ಇಲಂಗೋ ಪಂಡರಿನಾಥನ್ ಅವರು ಹಿಂದೂಸ್ತಾನ್ ಆಯಿಲ್ ಎಕ್ಸ್ಪ್ಲೊರೇಷನ್ ಕಂಪನಿ(ಎಚ್ಒಇಸಿ)ಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ಈ ಕಂಪನಿಯು ಗ್ಯಾಸ್ ಎಕ್ಸ್ಪ್ಲೊರೇಷನ್ ವ್ಯವಹಾರದಲ್ಲಿ ಗಮನಾರ್ಹವಾಗಿ ತೊಡಗಿಸಿಕೊಂಡಿದೆ. 2023ರ ಸೆಪ್ಟಂಬರ್ 29ರ ಮಾಹಿತಿಯಂತೆ ಕಂಪನಿಯು ಒಟ್ಟು 2283 ಕೋಟಿ ರೂಪಾಯಿ ಮಾರುಕಟ್ಟೆ ಬಂಡವಾಳವನ್ನು ಹೊಂದಿದೆ.
ಆ ದಿನದಂದು ಎನ್ಎಸ್ಇನಲ್ಲಿ ಎಚ್ಒಇಸಿ ಕಂಪನಿಯ ಷೇರು ಮೌಲ್ಯ 172.55 ರೂಪಾಯಿ ಆಗಿತ್ತು. ಪಂಡರಿನಾಥನ್ ಅವರು ಅಪ್ಸ್ಟ್ರೀಮ್ ತೈಲ ಹಾಗೂ ಅನಿಲ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳಿಂದ ತೊಡಗಿಸಿಕೊಂಡಿದ್ದಾರೆ. ಈ ಉದ್ಯಮ ಕ್ಷೇತ್ರದಲ್ಲಿ ಅವರು ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ್ದು, ಭಾರತೀಯ ಉದ್ಯಮ ವಲಯದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾರೆ.

ಪಂಡರಿನಾಥನ್ ಅವರು ಅಣ್ಣಾಮಲೈ ವಿಶ್ವವಿದ್ಯಾಲಯದಿಂದ ಎಂಬಿಎನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ. ಇದಕ್ಕೂ ಮೊದಲು ಅವರು ಮದ್ರಾಸ್ ಕ್ರಿಸ್ಟ್ ಕಾಲೇಜಿನಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ಪಂಡರಿನಾಥನ್ ಅವರು 1985ರಲ್ಲಿ ಸರ್ಕಾರಿ ಸ್ವಾಮ್ಯದ ಒಎನ್ಜಿಸಿಯಲ್ಲಿ ತಮ್ಮ ವೃತ್ತಿ ಬದುಕನ್ನು ಪ್ರಾರಂಭಿಸಿದ್ದರು.
ಇಲಂಗೋ ಅವರು ಎಚ್ಒಇಸಿಯಲ್ಲಿ 2015ರಲ್ಲಿ ಪ್ರಮೋಟರ್ ಆಗಿ ಸೇರಿಕೊಂಡಿದ್ದರು. ಎಚ್ಒಇಸಿಗೆ ಸೇರುವ ಮೊದಲು ಅವರು ಕೈರ್ನ್ ಇಂಡಿಯಾ ಲಿಮಿಟೆಡ್ನಲ್ಲಿ ಐದು ವರ್ಷಗಳ ಕಾಲ ಸಿಇಒ ಹಾಗೂ ಪೂರ್ಣಾವಧಿಯ ನಿರ್ದೇಶಕರಾಗಿದ್ದರು. ಕೈರ್ನ್ ಜತೆಗೆ ಸುಧೀರ್ಘವಾಗಿ ತೊಡಗಿಸಿಕೊಂಡಿದ್ದ ಅವರು ಈ ಸಂಸ್ಥೆಯಲ್ಲಿ ಜನಪ್ರಿಯ ಆಯಿಲ್ ಹಾಗೂ ಗ್ಯಾಸ್ ಕಂಪನಿಯಾಗಿ ಪರಿವರ್ತಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅವರು ಈ ಕಂಪನಿಯಲ್ಲಿ 2009ರಿಂದ 2014ರ ಏಪ್ರಿಲ್ ಅಂತ್ಯದವರೆಗೆ ಕೆಲಸ ಮಾಡಿದ್ದರು. ಹಿಂದೂಸ್ತಾನ್ ಆಯಿಲ್ ಎಕ್ಸ್ಪ್ಲೊರೇಷನ್ ಕಂಪನಿ ಲಿಮಿಟೆಡ್ ತೈಲ ಹಾಗೂ ಗ್ಯಾಸ್ ಉತ್ಪಾದನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದೆ.
ಈ ಕಂಪನಿಯು ಭಾರತದಲ್ಲಿ ಒಂಬತ್ತು ಗ್ಯಾಸ್ ಹಾಗೂ ಆಯಿಲ್ಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದೆ. 1983ರಲ್ಲಿ ಸಂಘಟಿತವಾದ ಹಿಂದೂಸ್ತಾನ್ ಆಯಿಲ್ ಎಕ್ಸ್ಪ್ಲೊರೇಷನ್ ಕಂಪನಿ ಲಿಮಿಟೆಡ್ ವಡೋದರಾವನ್ನು ಕೇಂದ್ರೀಕರಸಿ ವ್ಯವಹಾರ ನಡೆಸುತ್ತಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications