Free Laptop: ಉಚಿತ ಲ್ಯಾಪ್‌ಟಾಪ್ ಬೇಕೇ?, ಹೀಗೆ ಅರ್ಜಿ ಸಲ್ಲಿಸಿ

ಪ್ರಸ್ತುತ ಎಲ್ಲವೂ ದುಬಾರಿಯಾಗಿದೆ. ಹಣದುಬ್ಬರದ ನಡುವೆ ನಾವು ಯಾವುದೇ ವಸ್ತುವನ್ನು ಖರೀದಿ ಮಾಡಬೇಕಾದರೂ ಹಣಕಾಸು ದೊಡ್ಡ ಸಮಸ್ಯೆಯಾಗಿದೆ. ಹಾಗಿರುವಾಗ ನಿಮಗೆ ಉಚಿತವಾಗಿ ಲ್ಯಾಪ್‌ಟಾಪ್ ಲಭ್ಯವಾಗುತ್ತದೆ ಎಂದಾದರೆ ನೀವು ಬಿಡುತ್ತೀರಾ?. ನೀವು ಈಗಾಗಲೇ 12 ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಉತ್ತೀರ್ಣರಾಗಿದ್ದರೆ, ಕರ್ನಾಟಕ ಉಚಿತ ಲ್ಯಾಪ್‌ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇದು ನಿಮ್ಮ ಅವಕಾಶ.

ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ dce.karnataka.gov.in ಗೆ ಭೇಟಿ ನೀಡಬಹುದು. 12 ನೇ ತರಗತಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ಒದಗಿಸಲು ಕರ್ನಾಟಕ ಸರ್ಕಾರ ಉಚಿತ ಲ್ಯಾಪ್‌ಟಾಪ್ ಯೋಜನೆಯನ್ನು ಪ್ರಾರಂಭಿಸಿದೆ. ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ, ಇತರೆ ಮಾಹಿತಿ ಇಲ್ಲಿದೆ ಮುಂದೆ ಓದಿ....

 Free Laptop: ಉಚಿತ ಲ್ಯಾಪ್‌ಟಾಪ್ ಬೇಕೇ?, ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಉಚಿತ ಲ್ಯಾಪ್‌ಟಾಪ್ ಯೋಜನೆಯ ಉದ್ದೇಶ

ಉಚಿತ ಲ್ಯಾಪ್‌ಟಾಪ್ ವಿತರಣಾ ಯೋಜನೆಯ ಪ್ರಾಥಮಿಕ ಉದ್ದೇಶವು ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವುದು ಆಗಿದೆ. ಆರ್ಥಿಕ ಬಿಕ್ಕಟ್ಟಿನಿಂದ ತಾವಾಗಿಯೇ ಲ್ಯಾಪ್‌ಟಾಪ್‌ಗಳನ್ನು ಖರೀದಿಸಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣವನ್ನು ನೀಡುವುದು ಕರ್ನಾಟಕ ಸರ್ಕಾರದ ಮತ್ತೊಂದು ಉದ್ದೇಶವಾಗಿದೆ. 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಈ ಮೂಲಕ ಮಾಡಲಾಗುತ್ತದೆ.

ಕರ್ನಾಟಕ ಉಚಿತ ಲ್ಯಾಪ್‌ಟಾಪ್ ಯೋಜನೆಯ ಫೀಚರ್

ಯೋಜನೆಯಡಿಯಲ್ಲಿ, ಕರ್ನಾಟಕ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಅನೇಕ ಪ್ರೋತ್ಸಾಹಗಳನ್ನು ನೀಡಲಾಗುವುದು. ವಿಶೇಷವಾಗಿ, ಪ್ರತಿಷ್ಠಿತ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಸಂಸ್ಥೆಗಳಲ್ಲಿ ವೃತ್ತಿಪರ ಕೋರ್ಸ್‌ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತದೆ. ಎಸ್‌ಟಿ ಮತ್ತು ಎಸ್‌ಸಿ ವರ್ಗಗಳಿಗೆ ಸೇರಿದ 1.50 ಲಕ್ಷಕ್ಕೂ ಹೆಚ್ಚು ಕರ್ನಾಟಕದ ವಿದ್ಯಾರ್ಥಿಗಳು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ವಿದ್ಯಾರ್ಥಿಗಳಿಗೆ ಸುಮಾರು 32,000 ರೂಪಾಯಿಯಿಂದ 35,000 ರೂಪಾಯಿ ಮೌಲ್ಯದ ಲ್ಯಾಪ್‌ಟಾಪ್ ನೀಡಲಾಗುವುದು.

ಯಾವೆಲ್ಲ ಕೋರ್ಸ್‌ಗಳು ಅನ್ವಯ?

ವೈದ್ಯಕೀಯ ಅಧ್ಯಯನಗಳು
ಇಂಜಿನಿಯರಿಂಗ್
ಪಾಲಿಟೆಕ್ನಿಕ್ ಕಾಲೇಜುಗಳು
ಸ್ನಾತಕೋತ್ತರ ಕೋರ್ಸ್‌ಗಳು
ಪ್ರಥಮ ದರ್ಜೆ ಕಾಲೇಜುಗಳಲ್ಲಿ ಓದುತ್ತಿರುವವರು

ಕರ್ನಾಟಕ ಉಚಿತ ಲ್ಯಾಪ್‌ಟಾಪ್ ಯೋಜನೆ ಅರ್ಹತಾ ಮಾನದಂಡ

ಮೊದಲಿಗೆ, ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು ಯಾವುದೇ ವರ್ಗ ಅಥವಾ ಯಾವುದೇ ಹಿಂದುಳಿದ ವರ್ಗದವರಾಗಿರಬಹುದು. ವಿದ್ಯಾರ್ಥಿಯು 12 ನೇ ತರಗತಿ ಅಥವಾ ದ್ವಿತೀಯ ಪಿಯುಸಿಯನ್ನು ಉತ್ತಮ ಶ್ರೇಣಿಗಳೊಂದಿಗೆ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ, ಬೇಕಾದ ದಾಖಲೆಗಳು ಯಾವುದು?

ನೀವು ಅರ್ಜಿ ಸಲ್ಲಿಸಬೇಕಾದರೆ, ಕರ್ನಾಟಕದ ನಿವಾಸ ಪ್ರಮಾಣಪತ್ರ, ಗುರುತಿನ ಚೀಟಿಗಾಗಿ ಆಧಾರ್ ಕಾರ್ಡ್, ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿದ ಬ್ಯಾಂಕ್ ಖಾತೆ ಮಾಹಿತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣಪತ್ರ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಶೈಕ್ಷಣಿಕ ಪ್ರಮಾಣಪತ್ರ ಇದಕ್ಕೆ ಬೇಕಾಗಿರುವ ದಾಖಲೆಗಳಾಗಿದೆ.

ಕಾರ್ಮಿಕ ಅಧಿಕಾರಿ -1, ಉಪ ವಿಭಾಗ ಬೆಂಗಳೂರು ಇವರ ಕಾರ್ಯವ್ಯಾಪ್ತಿಯಲ್ಲಿ ನೋಂದಣಿ ಅಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಅರ್ಜಿ ನಮೂನೆಯನ್ನು ಆಯಾ ವೃತ್ತ ಕಛೇರಿ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಪಡೆದು ಅಗತ್ಯ ದಾಖಲಾತಿ ಜೊತೆಗೆ, ಅರ್ಜಿ ಸ್ವೀಕರಿಸಿದ ಕಚೇರಿಗೆ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 26 ಕೊನೆಯ ದಿನ ಎಂದು ತಿಳಿಸಲಾಗಿದೆ.

ಈ ಬಗ್ಗೆ ಅಧಿಕ ಮಾಹಿತಿಗೆ ಕಾರ್ಮಿಕ ಅಧಿಕಾರಿ ಕಚೇರಿ, ಉಪ ವಿಭಾಗ-1, ಬೆಂಗಳೂರು. ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಕಟ್ಟಡ, ಮೊದಲ ಮಹಡಿ, ಮಂಜುನಾಥ ನಗರ ಬಾಗಲಗುಂಟೆ ಬೆಂಗಳೂರು -73 ಈ ವಿಳಾಸವನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 9845587605, 8105084941 ಮೂಲಕ ಸಂಪರ್ಕ ಮಾಡಿ ಅರ್ಜಿ ಸಲ್ಲಿಕೆಯ ಕುರಿತು ಮಾಹಿತಿ ಪಡೆಯಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+