ಭಾರತೀಯ ಜೀವ ವಿಮಾ ನಿಗಮವು (ಎಲ್ಐಸಿ) ಗ್ರಾಹಕರಿಗೆ ನೂತನ ಮತ್ತು ಲಾಭದಾಯಕ ಪಾಲಿಸಿಗಳನ್ನು ಪರಿಚಯಿಸುವಲ್ಲಿ ಹೆಸರುವಾಸಿಯಾಗಿದೆ. "ಎಲ್ಐಸಿ ಜೀವನ್ ಸರಳ್" ಯೋಜನೆ ಸೇರಿದಂತೆ ಅನೇಕ ಜನಪ್ರಿಯ ಯೋಜನೆಗಳು ಈಗಾಗಲೇ ಗ್ರಾಹಕರ ಮನಗೆದ್ದಿದೆ. ಇಂತಹ ಯೋಜನೆಗಳು ಗ್ರಾಹಕರ ಮತ್ತು ಅವರ ಕುಟುಂಬಗಳ ಆರ್ಥಿಕ ಅಗತ್ಯಗಳನ್ನು ಪೂರೈಸುವುದು ಸೇರಿದಂತೆ ಹಲವು ಪ್ರಯೋಜನೆಗಳನ್ನು ನೀಡುತ್ತದೆ. ಹಾಗಿದ್ರೆ "ಎಲ್ಐಸಿ ಜೀವನ್ ಸರಳ್ ಯೋಜನೆ"ಯ ವಿವರಗಳನ್ನು ತಿಳಿಯೋಣ.
ಜೀವನ್ ಸರಳ್ ಯೋಜನೆಯಲ್ಲಿ ಉಳಿತಾಯ ಮತ್ತು ಜೀವ ರಕ್ಷಣೆಯ ಎರಡು ಉದ್ದೇಶಗಳನ್ನು ಹೊಂದಿದ್ದು, ಆಕಾಲಿಕ ಮೃತ್ಯುವಿನ ಸಂದರ್ಭದಲ್ಲಿ ಇದು ಪಾಲಿಸಿದಾರನ ಕುಟುಂಬಕ್ಕೆ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ. ಇದು ಈ ಪಾಲಿಸಿಯ ಮುಖ್ಯವಾದ ಬೆನಿಫಿಟ್ ಆಗಿದೆ. ವಿಮಾ ಮೊತ್ತದ ಜೊತೆಗೆ ಅನ್ವಯವಾಗುವ ಯಾವುದೇ ಟರ್ಮಿನಲ್ ಬೋನಸ್ಗಳು ಮತ್ತು ರಿವರ್ಷನರಿ ಬೋನಸ್ ಗಳು ಇದ್ದರೂ ಇದು ಡೆತ್ ಬೆನಿಫಿಟ್ಗೆ ಸೇರ್ಪಡೆಗೊಳ್ಳುತ್ತದೆ. ಇದರಿಂದಾಗಿ ಪಾಲಿಸಿದಾರರ ಅನುಪಸ್ಥಿತಿಯಲ್ಲೂಅವರ ಕುಟುಂಬ ಆರ್ಥಿಕ ಭದ್ರತೆಯನ್ನು ಹೊಂದಿರುತ್ತದೆ.

