ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ದೇಶಾದ್ಯಂತ ತನ್ನ ಲಕ್ಷಾಂತರ ಜನರಿಗೆ ಪ್ರಮುಖ ಎಚ್ಚರಿಕೆಯನ್ನು ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿರುವವರು ಬ್ಯಾಂಕ್ನ ಸೂಚನೆಯಂತೆ ಈ ಒಂದು ಕಾರ್ಯವನ್ನು ಮಾಡದಿದ್ದರೆ ಗ್ರಾಹಕರಿಗೆ ದಂಡ ವಿಧಿಸಲಾಗುತ್ತದೆ. ಆದ್ದರಿಂದಾಗಿ ಈ ಒಂದು ಕಾರ್ಯವನ್ನು ತಪ್ಪದೇ ಮಾಡಿಬಿಡಿ.
ದಂಡವನ್ನು ಪಾವತಿಸುವುದನ್ನು ತಪ್ಪಿಸಲು ನೀವು ನಿಮ್ಮ ಪ್ಯಾನ್ ಕಾರ್ಡ್ ಅನ್ನು ನಿಮ್ಮ ಆಧಾರ್ ಕಾರ್ಡ್ ಅಥವಾ ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕಾಗುತ್ತದೆ. ಈ ಹಿಂದೆ
ಮಾರ್ಚ್ 31, 2022 ರ ಮೊದಲು ತಮ್ಮ ಪ್ಯಾನ್ ಅನ್ನು ತಮ್ಮ ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡುವಂತೆ ಎಸ್ಬಿಐ ತನ್ನ ಗ್ರಾಹಕರಿಗೆ ಹೇಳಿತ್ತು.
ಕೊನೆಯ ದಿನಾಂಕಕ್ಕೂ ಮುನ್ನ ನಿಮ್ಮ ಪ್ಯಾನ್ ಅನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡದಿದ್ದರೆ ಬ್ಯಾಂಕಿಂಗ್ ಸೇವೆಯ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿತ್ತು. ಈಗ ದಂಡವನ್ನು ತಪ್ಪಿಸಬೇಕಾದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉಳಿತಾಯ ಖಾತೆ ಇರುವವರು ಈ ಖಾತೆಗೆ ಪ್ಯಾನ್ ಲಿಂಕ್ ಮಾಡಬೇಕು ಎಂದು ಬ್ಯಾಂಕ್ ಮಾಹಿತಿ ನೀಡಿದೆ. ಹಾಗಾದರೆ ನಿಮ್ಮ ಎಸ್ಬಿಐ ಉಳಿತಾಯ ಖಾತೆಗೆ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ....

ಎಸ್ಬಿಐ ಉಳಿತಾಯ ಖಾತೆಗೆ ಪ್ಯಾನ್ ಲಿಂಕ್ ಹೀಗೆ ಮಾಡಿ
ನೀವು ಎಸ್ಬಿಐನ ಇಂಟರ್ನೆಟ್ ಬ್ಯಾಂಕಿಂಗ್ ಪೋರ್ಟಲ್ ಮೂಲಕ ಎಸ್ಬಿಐ ಉಳಿತಾಯ ಖಾತೆಗೆ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡಬಹುದು.
ಹಂತ 1: ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ - www.onlinesbi.com
ಹಂತ 2: "My Accounts" ಅಡಿಯಲ್ಲಿ "Profile-PAN Registration" ಗೆ ಹೋಗಿ
ಹಂತ 3: ಖಾತೆ ಸಂಖ್ಯೆ ಮತ್ತು ಪ್ಯಾನ್ ಸಂಖ್ಯೆಯನ್ನು ಆಯ್ಕೆಮಾಡಿ ಮತ್ತು "Submit" ಕ್ಲಿಕ್ ಮಾಡಿ
ಹಂತ 4: ನಿಮ್ಮ ವಿನಂತಿಯನ್ನು ಈಗ ಪ್ರಕ್ರಿಯೆಗಾಗಿ ಎಸ್ಬಿಐ ಶಾಖೆಗೆ ರವಾನಿಸಲಾಗುತ್ತದೆ
ಹಂತ 5: ನಿಮ್ಮ ವಿನಂತಿಯನ್ನು 7 ದಿನಗಳಲ್ಲಿ ಪ್ರಕ್ರಿಯೆಗೊಳಿಸಲಾಗುತ್ತದೆ
ಹಂತ 6: ಮ್ಯಾಪಿಂಗ್ನ ಸ್ಥಿತಿಯನ್ನು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಿಳಿಸಲಾಗುತ್ತದೆ
ನೀವು ಇಂಟರ್ನೆಟ್ ಬ್ಯಾಂಕಿಂಗ್ಗೆ ನೋಂದಾಯಿಸದಿದ್ದರೆ, ಎಟಿಎಂ ಅಥವಾ ಡೆಬಿಟ್ ಕಾರ್ಡ್ ವಿವರಗಳನ್ನು ಬಳಸಿಕೊಂಡು ನಿಮ್ಮ ಪ್ಯಾನ್ ಸಂಖ್ಯೆಯನ್ನು ಖಾತೆಗೆ ಲಿಂಕ್ ಮಾಡಬಹುದು. ನೀವು ಎಸ್ಬಿಐ ಶಾಖೆಗೆ ಭೇಟಿ ನೀಡಿ ಕೂಡಾ ಈ ಕಾರ್ಯವನ್ನು ಮಾಡಬಹುದು.
ಹಂತ 1: ನಿಮಗೆ ಹತ್ತಿರವಿರುವ ಎಸ್ಬಿಐ ಶಾಖೆಗೆ ಭೇಟಿ ನೀಡಿ
ಹಂತ 2: ನಿಮ್ಮ ಪ್ಯಾನ್ ಕಾರ್ಡ್ನ ನಕಲನ್ನು ನಿಮ್ಮೊಂದಿಗೆ ಕೊಂಡೊಯ್ಯಿರಿ
ಹಂತ 3: 'Letter of Request' ಭರ್ತಿ ಮಾಡಿ
ಹಂತ 4: ಪ್ಯಾನ್ ಕಾರ್ಡ್ನ ಜೆರಾಕ್ಸ್ ಪ್ರತಿಯೊಂದಿಗೆ ಪತ್ರವನ್ನು ಸಲ್ಲಿಸಿ
ಹಂತ 5: ಪರಿಶೀಲನೆಯ ನಂತರ, ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ
ಹಂತ 6: ಲಿಂಕ್ ಮಾಡುವ ಸ್ಥಿತಿಯ ಕುರಿತು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಬರಲಿದೆ
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications