ಬಹು ನಿರೀಕ್ಷಿತ ರಾಮಮಂದಿರ ಪ್ರಾಣ ಪ್ರತಿಷ್ಠಾ ಅಂತಿಮವಾಗಿ ಮುಕ್ತಾಯಗೊಂಡಿದೆ. ಶ್ರೀ ರಾಮ ದೇವಲಯ ದೃಶ್ಯವು ಕೂಡಾ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಲವಾರು ನಟರು, ನಟಿಯರು, ಉದ್ಯಮಗಳು, ಗಣ್ಯರು, ರಾಜಕಾರಣಿಗಳು ಈ ಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಿದ್ದಾರೆ.
ಅಯೋಧ್ಯೆಯ ರಾಮಮಂದಿರದಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠೆಯ ಆಚರಣೆಯ ನಡುವೆ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ಎಂಡಿ ಮುಕೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ರಾಮನಿಗೆ 33 ಕೆಜಿ ಚಿನ್ನ ಮತ್ತು ಮೂರು ಚಿನ್ನದ ಕಿರೀಟಗಳನ್ನು ದಾನ ಮಾಡಿದ್ದಾರೆ ಎಂಬ ವರದಿಗಳಿವೆ. ಆದರೆ ನಿಜವಾಗಿಯೂ ದಾನ ಮಾಡಿದ್ದಾರೆಯೇ? ಇಲ್ಲಿದೆ ಮಾಹಿತಿ ಮುಂದೆ ಓದಿ....

ಅಂಬಾನಿ ಕುಟುಂಬ 33 ಕೆಜಿ ಚಿನ್ನ ದಾನ ಮಾಡಿದ್ಯ?
ಮೊದಲೇ ಹೇಳಿದಂತೆ, ರಿಲಯನ್ಸ್ ಇಂಡಸ್ಟ್ರೀಸ್ನ ಎಂಡಿ ಮತ್ತು ಅಧ್ಯಕ್ಷರಾದ ಮುಕೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ಅವರು ಅಯೋಧ್ಯೆಯ ರಾಮಮಂದಿರಕ್ಕೆ ಒಟ್ಟು 33 ಕಿಲೋಗ್ರಾಂಗಳಷ್ಟು ಚಿನ್ನವನ್ನು ದಾನ ಮಾಡಿದ್ದಾರೆ ಎಂದು ಹಲವಾರು ವರದಿಗಳಿವೆ.
ಈ ವರದಿಗಳು ರಾಮಮಂದಿರ ಪ್ರಾಣ ಪ್ರತಿಷ್ಠೆಯ ಮುನ್ನವೇ ಹರಿದಾಡುತ್ತಿವೆ. ಅಂಬಾನಿ ಕುಟುಂಬ 33 ಕೆಜಿ ಚಿನ್ನದ ಜೊತೆಗೆ ಮೂರು ಚಿನ್ನದ ಕಿರೀಟಗಳನ್ನು ದೇವಸ್ಥಾನಕ್ಕೆ ದಾನ ಮಾಡಿದ್ದಾರೆ ಎಂದು ಈ ಸಾಮಾಜಿಕ ಮಾಧ್ಯಮದ ಹೇಳಿಕೆಗಳು ಹೇಳಿವೆ.
ಫಾಕ್ಟ್ ಚೆಕ್ ವಿವರ
ಮುಕೇಶ್ ಮತ್ತು ನೀತಾ ಅಂಬಾನಿ ಅವರು ಅಯೋಧ್ಯೆ ರಾಮಮಂದಿರಕ್ಕೆ ಮೂರು ಚಿನ್ನದ ಕಿರೀಟಗಳು ಮತ್ತು 33 ಕೆಜಿ ಚಿನ್ನವನ್ನು ದಾನ ಮಾಡಿದ್ದಾರೆ ಎಂಬ ಈ ವರದಿಗಳು ನಿಜವಲ್ಲ. ನ್ಯೂಸ್ಚೆಕರ್ ವೆಬ್ಸೈಟ್ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಸದಸ್ಯರೊಂದಿಗೆ ಮಾತನಾಡಿದ್ದು, ಇದೇ ರೀತಿಯ ದೇಣಿಗೆಯನ್ನು ನೀತಾ ಅಂಬಾನಿ, ಮುಕೇಶ್ ಅಂಬಾನಿ ಅಥವಾ ಕುಟುಂಬದ ಯಾವುದೇ ಸದಸ್ಯರು ಉಲ್ಲೇಖಿಸಿಲ್ಲ ಅಥವಾ ನೀಡಿಲ್ಲ ಎಂದು ಖಚಿತಪಡಿಸಿದ್ದಾರೆ. ಇದುವರೆಗೂ ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ನೀಡಿದವರ ಪಟ್ಟಿಯಲ್ಲಿ ಮುಕೇಶ್ ಮತ್ತು ನೀತಾ ಅಂಬಾನಿ ಹೆಸರು ಸೇರ್ಪಡೆಯಾಗಿಲ್ಲ.
ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರೋಪ, ಪ್ರಧಾನಿ ಮೋದಿ ಹೇಳಿಕೆ
ಪ್ರಧಾನಿ ಪ್ರಾಣ ಪ್ರತಿಷ್ಠೆಯಲ್ಲಿ ಭಾಗವಹಿಸಿದ್ದಾರೆ ಮತ್ತು ಮಹಾಮಸ್ತಕಾಭಿಷೇಕದ ವಿಧಿವಿಧಾನಗಳನ್ನು ಸಹ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ 'ಎಕ್ಸ್' (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು) ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, "ಅಯೋಧ್ಯಾ ಧಾಮದಲ್ಲಿ ಶ್ರೀ ರಾಮ್ ಲಾಲಾ ಅವರ ಪ್ರಾಣ ಪ್ರತಿಷ್ಠೆಯ ದಿವ್ಯ ಕ್ಷಣವು ಪ್ರತಿಯೊಬ್ಬರಿಗೂ ಭಾವನಾತ್ಮಕ ಕ್ಷಣವಾಗಿದೆ. ಈ ವಿಶಿಷ್ಟ ಕಾರ್ಯಕ್ರಮದ ಭಾಗವಾಗಿರುವುದು ನನ್ನ ಸೌಭಾಗ್ಯ. ಜೈ ಸಿಯಾರಾಮ್," ಎಂದು ಬರೆದುಕೊಂಡಿದ್ದಾರೆ.


Click it and Unblock the Notifications