ಪ್ರೀಮಿಯಂ ಪಾವತಿಗಳನ್ನು ಅಗತ್ಯಕ್ಕೆ ತಕ್ಕಂತೆ ಆಯ್ಕೆ ಮಾಡಬಹುದಾಗಿದ್ದು, ಹೀಗಾಗಿ ಇದು ಮತ್ತೊಂದು ಪ್ಲಸ್ ಪಾಯಿಂಟ್ ಆಗಿದೆ. ಪಾಲಿಸಿದಾರರು ತಮ್ಮ ಅನುಕೂಲತೆಗೆ ತಕ್ಕಂತೆ ವಾರ್ಷಿಕ, ಅರ್ಧವಾರ್ಷಿಕ, ತ್ರೈಮಾಸಿಕ ಮತ್ತು ಮಾಸಿಕ ಪ್ರೀಮಿಯಂ ಪಾವತಿಗಳನ್ನು ಆರಿಸಿಕೊಳ್ಳಬಹುದಾಗಿದೆ. ಎಲ್ಐಸಿ ಜೀವನ್ ಸರಳ್ ಯೋಜನೆಯೂ ನಿಮಗೆ ಸ್ಥಿರ ಆದಾಯವನ್ನು ನೀಡುತ್ತದೆ. ಈ ಯೋಜನೆಯ ಮೂಲಕ ನೀವು ವಾರ್ಷಿಕ, ಅರ್ಧವಾರ್ಷಿಕ, ತ್ರೈಮಾಸಿಕವಾಗಿ ಪಿಂಚಣಿಯನ್ನು ಪಡೆಯಬಹುದಾಗಿದೆ. ಇದರಲ್ಲಿ ಹಲವು ವಿಧದ ಪಾವತಿ ಆಯ್ಕೆಗಳು ಹೊಂದಿದ್ದು 40 ರಿಂದ 80ರ ನಡುವಿನ ವಯೋಮಿತಿಯ ಯಾವುದೇ ಭಾರತೀಯ ನಾಗರಿಕರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದಾಗಿದೆ.
ಈ ಯೋಜನೆಯಲ್ಲಿ ಪ್ರೀಮಿಯಂನ್ನು ಒಂದು ದೊಡ್ಡ ಮೊತ್ತದಲ್ಲಿ ಪಾವತಿ ಮಾಡಬೇಕಾಗುತ್ತದೆ. ಉದಾಹರಣೆಗೆ ಒಂದು ವೇಳೆ ಓರ್ವ ವ್ಯಕ್ತಿ 20 ಲಕ್ಷ ರೂಪಾಯಿಗಳನ್ನು ಪಾಲಿಸಿಯಲ್ಲಿ ಹೂಡಿಕೆ ಮಾಡಿದರೆ ಆಕೆ/ಆತ ವಾರ್ಷಿಕವಾಗಿ 1,24,000 ರೂಪಾಯಿಗಳನ್ನು ಪಿಂಚಣಿಯಾಗಿ ಪಡೆಯುತ್ತಾರೆ. ಹೀಗಾಗಿ ಯಾವುದೇ ವ್ಯಕ್ತಿ ಮಾಸಿಕವಾಗಿ 12,000 ರೂಪಾಯಿವರೆಗೆ ಪಿಂಚಣಿ ಪಡೆಯಬಹುದಾಗಿದೆ. ಎಲ್ಐಸಿ ಜೀವನ್ ಸರಳ್ ಯೋಜನೆಯಲ್ಲಿ ಕನಿಷ್ಟ 1,000 ರೂಪಾಯಿ ಪಿಂಚಣಿ ಪಡೆದುಕೊಳ್ಳುವುದು ಅವಶ್ಯಕವಾಗಿದೆ
More From GoodReturns

Eid Ul-Fitr 2026: ಯುಎಇ, ಕುವೈತ್, ಕತಾರ್ನಲ್ಲಿ ಮೈದಾನ ಪ್ರಾರ್ಥನೆಗೆ ಬ್ರೇಕ್!

Gold Price Bengaluru: ಯುಗಾದಿಗೂ ಮುನ್ನ ಚಿನ್ನದ ಬೆಲೆ ಇಳಿಕೆ; ನಿನ್ನೆಗಿಂತ 3,300 ರೂ. ಕುಸಿತ

Mysuru: ಮೈಸೂರಲ್ಲಿ ರಾಜ್ಯದ ಮೊದಲ ಗ್ಲೋಬಲ್ ಟೆಕ್ನಾಲಜಿ ಸೆಂಟರ್ ಆರಂಭ; 10 ಸಾವಿರ ಐಟಿ ಉದ್ಯೋಗಗಳ ನಿರೀಕ್ಷೆ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Pink Line Metro: ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ; ಶೀಘ್ರದಲ್ಲಿ ಆರಂಭ, ಹೊಸ ರೈಲಿನ ಆಗಮನ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ



Click it and Unblock the Notifications