ಮಧ್ಯಪ್ರದೇಶ ಮೂಲದ ದಿಲೀಪ್ ಬಿಲ್ಡ್ಕಾನ್ ತನ್ನ ಮೊದಲ ತ್ರೈಮಾಸಿಕದ ಹಣಕಾಸು ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಈ ದೈತ್ಯ ನಿರ್ಮಾಣ ಸಂಸ್ಥೆಯ ಮೂರು ತಿಂಗಳ ಒಟ್ಟು ಸೇಲ್ಸ್ 2200 ಕೋಟಿ ರೂಪಾಯಿ ಆಗಿದೆ. ಇದರ ನಿವ್ವಳ ಲಾಭವು 12.31 ಕೋಟಿ ರೂಪಾಯಿ ಆಗಿದೆ. ಮಧ್ಯಪ್ರದೇಶದ ಸರ್ಕಾರದಿಂದ 700 ಕೋಟಿ ರೂಪಾಯಿಗಳ ಮೂಲಸೌಕರ್ಯ ಯೋಜನೆಯನ್ನು ಪಡೆದುಕೊಂಡ ಬಳಿಕ ಆರ್ಥಿಕ ಫಲಿತಾಂಶವನ್ನು ಘೋಷಣೆ ಮಾಡಿದೆ.
ಈ ಕಂಪನಿಯನ್ನು ದಿಲೀಪ್ ಸೂರ್ಯವಂಶಿ ಅವರು ಸ್ಥಾಪಿಸಿದ್ದಾರೆ. ಅವರು ಈ ಕ್ಷೇತ್ರದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದ್ದಾರೆ. ದಿಲೀಪ್ ಸೂರ್ಯವಂಶಿ ಅವರು ದಿಲೀಪ್ ಬಿಲ್ಡ್ಕಾನ್ ಲಿಮಿಟೆಡ್ನ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಆಗಿದ್ದಾರೆ. ಅವರು ಒಟ್ಟು 44 ವರ್ಷಗಳ ಅನುಭವವನ್ನು ಹೊಂದಿದ್ದಾರೆ.

ದಿಲೀಪ್ ಸೂರ್ಯವಂಶಿ ಅವರು ಜಬಲ್ಪುರ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದಾರೆ. ದಿಲೀಪ್ ಸೂರ್ಯವಂಶಿ ಅವರು 1987ರಲ್ಲಿ ಈ ಕಂಪನಿಯನ್ನು ಸ್ಥಾಪಿಸಿದ್ದಾರೆ. 2006ರಲ್ಲಿ ಇದು ಇನ್ಕಾರ್ಪೊರೇಟ್ ಆಗಿದ್ದು, ಈ ಕಂಪನಿಯ ಮೂಲ ಹೆಸರು ದಿಲೀಪ್ ಬಿಲ್ಡರ್ಸ್.
ಈ ಕಂಪನಿಯು ವಸತಿ, ವಾಣಿಜ್ಯ ಹಾಗೂ ಮೂಲಸೌಕರ್ಯ ಪ್ರಾಜೆಕ್ಟ್ಗಳನ್ನು ನಿರ್ಮಿಸುತ್ತಿದ್ದಾರೆ. ಜತೆಗೆ ಮುಂಬೈ ಸ್ಟಾಕ್ ಎಕ್ಸ್ಚೇಂಜ್ ಹಾಗೂ ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ನಲ್ಲಿಯೂ ಲಿಸ್ಟ್ ಆಗಿದೆ.
ಯುವಕರಾಗಿರುವಾಗ, ಸೂರ್ಯವಂಶಿ ಅವರು ಬೇರೆ ಕಡೆ ಕೆಲಸ ಮಾಡುವುದಕ್ಕೆ ಇಷ್ಟಪಡುತ್ತಿರಲಿಲ್ಲ. ಅವರ ತಂದೆಯು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು.
ಅವರು ತಮ್ಮ ಓದನ್ನು ಮುಗಿಸಿದ ಬಳಿಕ 1979 ರಲ್ಲಿ ಸಹೋದರ ಅವರ ಸೋಯಾಬೀನ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಸೇರಿದ್ದರು. ಬರಗಾಲದ ಕಾರಣ ಕಂಪನಿಯನ್ನು ಮುಚ್ಚಬೇಕಾಯಿತು. ಬಳಿಕ ಅವರು ತಮ್ಮ ನಿರ್ಮಾಣ ಕಂಪನಿಯನ್ನು ಪ್ರಾರಂಭಿಸಿದ್ದರು. 1995ರಲ್ಲಿ ಅವರು 21 ವರ್ಷದ ಎಂಜಿನಿಯರ್ ದೇವೇಂದ್ರ ಜೈನ್ ಅವರನ್ನು ನೇಮಕ ಮಾಡಿಕೊಂಡಿದ್ದರು.
ನಂತರ ದಿಲೀಪ್ ಸೂರ್ಯವಂಶಿ ಅವರು ಅವರ ಪ್ರಾಮುಖ್ಯತೆಯನ್ನು ಅರಿತುಕೊಂಡರು. ಆ ಮೂಲಕ ವ್ಯವಹಾರದಲ್ಲಿ 31 ಪ್ರತಿಶತ ಪಾಲನ್ನು ಹೊಂದಿರುವ ಪಾಲುದಾರನನ್ನಾಗಿ ಮಾಡಿದರು ಎಂದು ಫೋರ್ಬ್ಸ್ ವರದಿ ಮಾಡಿದೆ.
ಜೈನ್ ತಮ್ಮ ಇಂಜಿನಿಯರಿಂಗ್ ಅನ್ನು ಉಜ್ಜಯಿನಿಯ ವಿಕ್ರಮ್ ವಿಶ್ವವಿದ್ಯಾಲಯದಿಂದ ಪಡೆದುಕೊಂಡಿದ್ದಾರೆ. ಸೂರ್ಯವಂಶಿ ಮತ್ತು ಜೈನ್ ಇಬ್ಬರೂ ಕೋಟ್ಯಾಧಿಪತಿಗಳು. ಹುರುನ್ ಪಟ್ಟಿ 2021ರ ಪ್ರಕಾರ, ಜೈನ್ ಅವರ ನಿವ್ವಳ ಮೌಲ್ಯ 2300 ಕೋಟಿ ರೂಪಾಯಿ ಆಗಿದ್ದು, ಸೂರ್ಯವಂಶಿ ಅವರ ಆಸ್ತಿ 4100 ಕೋಟಿ ರೂಪಾಯಿ ಆಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications