ಅರುಣ್ ಮಿಶ್ರಾ ಅವರು ವೇದಾಂತ ಲಿಮಿಟೆಡ್ನ ಅಂಗಸಂಸ್ಥೆಯಾದ ಹಿಂದೂಸ್ತಾನ್ ಜಿಂಕ್ ಲಿಮಿಟೆಡ್ (HZL) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಮತ್ತು ಪೂರ್ಣಾವಧಿಯ ನಿರ್ದೇಶಕರಾಗಿದ್ದಾರೆ.
ಹಿಂದೂಸ್ತಾನ್ ಜಿಂಕ್ ಲಿಮಿಟೆಡ್ ದೇಶದ ಪ್ರಾಥಮಿಕ ಸತು ಉದ್ಯಮದಲ್ಲಿ ಶೇಕಡ 78 ಮಾರುಕಟ್ಟೆ ಪಾಲನ್ನು ಹೊಂದಿರುವ ಭಾರತದ ಅತಿದೊಡ್ಡ ಮತ್ತು ವಿಶ್ವದ ಎರಡನೇ ಅತಿದೊಡ್ಡ ಸೀಸ ಮತ್ತು ಸತು ಮೈನರ್ಸ್ ಆಗಿದೆ. ಅರುಣ್ ಅವರು 2020 ಆಗಸ್ಟ್ ನಿಂದ ಸಂಸ್ಥೆಯನ್ನು ಮುನ್ನಡೆಸಿಕೊಂಡು ಬಂದಿದ್ದಾರೆ.

ಮೊದಲೇ ತಿಳಿಸಿದಂತೆ ಹಿಂದೂಸ್ತಾನ್ ಜಿಂಕ್ ಲಿಮಿಟೆಡ್ ಭಾರತೀಯ ಬಿಲಿಯನೇರ್ ಉದ್ಯಮಿ ಅನಿಲ್ ಅಗರ್ವಾಲ್ ಒಡೆತನದ ವೇದಾಂತ ಲಿಮಿಟೆಡ್ನ ಅಂಗಸಂಸ್ಥೆಯಾಗಿದೆ. ವೇದಾಂತ ಲಿಮಿಟೆಡ್ ಕಂಪನಿಯಲ್ಲಿ ಶೇಕಡ 64.9 ರಷ್ಟು ಪಾಲನ್ನು ಹೊಂದಿದ್ದರೆ, ಉಳಿದ ಪಾಲನ್ನು ಅಂದರೆ ಶೇಕಡ 29.5 ರಷ್ಟು ಪಾಲನ್ನು ಸರ್ಕಾರವು ಹೊಂದಿದೆ.
ಮಿಶ್ರಾ ಅವರು 2019 ರ ನವೆಂಬರ್ನಲ್ಲಿ HZL ನ ಡೆಪ್ಯೂಟಿ ಸಿಇಒ ಆಗಿ ನೇಮಕಗೊಂಡರು. ಇದಾದ ಬಳಿಕ 2020 ರ ಆಗಸ್ಟ್ 1 ರಂದು ಅವರಿಗೆ ಸಿಇಒ ಸ್ಥಾನಕ್ಕೆ ಭಡ್ತಿ ನೀಡಲಾಯಿತು. ಹಿಂದೂಸ್ತಾನ್ ಜಿಂಕ್ ಲಿಮಿಟೆಡ್ ಸೆಪ್ಟೆಂಬರ್ 29ರ ಮಾಹಿತಿಯಂತೆ 1,30,000 ಕೋಟಿ ರೂಪಾಯಿಗಳ ಮಾರುಕಟ್ಟೆ ಬಂಡವಾಳವನ್ನು ಹೊಂದಿದೆ. ಶುಕ್ರವಾರದಂದು ಕಂಪನಿಯ ಷೇರು ದರ 308.40 ರೂಪಾಯಿ ಆಗಿತ್ತು.
ಅರುಣ್ ಮಿಶ್ರಾ ಅವರ ಶೈಕ್ಷಣಿಕ ಅರ್ಹತೆ ಬಗ್ಗೆ ನೋಡುವುದಾದರೆ, ಖರಗ್ಪುರದ ಐಐಟಿಯಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನಂತರ ನ್ಯೂ ಸೌತ್ ವೇಲ್ಸ್ ಸಿಡ್ನಿ ವಿಶ್ವವಿದ್ಯಾನಿಲಯದಿಂದ ಮೈನಿಂಗ್ ಅಂಡ್ ಬೆನೆಫಿಸಿಯೇಷನ್ ವಿಷಯದಲ್ಲಿ ಡಿಪ್ಲೊಮಾ ಪದವಿ ಪಡೆದುಕೊಂಡರು. ಇದಾದ ಬಳಿಕ ಫ್ರಾನ್ಸ್ನ CEDEP ಯಿಂದ ಜನರಲ್ ಮ್ಯಾನೇಜ್ಮೆಂಟ್ನಲ್ಲಿ ಮತ್ತೊಂದು ಡಿಪ್ಲೊಮಾ ಪಡೆದರು.
ಮಿಶ್ರಾ ಅವರು ಟಾಟಾ ಸ್ಟೀಲ್ನ ಮಾಜಿ ಉದ್ಯೋಗಿಯಾಗಿದ್ದಾರೆ. ಅವರ ವೃತ್ತಿ ಜೀವನವನ್ನು 1988 ರ ಜುಲೈನಲ್ಲಿ ವೆಸ್ಟ್ ಬೊಕಾರೊ ಕೋಲ್ ವಾಷರಿ ಯ (ಎಲೆಕ್ಟ್ರಿಕಲ್) ಕಂಪನಿಯಲ್ಲಿ ಮೈಂಟೆನನ್ಸ್ ಹೆಡ್ ಆಗಿ ಪ್ರಾರಂಭಿಸಿದರು. ಅರುಣ್ ಅವರು 33 ವರ್ಷಗಳ ಶ್ರೀಮಂತ ವೃಜೀವನದ ಅನುಭವವನ್ನು ಹೊಂದಿದ್ದಾರೆ.
ಅರುಣ್ ಅವರು ಮಮಿತಾ ಮಿಶ್ರಾ ಅವರನ್ನು ವಿವಾಹವಾಗಿದ್ದು ಈ ದಂಪತಿಗಳಿಗೆ ಸ್ತುತಿ ಮತ್ತು ಶ್ರೇಷ್ಠಾ ಎಂಬ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಗಾಯನ, ಗಾಲ್ಫ್ ಮತ್ತು ಫುಟ್ಬಾಲ್ ಅವರ ಆಸಕ್ತಿಯ ಕ್ಷೇತ್ರವಾಗಿದೆ. ಆಗಸ್ಟ್ 1, 2023 ರಿಂದ, ಮಿಶ್ರಾ ಅವರನ್ನು ವೇದಾಂತ ಲಿಮಿಟೆಡ್ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications