ಹೂಡಿಕೆ ವಿಚಾರಕ್ಕೆ ಬಂದಾಗ ನಾವು ಎಂದಿಗೂ ಕೂಡಾ ಎಲ್ಲಿ ಹೂಡಿಕೆ ಮಾಡಿದರೆ ಉತ್ತಮ ಎಂದು ನೋಡುತ್ತೇವೆ. ನಾವು ಮಾಡಿದ ಹೂಡಿಕೆಯಿಂದ ನಮಗೆ ಎಷ್ಟು ಅಧಿಕ ರಿಟರ್ನ್ ಪಡೆಯಲು ಸಾಧ್ಯ, ಎಲ್ಲಿ ನಾವು ಹೂಡಿಕೆ ಮಾಡಿದರೆ ಅಧಿಕ ರಿಟರ್ನ್ ಪಡೆಯಬಹುದು, ಎಲ್ಲಿ ಹೂಡಿಕೆ ಮಾಡಿದರೆ ನಮ್ಮ ಹೂಡಿಕೆ ಸುರಕ್ಷಿತವಾಗಿರುತ್ತದೆ ಎಂದು ನಾವು ನೋಡುತ್ತೇವೆ.
ಹೀಗೆ ಅಧಿಕ ಹೂಡಿಕೆಯ ವಿಚಾರಕ್ಕ ಬಂದಾಗ ನಮ್ಮ ಮುಂದೆ ಬರುವ ಆಯ್ಕೆ ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಆಗಿದೆ. ಎಲ್ಐಸಿ ಭಾರತದ ಅತೀ ಹಳೆಯ ಮತ್ತು ಅತೀ ದೊಡ್ಡ ವಿಮಾ ಸಂಸ್ಥೆಯಾಗಿದೆ. ಇಲ್ಲಿ ನಾವು ಮಾಡಿದ ಹೂಡಿಕೆಯಿಂದ ಅಧಿಕ ರಿಟರ್ನ್ ಅನ್ನು ಕೂಡಾ ಪಡೆಯಬಹುದು ಮತ್ತು ನಮ್ಮ ಹೂಡಿಕೆ ಸುರಕ್ಷಿತ ಕೂಡಾ ಹೌದು.
ಎಲ್ಐಸಿ ಹಲವಾರು ಯೋಜನೆಗಳನ್ನು ಹೊಂದಿದೆ. ಜೀವನ ಆನಂದ್ ಪಾಲಿಸಿಯು ಎಲ್ಐಸಿಯ ಪಾಲಿಸಿಯಾಗಿದೆ. ಈ ಪಾಲಿಸಿಯು ದುಪ್ಪಟ್ಟು ಲಾಭವನ್ನು ನೀಡುತ್ತದೆ. ಈ ಯೋಜನೆಯಲ್ಲಿ ನಿರ್ದಿಷ್ಟ ಸಮಯದವರೆಗೆ ಹೂಡಿಕೆ ಮಾಡಿದರೆ ಅಧಿಕ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಯೋಜನೆಯಲ್ಲಿ ಪ್ರತಿ ದಿನ 45 ರೂಪಾಯಿ ಹೂಡಿಕೆ ಮಾಡಿದರೆ, ಮೆಚ್ಯೂರಿಟಿ ವೇಳೆ 25 ಲಕ್ಷ ರೂಪಾಯಿ ಪಡೆಯಲು ಸಾಧ್ಯವಾಗುತ್ತದೆ.
45 ರೂ ಹೂಡಿಕೆ ಮಾಡಿ, 25 ಲಕ್ಷ ರೂ ಪಡೆಯಿರಿ!
ಜೀವನ ಆನಂದ ಪಾಲಿಸಿಯಲ್ಲಿ ನೀವು 5 ಲಕ್ಷ ರೂಪಾಯಿಯನ್ನು ಹೂಡಿಕೆ ಮಾಡಿದರೆ, 25 ಲಕ್ಷ ರೂಪಾಯಿಯನ್ನು ಪಡೆಯಲು ಸಾಧ್ಯವಾಗುತ್ತದೆ. ನೀವು 5 ಲಕ್ಷ ರೂಪಾಯಿ ಹೂಡಿಕೆ ಮಾಡಿ 25 ಲಕ್ಷ ರೂಪಾಯಿಯನ್ನು ಪಡೆಯಬೇಕಾದರೆ ನೀವು 35 ವರ್ಷದವರೆ ಹೂಡಿಕೆ ಮಾಡಬೇಕಾಗುತ್ತದೆ. ನೀವು ಪ್ರತಿ ದಿನ 45 ರೂಪಾಯಿಯಂತೆ ಮಾಸಿಕವಾಗಿ 1,358 ರೂಪಾಯಿ ಹೂಡಿಕೆ ಮಾಡಿದಂತೆ ಆಗುತ್ತದೆ, ವಾರ್ಷಿಕವಾಗಿ 16,300 ರೂಪಾಯಿ ಹೂಡಿಕೆ ಮಾಡಿದಂತೆ ಆಗುತ್ತದೆ.
ಈ ಯೋಜನೆಹಗೆ ಬೇಕಾದ ದಾಖಲೆಗೆಳು?
ಜೀವನ ಆನಂದ ಪಾಲಿಸಿಯ ಲಾಭವನ್ನು ನೀವು ಪಡೆಯಬೇಕಾದರೆ ನಿಮ್ಮ ಬಳಿ ಕೆಲವು ದಾಖಲೆಗಳು ಇರುವುದು ಮುಖ್ಯವಾಗುತ್ತದೆ. ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿ, ಮೊಬೈಲ್ ನಂಬರ್, ಪ್ಯಾನ್ ಕಾರ್ಡ್ ಇರಬೇಕಾಗುತ್ತದೆ.
ಡೆತ್ ಬೆನಿಫಿಟ್, ಇತರೆ ಲಾಭ
ಜೀವನ ಆನಂದ್ ಪಾಲಿಸಿಯು ಡೆತ್ ಬೆನಿಫಿಟ್ ಅನ್ನು ನೀಡುತ್ತದೆ ಮತ್ತು ರೈಡರ್ ಬೆನಿಫಿಟ್ ಕೂಡಾ ಇದೆ. ಮೆಚ್ಯೂರಿಟಿಗೂ ಮುನ್ನ ಪಾಲಿಸಿದಾರರು ಸಾವನ್ನಪ್ಪಿದರೆ, ಪಾಲಿಸಿಯ ನಾಮಿನಿದಾರರು ಯೋಜನೆಯ ಲಾಭವನ್ನು ಪಡೆಯುತ್ತಾರೆ. ಡೆತ್ ಬೆನಿಫಿಟ್ ಅನ್ನು ಶೇಕಡ 125ರವರೆಗೆ ಪಡೆಯಬಹುದು. ಈ ಯೋಜನೆಯಲ್ಲಿ ಕನಿಷ್ಠ ಮೊತ್ತ 1 ಲಕ್ಷ ರೂಪಾಯಿ ಆಗಿದೆ. ಯಾವುದೇ ಗರಿಷ್ಠ ಮಿತಿ ಇಲ್ಲ. ಪಾಲಿಸಿದಾರರು ಅಂಗವೂನತೆಗೆ ಒಳಗಾದರೂ ಕೂಡಾ ರೈಡರ್ ಬೆನಿಫಿಟ್ ಲಭ್ಯವಾಗಲಿದೆ. ಆದರೆ ಈ ಯೋಜನೆಯಲ್ಲಿ ಯಾವುದೇ ತೆರಿಗೆ ವಿನಾಯಿತಿ ಇಲ್ಲ ಎಂಬುವುದು ತಿಳಿದಿರಲಿ.
More From GoodReturns

Gold Price Bengaluru: ಯುಗಾದಿಗೂ ಮುನ್ನ ಚಿನ್ನದ ಬೆಲೆ ಇಳಿಕೆ; ನಿನ್ನೆಗಿಂತ 3,300 ರೂ. ಕುಸಿತ

Eid Ul-Fitr 2026: ಯುಎಇ, ಕುವೈತ್, ಕತಾರ್ನಲ್ಲಿ ಮೈದಾನ ಪ್ರಾರ್ಥನೆಗೆ ಬ್ರೇಕ್!

Mysuru: ಮೈಸೂರಲ್ಲಿ ರಾಜ್ಯದ ಮೊದಲ ಗ್ಲೋಬಲ್ ಟೆಕ್ನಾಲಜಿ ಸೆಂಟರ್ ಆರಂಭ; 10 ಸಾವಿರ ಐಟಿ ಉದ್ಯೋಗಗಳ ನಿರೀಕ್ಷೆ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Pink Line Metro: ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ; ಶೀಘ್ರದಲ್ಲಿ ಆರಂಭ, ಹೊಸ ರೈಲಿನ ಆಗಮನ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ



Click it and Unblock the Notifications