ಭಾರತದ ಮಾಜಿ ಮುಖ್ಯಸ್ಥ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ದೇಶದಲ್ಲೇ ಅತೀ ಜನಪ್ರಿಯವಾದ ಜೋಡಿ ಎಂಬವುದರಲ್ಲಿ ತಪ್ಪಿಲ್ಲ. ಸಾಮಾನ್ಯವಾಗಿ ಸೆಲೆಬ್ರೆಟಿಗಳು ತಮ್ಮ ಖಾಸಗಿ ಜೀವನದಲ್ಲಿ ಬೇರೆಯವರ ಎಂಟ್ರಿಯನ್ನು ಬಯಸುವುದಿಲ್ಲ. ಹಾಗೆಯೇ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಕೂಡಾ ತಮ್ಮ ಖಾಸಗಿ ಜೀವನದ ಬಗ್ಗೆ ಮಾಧ್ಯಮದ ವರದಿ, ಊಹಾಪೋಹಗಳನ್ನು ಇಚ್ಛಿಸುವುದಿಲ್ಲ.
ಹಾಗಾಗಿ ಸಾರ್ವಜನಿಕ ವಲಯದಲ್ಲಿ ತಮ್ಮ ಸುರಕ್ಷತೆಗೆ ಬಾಲಿವುಡ್, ಹಾಲಿವುಡ್, ಸ್ಯಾಂಡಲ್ವುಡ್ ಸ್ಟಾರ್ಗಳು ಅಧಿಕ ಖರ್ಚನ್ನೇ ಮಾಡುತ್ತಾರೆ. ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿಯೂ ಕೂಡಾ ತಮ್ಮ ಸುರಕ್ಷತೆಗಾಗಿ ಸಾಕಷ್ಟು ಖರ್ಚು ಮಾಡುತ್ತಾರೆ. ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿಯಂತೆ ಭಾರತೀಯ ಸೆಲೆಬ್ರೆಟಿಗಳು ವೈಯಕ್ತಿಕ ಬಾಡಿಗಾರ್ಡ್ಗಳನ್ನು ಹೊಂದಿದ್ದಾರೆ.
ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬಾಡಿಗಾರ್ಡ್ ಹೆಸರು ಸೋನು. ಹಲವಾರು ವರ್ಷಗಳಿಂದ ಅನುಷ್ಕಾ ಶರ್ಮಾರ ಬಾಡಿಗಾರ್ಡ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಅಷ್ಟಕ್ಕೂ ಸೋನು ನಿಜವಾದ ಹೆಸರು ಸೋನು ಅಲ್ಲ. ಬೇರೆಯೇ ಇದೆ. ಸೋನು ನಿಜವಾದ ಹೆಸರು ಏನು, ಅನುಷ್ಕಾ ಶರ್ಮಾ ದಂಪತಿ ಸೋನುಗೆ ಎಷ್ಟು ವೇತನವನ್ನು ನೀಡುತ್ತಾರೆ ಎಂಬ ಬಗ್ಗೆ ತಿಳಿಯೋಣ ಮುಂದೆ ಓದಿ...

ಸೋನು ನಿಜ ಹೆಸರು ಏನು?
ಸೋನು ನಿಜ ಹೆಸರು ಪ್ರಕಾಶ್ ಸಿಂಗ್ ಆಗಿದೆ. ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಡೆಯಿಂದ ದೊಡ್ಡ ಮೊತ್ತದ ವೇತನವನ್ನು ಪ್ರಕಾಶ್ ಸಿಂಗ್ ಪಡೆಯುತ್ತಿದ್ದಾರೆ. ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕ್ರಿಕೆಟರ್ ವಿರಾಟ್ ಕೊಹ್ಲಿಯನ್ನು ವಿವಾಹವಾಗುವುದಕ್ಕೂ ಮುನ್ನ ಸೋನು ಹಲವಾರು ವರ್ಷಗಳಿಂದ ಅನುಷ್ಕಾ ಶರ್ಮಾರ ಬಾಡಿಗಾರ್ಡ್ ಆಗಿ ಕಾರ್ಯನಿರ್ವಹಣೆ ಮಾಡುತ್ತಾ ಬಂದಿದ್ದಾರೆ. ಈಗಲೂ ಅನುಷ್ಕಾ ಶರ್ಮಾರ ಬಾಡಿಗಾರ್ಡ್ ಆಗಿ ಸೋನು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.
ಪ್ರಕಾಶ್ ಸಿಂಗ್ ವೇತನ ಎಷ್ಟು?
ಪ್ರಕಾಶ್ ಸಿಂಗ್/ ಸೋನು ವೇತನ ವಾರ್ಷಿಕವಾಗಿ 1.2 ಕೋಟಿ ರೂಪಾಯಿ ಆಗಿದೆ. ಇದು ಹಲವಾರು ಸಂಸ್ಥೆಗಳು ಸಿಇಒಗಳ ಸಿಟಿಸಿಗಿಂತ ಅಧಿಕವಾಗಿದೆ. ಲಭ್ಯವಾದ ಮಾಹಿತಿ ಪ್ರಕಾರ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಮ್ಮ ಬಾಡಿಗಾರ್ಡ್ ಅನ್ನು ಬಾಡಿಗಾರ್ಡ್ಗಿಂತ ಅಧಿಕವಾಗಿ ಕಾಣುತ್ತಿದ್ದಾರೆ. ಕುಟುಂಬದ ಓರ್ವ ವ್ಯಕ್ತಿಯಾಗಿದ್ದಾರೆ. ಪ್ರತಿ ವರ್ಷವೂ ಅನುಷ್ಕಾ ಶರ್ಮಾ ಸೋನು ಹುಟ್ಟು ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ.
ಅನುಷ್ಕಾ ಶರ್ಮಾ ತಮ್ಮ ಬಾಡಿಗಾರ್ಡ್ ಸೋನು ಜನ್ಮದಿನವನ್ನು ಆಚರಣೆ ಮಾಡುವ ವಿಡಿಯೋ, ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸೋನು ಅನುಷ್ಕಾ ಶರ್ಮಾರನ್ನು ವಿವಾಹವಾದ ಬಳಿಕ ವಿರಾಟ್ ಕೊಹ್ಲಿ ಬಾಡಿಗಾರ್ಡ್ ಆಗಿಯೂ ಕಾರ್ಯನಿರ್ವಹಣೆ ಮಾಡುತ್ತಾ ಬಂದಿದ್ದಾರೆ. ಅನುಷ್ಕಾ ಗರ್ಭಿಣಿಯಾಗಿದ್ದ ಸಂದರ್ಭದಲ್ಲಿ ಹಾಗೂ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಅನುಷ್ಕಾ ಸಾರ್ವಜನಿಕ ಪ್ರದೇಶಕ್ಕೆ ಬಂದಾಗಲೆಲ್ಲಾ ಸೋನು ಬಾಡಿಗಾರ್ಡ್ ಆಗಿ ಅನುಷ್ಕಾ ಜೊತೆಯಲ್ಲಿದ್ದರು.
More From GoodReturns

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications