ಹಲವು ಉದ್ಯಮಿಗಳು ಕಂಪನಿಗಳಲ್ಲಿ ಕೆಳ ಹಂತದ ಹುದ್ದೆಗಳಲ್ಲಿ ವೃತ್ತಿ ಬದುಕನ್ನು ಪ್ರಾರಂಭಿಸಿ ಉನ್ನತ ಸ್ಥಾನಕ್ಕೆ ಏರಿದ ಹತ್ತಾರು ಉದಾಹರಣೆಗಳು ಅಥವಾ ಯಶೋಗಾಥೆಗಳು ನಮ್ಮ ಮುಂದೆ ಇವೆ. ಅಂಥಹ ಒಬ್ಬರು ಯಶಸ್ವಿ ಉದ್ಯಮಿಯ ಕಥೆ ಇದಾಗಿದ್ದು, ಆ ಕಂಪನಿಯಲ್ಲಿ ಅವರು ಬ್ರಾಂಡ್ ಅಸೋಸಿಯೇಟ್ ಆಗಿ ಸೇರಿಕೊಂಡು ಬಳಿಕ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೇರಿದ್ದಾರೆ. ಅವರ ಹೆಸರು ಡಾ. ಸಂಜೀವ್ ಪಾಂಚಾಲ್. ಅವರು ಅಸ್ಟ್ರಾಜೆನೆಕಾ ಫಾರ್ಮಾ ಇಂಡಿಯಾ ಲಿಮಿಟೆಡ್ ಅಧ್ಯಕ್ಷರು ಹಾಗೂ ಎಂಡಿ ಕೂಡ ಆಗಿದ್ದಾರೆ.
ಪಾಂಚಾಲ್ ಅವರು 2003ರಲ್ಲಿ ಬ್ರಾಂಡ್ ಅಸೋಸಿಯೇಟ್ಆಗಿ ಬಯೋಫಾರ್ಮಾಸ್ಯುಟಿಕಲ್ ಕಂಪನಿಗೆ ಸೇರಿದ್ದರು. 2023ರ ಜನವರಿಯಲ್ಲಿ ಅವರು ಅಧ್ಯಕ್ಷರು ಹಾಗೂ ಎಂಡಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಹಲವು ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಕಂಪನಿಯು 2023ರ ಅಕ್ಟೋಬರ್ 11 ರ ಪ್ರಕಾರ, 11,700 ಕೋಟಿ ರೂಪಾಯಿ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ.

ಅಸ್ಟ್ರಾಜೆನೆಕಾ ಫಾರ್ಮಾ ಇಂಡಿಯಾ ಲಿಮಿಟೆಡ್ ಮುಂಚೂಣಿಯಲ್ಲಿರುವ ಬಯೋ ಫಾರ್ಮಾಸುಟಿಕಲ್ ಕಂಪನಿಯಾಗಿದ್ದು, 2023ರ ಜ.1ರಿಂದ ಅನ್ವಯವಾಗುವಂತೆ ಡಾ. ಸಂಜೀವ್ಪಾಂಚಾಲ್ಅವರನ್ನು ಕಂಟ್ರಿ ಪ್ರೆಸಿಡೆಂಟ್ ಹಾಗೂ ಎಂಡಿಯಾಗಿ ನೇಮಕ ಮಾಡುವುದಾಗಿ ಘೋಷಿಸಲಾಗಿತ್ತು.
ಈ ಕಂಪನಿಯಲ್ಲಿ ಸಂಜೀವ್ ಅವರ ಸುಧೀರ್ಘ 20 ವರ್ಷಗಳ ಅವಧಿಯಲ್ಲಿ ಅವರು ಯುಕೆ ಹಾಗೂ ಸಿಂಗಾಪುರವನ್ನು ಕೇಂದ್ರ ಸ್ಥಾನವನ್ನಾಗಿಸಿಕೊಂಡು ಭಾರತ, ಇಂಡೋನೇಷಿಯಾ, ಏಷ್ಯಾ ಫೆಸಿಫಿಕ್ ಹಾಗೂ ಅಂತಾರಾಷ್ಟ್ರೀಯ ವಲಯಗಳಲ್ಲಿ ಬೇರೆ ಬೇರೆ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸಂಜಯ್ ಅವರು ವಿಜ್ಞಾನದಲ್ಲಿ ಪದವಿ ಹಾಗೂ ಎಂಬಿಎನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ.
ಅವರು ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯದಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ನಲ್ಲಿ ಪಿಎಚ್ಡಿ ಪದವಿಯನ್ನು ಕೂಡ ಪಡೆದುಕೊಂಡಿದ್ದಾರೆ. ಈ ನಡುವೆ ಅವರು ಇಂಟರ್ ನ್ಯಾಷನಲ್ಬಿಸಿನೆಸ್ ಹಾಗೂ ಮಾನವ ಸಂಪನ್ಮೂಲ ವಿಷಯದಲ್ಲಿ ಡಿಪ್ಲೊಮಾವನ್ನು ಕೂಡ ಪೂರ್ಣಗೊಳಿಸಿದ್ದಾರೆ. ಅಸ್ಟ್ರಾಜೆನೆಕಾ ಫಾರ್ಮಾ ಇಂಡಿಯಾ ಲಿಮಿಟೆಡ್ಗೆ ಸೇರುವ ಮೊದಲು ಸಂಜೀವ್ ಅವರು ಸಿಪ್ಲಾ ಕಂಪನಿಯಲ್ಲಿ ಕೆಲಸ ಮಾಡಿದ್ದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications