ಕಳೆದ ತಿಂಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಯ ದಿನ ಭಾಷಣದಲ್ಲಿ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಕೇಂದ್ರ ಸರ್ಕಾರವು ಹೊಸ ಯೋಜನೆಯ ಮೂಲಕ ನಗರಗಳಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವವರಿಗೆ ಅಗ್ಗದ ಗೃಹ ಸಾಳವನ್ನು ನೀಡುತ್ತದೆ ಎಂದು ಪ್ರಧಾನಿ ಘೋಷಣೆ ಮಾಡಿದ್ದಾರೆ. ವರದಿ ಪ್ರಕಾರ ಈ ಹೊಸ ಯೋಜನೆಯು ಸೆಪ್ಟೆಂಬರ್ 2023 ರಲ್ಲಿ ಪ್ರಾರಂಭವಾಗಲಿದೆ.
"ನಗರಗಳಲ್ಲಿ ಸ್ವಂತ ಮನೆಗಳನ್ನು ಹೊಂದಲು ಬಯಸುವವರಿಗೆ ಬ್ಯಾಂಕ್ ಸಾಲದ ಮೇಲಿನ ಬಡ್ಡಿ ಕಡಿಮೆ ಮಾಡುವ ಯೋಜನೆಯನ್ನು ಸೆಪ್ಟೆಂಬರ್ನಲ್ಲಿ ಪ್ರಾರಂಭಿಸಲಾಗುವುದು," ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಮನೋಜ್ ಜೋಶಿ ಹೇಳಿದ್ದಾರೆ.

ಪ್ರಕ್ರಿಯೆಯಲ್ಲಿರುವ ಹೊಸ ಯೋಜನೆಯ ವಿಧಾನ
ಈ ಮಧ್ಯೆ, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಪತ್ರಿಕಾಗೋಷ್ಠಿಯಲ್ಲಿ ಈ ಹೊಸ ಯೋಜನೆಯ ವಿಧಾನಗಳನ್ನು ರೂಪಿಸಲಾಗುತ್ತಿದೆ. ಈ ತಿಂಗಳಲ್ಲೇ ಪ್ರಾರಂಭಿಸಲಾಗುವುದು ಎಂದು ಹೇಳಿದರು. "ನಾವು ಯೋಜನೆಯ ವಿವರಗಳನ್ನು ಶೀಘ್ರವೇ ನಿಮಗೆ ತಿಳಿಸುತ್ತೇವೆ. ಬಹುತೇಕ ಎಲ್ಲವು ಸಿದ್ಧವಾಗಿದೆ. ಈ ಯೋಜನೆಯನ್ನು ಸೆಪ್ಟೆಂಬರ್ನಲ್ಲಿ ಪೂರ್ಣ ವಿವರವಾಗಿ ಪ್ರಕಟಿಸಲಾಗುವುದು," ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದರು.
ಹೊಸ ಯೋಜನೆ ಮಧ್ಯಮ ವರ್ಗದವರಿಗೆ ಮಾತ್ರ
ನಗರಗಳಲ್ಲಿ ವಾಸಿಸುವ ಆದರೆ ಸ್ವಂತ ಮನೆ ಇಲ್ಲದ ಮಧ್ಯಮ ವರ್ಗದ ಕುಟುಂಬಗಳಿಗೆ ಮಾತ್ರ ಈ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಘೋಷಿಸಿದರು.
ಹೊಸ ಯೋಜನೆ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
"ಮಧ್ಯಮ ವರ್ಗದ ಕುಟುಂಬಗಳು ನಗರಗಳಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿವೆ. ಶೀಘ್ರದಲ್ಲಿಯೇ ಅವರಿಗಾಗಿ ಯೋಜನೆಯೊಂದನ್ನು ಆರಂಭಿಸಲಿದ್ದೇವೆ. ನಗರಗಳಲ್ಲಿನ ಬಾಡಿಗೆ ಮನೆಗಳು, ಅನಧಿಕೃತ ಕಾಲೋನಿಗಳು ಮತ್ತು ಗುಡಿಸಲುಗಳಲ್ಲಿ ವಾಸಿಸುವ ಕುಟುಂಬಗಳಿಗೆ ಸ್ವಂತ ಮನೆ ನಿರ್ಮಿಸಲು ಲಕ್ಷ ರೂಪಾಯಿಗಳ ಸಹಾಯವನ್ನು ನೀಡುವ ಮೂಲಕ ಬ್ಯಾಂಕ್ ಸಾಲದ ಬಡ್ಡಿಯನ್ನು ಕಡಿಮೆ ಮಾಡಲು ನಾವು ನಿರ್ಧರಿಸಿದ್ದೇವೆ," ಎಂದು ಪ್ರಧಾನಿ ಮೋದಿ ಹೇಳಿದರು.
ಕುತೂಹಲಕಾರಿಯಾಗಿ, ಹೊಸ ಯೋಜನೆಯು ಬಾಡಿಗೆ ಮನೆಗಳು, ಕೊಳೆಗೇರಿಗಳು ಅಥವಾ ಚಾಲ್ಗಳು ಮತ್ತು ಅನಧಿಕೃತ ಕಾಲೋನಿಗಳಲ್ಲಿ ನಗರಗಳಲ್ಲಿ ವಾಸಿಸುವ ಕುಟುಂಬಗಳಿಗೆ ಭಾರಿ ಪ್ರಯೋಜನವನ್ನು ನೀಡುತ್ತದೆ. "ಜನರು ತಮ್ಮ ಸ್ವಂತ ಮನೆಗಳನ್ನು ನಿರ್ಮಿಸಲು ಬಯಸಿದರೆ, ನಾವು ಅವರಿಗೆ ಬಡ್ಡಿದರದಲ್ಲಿ ಪರಿಹಾರ ಮತ್ತು ಬ್ಯಾಂಕ್ಗಳಿಂದ ಸಾಲದ ಸಹಾಯವನ್ನು ನೀಡುತ್ತೇವೆ. ಲಕ್ಷ ರೂಪಾಯಿಗಳನ್ನು ಉಳಿಸಲು ಸಹಾಯ ಮಾಡುತ್ತದೆ," ಎಂದು ಪ್ರಧಾನಿ ಹೇಳಿದರು.
ಗಮನಾರ್ಹವಾಗಿ, ಮಾರ್ಚ್ 2022 ರಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳು (ಇಡಬ್ಲ್ಯೂಎಸ್) ಅಥವಾ ಕಡಿಮೆ ಆದಾಯದ ಗುಂಪು (ಎಲ್ಐಜಿ) ಗಾಗಿ ಕ್ರೆಡಿಟ್-ಲಿಂಕ್ಡ್ ಸಬ್ಸಿಡಿ ಯೋಜನೆ (ಸಿಎಲ್ಎಸ್ಎಸ್) ಗೆ ಅನುಗುಣವಾಗಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಸಿಎಲ್ಎಸ್ಎಸ್ನ ಭಾಗವಾಗಿ, ಕೇಂದ್ರವು ಶೇಕಡ 3-6.5ರಷ್ಟು ಬಡ್ಡಿ ಸಬ್ಸಿಡಿ ಮೂಲಕ ತಲಾ 2.67 ಲಕ್ಷ ರೂಪಾಯಿವರೆಗೆ ಪ್ರಯೋಜನವನ್ನು ಒದಗಿಸುತ್ತಿತ್ತು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications