ್ನು ಸರ್ಕಾರ ನೀಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
ಹಣಕಾಸು ಖಾತೆಯನ್ನು ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 17ರ ಶುಕ್ರವಾರ ಬೆಳಗ್ಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 9.45ಕ್ಕೆ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ. ಇನ್ನು ಬಜೆಟ್ ಮಂಡನೆಗೂ ಮುನ್ನ ಸಾಮಾನ್ಯವಾಗಿ ನಡೆಯುವ ಸಭೆಗಳು ನಡೆಯಲಿದೆ.

ಬಜೆಟ್ ಮಂಡನೆಗೂ ಮುನ್ನ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪ್ರದಾಯದಂತೆ ಸಚಿವ ಸಂಪುಟದ ಒಪ್ಪಿಗೆಯನ್ನು ಪಡೆಯಲಿದ್ದಾರೆ. ಅದಾದ ಬಳಿಕ ವಿಧಾನಸಭೆ ಕಲಾಪ ಆರಂಭವಾಗಲಿದೆ, 10.15ಕ್ಕೆ ಕೇಂದ್ರ ಹಣಕಾಸು ಸಚಿವೆ ಬಜೆಟ್ ಮಂಡನೆ ಆರಂಭ ಮಾಡಲಿದ್ದಾರೆ.
ವಿಧಾನಸಭೆ ಚುನಾವಣೆಗೂ ಮುನ್ನ ಬರುವ ಬಜೆಟ್
2024ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ, ಏಪ್ರಿಲ್ ಅಂತ್ಯ ಅಥವ ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಬರುವ ಬಜೆಟ್ ಇದಾಗಿದೆ. ಕರ್ನಾಟಕದಲ್ಲಿ 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಸರ್ಕಾರದ ಈ ಆಡಳಿತಾವಧಿಯ ಕೊನೆಯ ಬಜೆಟ್ ಇದಾಗಿದೆ. ಆದ್ದರಿಂದ ಜನರಿಗೆ ಬಜೆಟ್ ನಿರೀಕ್ಷೆ ಅಧಿಕವಾಗಿಯೇ ಇದೆ.
ಫೆಬ್ರವರಿ 10ರಂದು ಬಜೆಟ್ ಅಧಿವೇಶನ ಆರಂಭವಾಗಿದ್ದು, ಅಧಿವೇಶನವು ಫೆಬ್ರವರಿ 23ರ ತನಕ ನಡೆಯಲಿದೆ. ಬಜೆಟ್ ಮೇಲೆ ನಡೆಯುವ ಎಲ್ಲ ಚರ್ಚೆಗೆ ಮುಖ್ಯಮಂತ್ರಿಗಳು ಅಧಿವೇಶನದ ಕೊನೆಯಲ್ಲಿ ಉತ್ತರ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಮಾರು 1 ಗಂಟೆಗಳ ಕಾಲ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 20 ರಿಂದ 22ರ ತನಕ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.
2022-23ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷದ 66 ಸಾವಿರ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯ ಅಂದರೆ 2023-24ನೇ ಸಾಲಿನ ಕರ್ನಾಟಕ ಬಜೆಟ್ 3 ಲಕ್ಷ ಕೋಟಿ ರೂಪಾಯಿಗಳ ಗಡಿಯನ್ನು ತಲುಪುವ ನಿರೀಕ್ಷೆಯಿದೆ.
More From GoodReturns

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?



Click it and Unblock the Notifications