ಕೆಜಿಎಫ್ ಸ್ಟಾರ್, ನಟ ಯಶ್ ಜನ್ಮದಿನ ಸಮಯದಲ್ಲಿ ಎತ್ತರದಲ್ಲಿ ಬ್ಯಾನರ್ ಕಟ್ಟಲು ಹೋದಾಗ ವಿದ್ಯುತ್ ತಂತಿ ತಾಗಿ ಮೃತಪಟ್ಟ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಯುವಕರ ಕುಟುಂಬಕ್ಕೆ ನಟನ ಕಡೆಯಿಂದ ಪರಿಹಾರದ ಚೆಕ್ ಅನ್ನು ನೀಡಲಾಗಿದೆ.
ಯಶೋಮಾರ್ಗ ಫೌಂಡೇಶನ್ ಕಡೆಯಿಂದ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ಅನ್ನು ನಟ ಯಶ್ ಸ್ನೇಹಿತರು ಗ್ರಾಮಕ್ಕೆ ಭೇಟಿ ನೀಡಿ ಮೃತಪಟ್ಟ ಯುವಕರ ಕುಟುಂಬಸ್ಥರಿಗೆ ತಲುಪಿಸಿದ್ದಾರೆ. ಯಶ್ ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಅಂತ ದೃಶ್ಯ ಈಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಇನ್ನು ನಟ ಯಶ್ ಸ್ನೇಹಿತರು ಮೃತ ಅಭಿಮಾನಿಗಳ ಕುಟುಂಬಕ್ಕೆ ಚೆಕ್ ವಿತರಿಸಿ ಬಳಿಕ ನ್ಯೂಸ್ 18 ಜೊತೆ ಮಾತನಾಡಿದ್ದಾರೆ. "ಅಭಿಮಾನಿಗಳು ಮೃತಪಡಬಾರದಿತ್ತು. ಆದರೆ ಈಗ ಎಲ್ಲ ಆಗಿ ಹೋಗಿದೆ. ಯಶ್ ಅವರು ಹೇಳಿದ್ದಂತೆ ನಾವು ಮೃತ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ. ಮೃತರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡಿದ್ದೇವೆ," ಎಂದು ತಿಳಿಸಿದರು.
"ಗಾಯಾಳುಗಳು ಯಾರೆಲ್ಲ ಎಂಬ ಬಗ್ಗೆ ಮಾಹಿತಿಯನ್ನು ನಾವು ಪಡೆದುಕೊಂಡಿದ್ದೇವೆ. ಇನ್ನು ಎರಡು ಮೂರು ದಿನಗಳಲ್ಲಿ ಅವರಿಗೂ ಕೂಡಾ ಪರಿಹಾರವನ್ನು ನೀಡಲಾಗುತ್ತದೆ. ಈಗ ಮೃತ ಯುವಕರ ಮನೆಗೆ ಹೋಗಿ ಹಣ ತಲುಪಿಸಿದ್ದೇವೆ. ಗಾಯಾಳುಗಳು ಈಗ ಮಾತನಾಡುವ ಸ್ಥಿತಿಯಲ್ಲಿಲ್ಲ. ನೋವಿನಿಂದ ಹೊರ ಬಂದಿಲ್ಲ," ಎಂದು ಹೇಳಿದರು.
ಯಶ್ ಅವರ ಸ್ನೇಹಿತರಾದ ಚೇತನ್ ಹಾಗೂ ರಾಕೇಶ್ ದುರಂತ ಸಂಭವಿಸಿದ್ದ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮನೆ ಮಕ್ಕಳನ್ನು ಕಳೆದುಕೊಂಡ ಮೂರೂ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಹಾಗೆಯೇ ಪರಿಹಾರವನ್ನು ಕೂಡಾ ನೀಡಿದ್ದಾರೆ.
ಗದಗ ಜಿಲ್ಲೆಯ ಸೊರಣಗಿ ಗ್ರಾಮದ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ದೂರಿಯಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಜನವರಿ 7 ರಂದು ತಯಾರಿ ಮಾಡುತ್ತಿದ್ದರು. ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿದ್ದು ಈ ಅನಾಹುತ ನಡೆದಿದೆ. ಮುರಳಿ, ನವೀನ್ ಮತ್ತು ಹನುಮಂತ ಮೃತಪಟ್ಟ ಯುವಕರು.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!



Click it and Unblock the Notifications