ವಿಜಯ್ ಮಲ್ಯ, ನೀರವ್ ಮೋದಿ, ನಿತಿನ್ ಜಯಂತಿಲಾಲ್ ಸಂದೇಸರ, ಚೇತನ್ ಜಯಂತಿಲಾಲ್ ಸಂದೇಸರ, ದೀಪ್ತಿ ಚೇತನ್ ಜಯಂತಿಲಾಲ್ ಸಂದೇಸರ, ಹಿತೇಶ್ ಕುಮಾರ್ ನರೇಂದ್ರಭಾಯಿ ಪಟೇಲ್, ಜುನೈದ್ ಇಕ್ಬಾಲ್ ಮೆಮನ್, ಹಜ್ರಾ ಇಕ್ಬಾಲ್ ಮೆಮನ್, ಆಸಿಫ್ ಇಕ್ಬಾಲ್ ಮೆಮನ್ ಮತ್ತು ರಾಮಚಂದ್ರನ್ ವಿಶ್ವನಾಥನ್ ಎಂಬ ಹತ್ತು ಮಂದಿಯನ್ನು ಎಫ್ಇಒಗಳು ಎಂದು ಈಗಾಗಲೇ ಕೋರ್ಟ್ ಘೋಷಣೆ ಮಾಡಿದೆ.
ಕೇಂದ್ರ ಸರ್ಕಾರವು ಕೂಡಾ ಇವರನ್ನು ಆರ್ಥಿಕ ಅಪರಾಧಿ ಎಂದು ಘೋಷಿಸಿದೆ. ಹಾಗೆಯೇ ಈ ಆರ್ಥಿಕ ಅಪರಾಧಿಗಳಿಂದ ಸುಮಾರು 15,113 ಕೋಟಿ ರೂಪಾಯಿ ವಸೂಲಿ ಮಾಡಿ, ಅದನ್ನು ಬ್ಯಾಂಕ್ಗಳಿಗೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರವು ಹೇಳಿಕೊಂಡಿದೆ. ಈ ಹತ್ತು ಆರ್ಥಿಕ ಅಪರಾಧಿಗಳ ಪೈಕಿ ಒಂದೇ ಕುಟುಂಬದ ಮೂವರು ಆರ್ಥಿಕ ಅಪರಾಧಿಗಳ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ....

ಒಂದೇ ಕುಟುಂಬದ ಮೂವರು ಆರ್ಥಿಕ ಅಪರಾಧಿಗಳು
ನಿತಿನ್ ಸಂದೇಸರ, ಚೇತನ್ ಸಂದೇಸರ, ದೀಪ್ತಿ ಸಂದೇಸರ, ಮತ್ತು ಹಿತೇಶ್ ಪಟೇಲ್ ಭಾರತ ಮೂಲದ ಫಾರ್ಮಾಸ್ಯುಟಿಕಲ್ ಕಂಪನಿಯಾದ ಸ್ಟರ್ಲಿಂಗ್ ಬಯೋಟೆಕ್ ಲಿಮಿಟೆಡ್ನ ನಿರ್ದೇಶಕರಾಗಿದ್ದಾರೆ. ಈ ಪೈಕಿ ಹಿತೇಶ್ ಕುಮಾರ್ ನರೇಂದ್ರಭಾಯಿ ಪಟೇಲ್ ಬಗ್ಗೆ ನಾವಿಲ್ಲಿ ವಿವರಿಸಿದ್ದೇವೆ. ಉಳಿದಂತೆ ಮೂವರು ಒಂದೇ ಕುಟುಂಬಕ್ಕೆ ಸೇರಿದ ಆರ್ಥಿಕ ಅಪರಾಧಿಗಳಾಗಿದ್ದಾರೆ.
ಈ ಮೂವರು ಕೂಡಾ ವಂಚನೆ ಮತ್ತು ಮನಿ ಲಾಂಡರಿಂಗ್ ಒಳಗೊಂಡ ಪ್ರಮುಖ ಹಣಕಾಸು ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ಕಂಪನಿ ಮತ್ತು ಅದರ ನಿರ್ದೇಶಕರು ಸಾಲ ವಂಚನೆ ಮಾಡಿದ್ದಾರೆ. ಹಣವನ್ನು ಬೇರೆಡೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಇದರಿಂದಾಗಿ ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳು ಭಾರೀ ನಷ್ಟವನ್ನು ಉಂಟಾಗಿದೆ.
ಸ್ಟರ್ಲಿಂಗ್ ಬಯೋಟೆಕ್ನ ನಿರ್ದೇಶಕರಾದ ನಿತಿನ್ ಜಯಂತಿಲಾಲ್ ಸಂದೇಸರ ಅವರು ತಮ್ಮ ಕಂಪನಿಯು ಬ್ಯಾಂಕ್ಗಳ ಒಕ್ಕೂಟದಿಂದ 5,000 ಕೋಟಿ ರೂಪಾಯಿ ಸಾಲವನ್ನು ಮರುಪಾವತಿಸದೆ ವಿವಾದದಲ್ಲಿ ತೊಡಗಿದ್ದಾರೆ. ನಿತಿನ್ ಜಯಂತಿಲಾಲ್ ವಿವಿಧ ಕಂಪನಿಗಳಲ್ಲಿ ಬಹು ಸ್ಥಾನಗಳನ್ನು ಹೊಂದಿದ್ದಾರೆ. ಗುಂಪಿನ ಕಾರ್ಯತಂತ್ರ ಮತ್ತು ವ್ಯವಹಾರ ಅಭಿವೃದ್ಧಿಗೆ ಜವಾಬ್ದಾರಿಯನ್ನು ಹೊಂದಿದ್ದಾರೆ.
ಸಂದೇಸರಾ ಕುಟುಂಬವು ನೈಜೀರಿಯಾದಲ್ಲಿ ರಿಯಲ್ ಎಸ್ಟೇಟ್ ಮತ್ತು ತೈಲ ಬಾವಿಗಳು ಸೇರಿದಂತೆ ವಿವಿಧ ವ್ಯವಹಾರಗಳನ್ನು ಹೊಂದಿದೆ. ನಿತಿನ್ ಮತ್ತು ಅವರ ಸಹೋದರರು ವಂಚನೆಯ ಆರೋಪ ಹೊತ್ತಿದ್ದಾರೆ ಮತ್ತು ನೈಜೀರಿಯಾದಲ್ಲಿ ಅಧಿಕಾರಿಗಳಿಂದ ತಪ್ಪಿಸಿ ದೇಶದಿಂದ ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿದೆ.
ದುಬೈನಲ್ಲಿ ಆತನ ಬಂಧನದ ಆರಂಭಿಕ ವರದಿಗಳನ್ನು ನಂತರ ನಿರಾಕರಿಸಲಾಗಿದೆ. ಆದರೆ ಭಾರತೀಯ ತನಿಖಾ ಸಂಸ್ಥೆಗಳು ಆತನ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ಗಳನ್ನು ಸಾಧ್ಯತೆಯಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications